ಗ್ರಾಮ ಪಂಚಾಯತ್ ಹೊಸಂಗಡಿ ಮತ್ತು ರೋಟರಿ ಕ್ಲಬ್ ಸಿದ್ಧಕಟ್ಟೆ ಫಲ್ಗುಣಿ ಮತ್ತು ಹಳೆ ವಿದ್ಯಾರ್ಥಿ ಸಂಘ ಮತ್ತು ಎಸ್.ಡಿ.ಎಂ.ಸಿ ಹಿ.ಪಾ. ಶಾಲೆ ಪಡ್ಡಂದಡ್ಕ ಹಾಗೂ ಅಂಗನವಾಡಿ ಕೇಂದ್ರ ಪಡ್ಡಂದಡ್ಕ ಸಹಭಾಗಿತ್ವದೊಂದಿಗೆ ನೆಲ ಜಲ ಸಂರಕ್ಷಣೆಗಾಗಿ ಹಮ್ಮಿಕೊಂಡಿರುವ ನನ್ನ ಗಿಡ ನನ್ನ ಮರ ನನ್ನ ನೆಲ ನನ್ನ ಜಲ ಸಪ್ತಾಹ ಕಾರ್ಯಕ್ರಮದ ಐದನೇ ದಿನ ಶನಿವಾರ ಪೂರ್ವಾಹ್ನ 9.30 ಘಂಟೆಗೆ ಸರಿಯಾಗಿ ಹಿರಿಯ ಪ್ರಾಥಮಿಕ ಶಾಲೆ ಪಡ್ಡಂದಡ್ಕ ಶಾಲಾ ವಠಾರದಲ್ಲಿ ಪರಿಸರ ಮತ್ತು ಜಲ ಸಂರಕ್ಷಣೆ ಅರಿವು ಕಾರ್ಯಕ್ರಮ ಮತ್ತು ಅಮೃತ ವನದ ಪುನಶ್ಚೇತನ ಮತ್ತು ಪಡ್ಡoದಡ್ಕ ಅಂಗನವಾಡಿಯ ಪೌಷ್ಠಿಕ ತೋಟದ ಪುನಶ್ಚೇತನ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.
ಅಧ್ಯಕ್ಷತೆಯನ್ನು ಪಂಚಾಯತ್ ಅಧ್ಯಕ್ಷರಾದ ಜಗದೀಶ್ ಹೆಗ್ಡೆ ವಹಿಸಿದ್ದರು. ಪಂಚಾಯತ್ ಸದಸ್ಯರಾದ ಹರಿಪ್ರಸಾದ್ ಠಿ, ನಾಗರತ್ನ, ಪ್ರಕಾಶ್ ದೇವಾಡಿಗ, ರೋಟರಿ ತರಬೇತುದಾರ ಖಣಟಿ ರಾಜೇಶ್ ನೆಲ್ಯಾಡಿ, ಪಿಡಿಒ ಗಣೇಶ್ ಶೆಟ್ಟಿ, ಅಧ್ಯಕ್ಷರಾದ ಶಬೀರ್, ಹಳೇ ವಿಧ್ಯಾರ್ಥಿ ಸಂಘದ ಅಧ್ಯಕ್ಷರಾದ ರಮೇಶ್ ಹೆಗ್ಡೆ, ಗುತ್ತಿಗೆದಾರರಾದ ಮಹಮ್ಮದ್ , ಶಾಲಾ ಶಿಕ್ಷಕರು, ಅಂಗನವಾಡಿ ಶಿಕ್ಷಕಿ ಸುಶೀಲ, ಸಹಾಯಕಿ, ಪೋಷಕರು, ವಿಧ್ಯಾರ್ಥಿಗಳು ಹಾಗೂ ಆಳ್ವಾಸ್ ವಿಧ್ಯಾರ್ಥಿಗಳು ಭಾಗವಹಿಸಿದ್ದರು. ಪಡ್ಡಂದಡ್ಕ ಶಾಲಾ ವಠಾರದಲ್ಲಿ ರಚಿಸಲಾದ 75 ವಿವಿಧ ಜಾತಿಯ ಗಿಡಗಳನ್ನು ಒಳಗೊಂಡ ಅಮೃತ ವನಕ್ಕೆ ಜೈವಿಕ ಗೊಬ್ಬರ ಮತ್ತು ಕಳೆ ಕೀಳುವ ಮೂಲಕ ಪುನಶ್ಚೇತನಗೊಳಿಸಲಾಯಿತು.
ನನ್ನ ಗಿಡ ನನ್ನ ಮರ ಯೋಜನೆ ಬಗ್ಗೆ ಪಿಡಿಒ ಮತ್ತು ಹರಿಪ್ರಸಾದ್ ಮಾಹಿತಿ ನೀಡಿದರು. ಅಂಗನವಾಡಿಯಲ್ಲಿ ಪೋಷಕರಿಗೆ ನೆಲ ಜಲ ಸಂರಕ್ಷಣೆಯ ಬಗ್ಗೆ ಮಾಹಿತಿ ನೀಡಲಾಯಿತು.
ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಪೋಷಕ ಸದಸ್ಯರೂ, ಬಂಟ್ಸ್ ಅಸೋಸಿಯೇಷನ್ ನಾರ್ತ್ ಅಮೆರಿಕಾ (BANA) ಅಧ್ಯಕ್ಷರೂ ಆದ ಶ್ರೀ ಮಂಜುನಾಥ್…
ಉಡುಪಿ ತಾಲೂಕಿನಲ್ಲಿ ಕಡಲ್ಕೊರೆತದಿಂದ ಹಾನಿಗೊಳಗಾಗಿರುವ ಹೆಜಮಾಡಿ, ಪಡುಬಿದ್ರಿ, ಎರ್ಮಾಳು, ಕಾಪು, ಪೊಲಿಪು ಹಾಗೂ ಕಟಪಾಡಿ-ಮಟ್ಟು ಪ್ರದೇಶಗಳಿಗೆ ಜಿಲ್ಲಾಧಿಕಾರಿ ಸ್ವರೂಪಾ ಟಿ.ಕೆ.…
ಮಳೆ ಸುರಿದರೆ ಸಾಕು, ಬಂಟ್ವಾಳ ತಾಲೂಕಿನ ಮಾಣಿ ಸಮೀಪದ ಪೆರಾಜೆ ಗ್ರಾಮದ ಜೋಗಿಬೆಟ್ಟು ರಸ್ತೆಯಲ್ಲಿ ಸಂಚಾರ ದುಸ್ತರವಾಗುತ್ತಿದೆ. ರಾಷ್ಟ್ರೀಯ ಹೆದ್ದಾರಿಗೆ…
ಭಾರತ ಮತ್ತು ಅಮೆರಿಕಾಗಳು ಅನೇಕ ಸಾಮಾನ್ಯ ಅಂಶಗಳನ್ನು ಹೊಂದಿವೆ. ಅಮೆರಿಕಾ ಅವಕಾಶಗಳ ನಗರ. ಇಲ್ಲಿಗೆ ವಲಸೆ ಬಂದು ವಾಸಿಸುತ್ತಿರುವ ಭಾರತೀಯರು…
ವಾಹನ ದಟ್ಟಣೆ ಹೆಚ್ಚುತ್ತಿರುವ ನಗರದಲ್ಲಿ ಸುಗಮ ಸಂಚಾರಕ್ಕೆ ಸ್ಮಾರ್ಟ್ ಸಿಟಿ ಯೋಜನೆಯಡಿ 181ಕ್ಕೂ ಅಧಿಕ ಎಐ ಸಿ.ಸಿ ಕ್ಯಾಮರಾಗಳನ್ನು ಅಳವಡಿಸಲಾಗಿದೆ.…
ರಾಯಿ ಗ್ರಾಮದ ಪಾಂಚಕೋಡಿ ನಿವಾಸಿ ಜೋಸೆಫ್ ಪಿಂಟೋ ಎಂಬವರ ಪುತ್ರ ಜೀವನ್ ಪಿಂಟೊ ಅವರ ಚಪ್ಪಲಿ ಮತ್ತು ಟಾರ್ಚ್ ಶನಿವಾರ…