ಗ್ರಾಮ ಪಂಚಾಯತ್ ಹೊಸಂಗಡಿ ಮತ್ತು ರೋಟರಿ ಕ್ಲಬ್ ಸಿದ್ಧಕಟ್ಟೆ ಫಲ್ಗುಣಿ ಮತ್ತು ಹಳೆ ವಿದ್ಯಾರ್ಥಿ ಸಂಘ ಮತ್ತು ಎಸ್.ಡಿ.ಎಂ.ಸಿ ಹಿ.ಪಾ. ಶಾಲೆ ಪಡ್ಡಂದಡ್ಕ ಹಾಗೂ ಅಂಗನವಾಡಿ ಕೇಂದ್ರ ಪಡ್ಡಂದಡ್ಕ ಸಹಭಾಗಿತ್ವದೊಂದಿಗೆ ನೆಲ ಜಲ ಸಂರಕ್ಷಣೆಗಾಗಿ ಹಮ್ಮಿಕೊಂಡಿರುವ ನನ್ನ ಗಿಡ ನನ್ನ ಮರ ನನ್ನ ನೆಲ ನನ್ನ ಜಲ ಸಪ್ತಾಹ ಕಾರ್ಯಕ್ರಮದ ಐದನೇ ದಿನ ಶನಿವಾರ ಪೂರ್ವಾಹ್ನ 9.30 ಘಂಟೆಗೆ ಸರಿಯಾಗಿ ಹಿರಿಯ ಪ್ರಾಥಮಿಕ ಶಾಲೆ ಪಡ್ಡಂದಡ್ಕ ಶಾಲಾ ವಠಾರದಲ್ಲಿ ಪರಿಸರ ಮತ್ತು ಜಲ ಸಂರಕ್ಷಣೆ ಅರಿವು ಕಾರ್ಯಕ್ರಮ ಮತ್ತು ಅಮೃತ ವನದ ಪುನಶ್ಚೇತನ ಮತ್ತು ಪಡ್ಡoದಡ್ಕ ಅಂಗನವಾಡಿಯ ಪೌಷ್ಠಿಕ ತೋಟದ ಪುನಶ್ಚೇತನ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.
ಅಧ್ಯಕ್ಷತೆಯನ್ನು ಪಂಚಾಯತ್ ಅಧ್ಯಕ್ಷರಾದ ಜಗದೀಶ್ ಹೆಗ್ಡೆ ವಹಿಸಿದ್ದರು. ಪಂಚಾಯತ್ ಸದಸ್ಯರಾದ ಹರಿಪ್ರಸಾದ್ ಠಿ, ನಾಗರತ್ನ, ಪ್ರಕಾಶ್ ದೇವಾಡಿಗ, ರೋಟರಿ ತರಬೇತುದಾರ ಖಣಟಿ ರಾಜೇಶ್ ನೆಲ್ಯಾಡಿ, ಪಿಡಿಒ ಗಣೇಶ್ ಶೆಟ್ಟಿ, ಅಧ್ಯಕ್ಷರಾದ ಶಬೀರ್, ಹಳೇ ವಿಧ್ಯಾರ್ಥಿ ಸಂಘದ ಅಧ್ಯಕ್ಷರಾದ ರಮೇಶ್ ಹೆಗ್ಡೆ, ಗುತ್ತಿಗೆದಾರರಾದ ಮಹಮ್ಮದ್ , ಶಾಲಾ ಶಿಕ್ಷಕರು, ಅಂಗನವಾಡಿ ಶಿಕ್ಷಕಿ ಸುಶೀಲ, ಸಹಾಯಕಿ, ಪೋಷಕರು, ವಿಧ್ಯಾರ್ಥಿಗಳು ಹಾಗೂ ಆಳ್ವಾಸ್ ವಿಧ್ಯಾರ್ಥಿಗಳು ಭಾಗವಹಿಸಿದ್ದರು. ಪಡ್ಡಂದಡ್ಕ ಶಾಲಾ ವಠಾರದಲ್ಲಿ ರಚಿಸಲಾದ 75 ವಿವಿಧ ಜಾತಿಯ ಗಿಡಗಳನ್ನು ಒಳಗೊಂಡ ಅಮೃತ ವನಕ್ಕೆ ಜೈವಿಕ ಗೊಬ್ಬರ ಮತ್ತು ಕಳೆ ಕೀಳುವ ಮೂಲಕ ಪುನಶ್ಚೇತನಗೊಳಿಸಲಾಯಿತು.
ನನ್ನ ಗಿಡ ನನ್ನ ಮರ ಯೋಜನೆ ಬಗ್ಗೆ ಪಿಡಿಒ ಮತ್ತು ಹರಿಪ್ರಸಾದ್ ಮಾಹಿತಿ ನೀಡಿದರು. ಅಂಗನವಾಡಿಯಲ್ಲಿ ಪೋಷಕರಿಗೆ ನೆಲ ಜಲ ಸಂರಕ್ಷಣೆಯ ಬಗ್ಗೆ ಮಾಹಿತಿ ನೀಡಲಾಯಿತು.
ಬಾವಿಗೆ ಬಿದ್ದ ಹೆಣ್ಣು ಮಗುವನ್ನು ಸ್ಥಳೀಯ ಯುವಕ ರಕ್ಷಿಸಿದ ಘಟನೆ ವರದಿಯಾಗಿದೆ. ಉಳ್ಳಾಲದಲ್ಲಿ ಆಟವಾಡುತ್ತಾ ಎರಡೂವರೆ ಹರೆಯದ ಮಗುವೊಂದು ದಂಡೆಯಿಲ್ಲದ…
ಸಮಾಜದಲ್ಲಿ ಒಡಕುಂಟು ಮಾಡಿ, ದ್ವೇಷವನ್ನು ಬಿತ್ತುವ ಹಾಗೂ ಶಾಂತಿಯನ್ನು ಕದಡಲು ಪ್ರಚೋದನಾತ್ಮಕ ಭಾಷಣವನ್ನು ಯಾರು ಮಾಡಿದರೂ, ಅವರ ಮೇಲೆ ಪ್ರಕರಣ…
ಕರಾವಳಿಯ ಗಂಡುಕಲೆ ಎಂದೇ ಪ್ರಸಿದ್ಧ ಪಡೆದಿರುವ ಯಕ್ಷಗಾನ ಉತ್ತರ ಪ್ರದೇಶದ ಶ್ರೀರಾಮ ಜನ್ಮ ಭೂಮಿ ಅಯೋಧ್ಯೆಯಲ್ಲಿ ಪ್ರಪ್ರಥಮ ಬಾರಿಗೆ ಪ್ರದರ್ಶನವಾಗಿದೆ.…
ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ' ಕೃತಿಯನ್ನು ಬಿಡುಗಡೆ ಮಾಡಲಾಯಿತು. ಅಮೃತ ಪ್ರಕಾಶನದ 45ನೇ ಸರಣಿ ಕೃತಿ ಕೊಡಗಿನ ಚಿತ್ರ…
ಕಳೆದ ವಾರಗಳಿಂದೀಚೆಗೆ ಸುರಿಯುತ್ತಿರುವ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿಯಾಗಿದೆ. ಇಡ್ಕಿದು ಗ್ರಾಮದ ಬಡಜ ಸುಧಾ ಎಂಬವರ…
ಕೇಂದ್ರ ಸರಕಾರದ ಪಿಎಂಇಜಿಪಿ ಯೋಜನೆ ಅಡಿಯಲ್ಲಿ ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಕೋಟ್ಯಂತರ ರೂ. ಹಣ ವಂಚಿಸಿರುವ ಪ್ರಕರಣಕ್ಕೆ ಸಂಬಂಧಿಸಿ…