ಗ್ರಾಮ ಪಂಚಾಯತ್ ಹೊಸಂಗಡಿ ಮತ್ತು ರೋಟರಿ ಕ್ಲಬ್ ಸಿದ್ಧಕಟ್ಟೆ ಫಲ್ಗುಣಿ ಮತ್ತು ಹಳೆ ವಿದ್ಯಾರ್ಥಿ ಸಂಘ ಮತ್ತು ಎಸ್.ಡಿ.ಎಂ.ಸಿ ಹಿ.ಪಾ. ಶಾಲೆ ಪಡ್ಡಂದಡ್ಕ ಹಾಗೂ ಅಂಗನವಾಡಿ ಕೇಂದ್ರ ಪಡ್ಡಂದಡ್ಕ ಸಹಭಾಗಿತ್ವದೊಂದಿಗೆ ನೆಲ ಜಲ ಸಂರಕ್ಷಣೆಗಾಗಿ ಹಮ್ಮಿಕೊಂಡಿರುವ ನನ್ನ ಗಿಡ ನನ್ನ ಮರ ನನ್ನ ನೆಲ ನನ್ನ ಜಲ ಸಪ್ತಾಹ ಕಾರ್ಯಕ್ರಮದ ಐದನೇ ದಿನ ಶನಿವಾರ ಪೂರ್ವಾಹ್ನ 9.30 ಘಂಟೆಗೆ ಸರಿಯಾಗಿ ಹಿರಿಯ ಪ್ರಾಥಮಿಕ ಶಾಲೆ ಪಡ್ಡಂದಡ್ಕ ಶಾಲಾ ವಠಾರದಲ್ಲಿ ಪರಿಸರ ಮತ್ತು ಜಲ ಸಂರಕ್ಷಣೆ ಅರಿವು ಕಾರ್ಯಕ್ರಮ ಮತ್ತು ಅಮೃತ ವನದ ಪುನಶ್ಚೇತನ ಮತ್ತು ಪಡ್ಡoದಡ್ಕ ಅಂಗನವಾಡಿಯ ಪೌಷ್ಠಿಕ ತೋಟದ ಪುನಶ್ಚೇತನ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.
ಅಧ್ಯಕ್ಷತೆಯನ್ನು ಪಂಚಾಯತ್ ಅಧ್ಯಕ್ಷರಾದ ಜಗದೀಶ್ ಹೆಗ್ಡೆ ವಹಿಸಿದ್ದರು. ಪಂಚಾಯತ್ ಸದಸ್ಯರಾದ ಹರಿಪ್ರಸಾದ್ ಠಿ, ನಾಗರತ್ನ, ಪ್ರಕಾಶ್ ದೇವಾಡಿಗ, ರೋಟರಿ ತರಬೇತುದಾರ ಖಣಟಿ ರಾಜೇಶ್ ನೆಲ್ಯಾಡಿ, ಪಿಡಿಒ ಗಣೇಶ್ ಶೆಟ್ಟಿ, ಅಧ್ಯಕ್ಷರಾದ ಶಬೀರ್, ಹಳೇ ವಿಧ್ಯಾರ್ಥಿ ಸಂಘದ ಅಧ್ಯಕ್ಷರಾದ ರಮೇಶ್ ಹೆಗ್ಡೆ, ಗುತ್ತಿಗೆದಾರರಾದ ಮಹಮ್ಮದ್ , ಶಾಲಾ ಶಿಕ್ಷಕರು, ಅಂಗನವಾಡಿ ಶಿಕ್ಷಕಿ ಸುಶೀಲ, ಸಹಾಯಕಿ, ಪೋಷಕರು, ವಿಧ್ಯಾರ್ಥಿಗಳು ಹಾಗೂ ಆಳ್ವಾಸ್ ವಿಧ್ಯಾರ್ಥಿಗಳು ಭಾಗವಹಿಸಿದ್ದರು. ಪಡ್ಡಂದಡ್ಕ ಶಾಲಾ ವಠಾರದಲ್ಲಿ ರಚಿಸಲಾದ 75 ವಿವಿಧ ಜಾತಿಯ ಗಿಡಗಳನ್ನು ಒಳಗೊಂಡ ಅಮೃತ ವನಕ್ಕೆ ಜೈವಿಕ ಗೊಬ್ಬರ ಮತ್ತು ಕಳೆ ಕೀಳುವ ಮೂಲಕ ಪುನಶ್ಚೇತನಗೊಳಿಸಲಾಯಿತು.
ನನ್ನ ಗಿಡ ನನ್ನ ಮರ ಯೋಜನೆ ಬಗ್ಗೆ ಪಿಡಿಒ ಮತ್ತು ಹರಿಪ್ರಸಾದ್ ಮಾಹಿತಿ ನೀಡಿದರು. ಅಂಗನವಾಡಿಯಲ್ಲಿ ಪೋಷಕರಿಗೆ ನೆಲ ಜಲ ಸಂರಕ್ಷಣೆಯ ಬಗ್ಗೆ ಮಾಹಿತಿ ನೀಡಲಾಯಿತು.
ನಿಟ್ಟೆ ವಿಶ್ವವಿದ್ಯಾನಿಲಯದ ನಿಟ್ಟೆ ಇನ್ಸ್ಟಿಟ್ಯೂಟ್ ಆಫ್ ಕಮ್ಯುನಿಕೇಷನ್ ವತಿಯಿಂದ ಹಮ್ಮಿಕೊಂಡಿದ್ದ ಎರಡು ದಿನಗಳ ಅಂತರರಾಷ್ಟ್ರೀಯ ಸಮಾವೇಶ 2026 ಬುಧವಾರ ಸಮಾಪನಗೊಂಡಿತು.…
ಕಾಲೇಜು ಪ್ರವಾಸ ಹೊರಟಿದ್ದ ಬಸ್ಸೊಂದು ರಸ್ತೆ ಬದಿ ನಿಂತಿದ್ದ ಟ್ಯಾಂಕರ್ ಮತ್ತು ಲಾರಿಗೆ ಢಿಕ್ಕಿ ಹೊಡೆದ ಪರಿಣಾಮ ಬಸ್ಸಿನಲ್ಲಿದ್ದ ಇಬ್ಬರು…
2022ರಲ್ಲಿ ಹಿರಿಯಡಕ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ತಾಯಿ-ಮಗಳ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗೆ ಜೀವಾವಧಿ ಶಿಕ್ಷೆ ವಿಧಿಸಿ ಉಡುಪಿ…
ಸುಳ್ಯ ತಾಲೂಕಿನ ಅರಂತೋಡು ಗ್ರಾಮ ಪಂಚಾಯತ್ ವ್ಯಾಪ್ತಿಯ ಮಾಣಿ ಮೈಸೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಕೆ.ಎಸ್.ಆರ್.ಟಿ.ಸಿ ಸುಳ್ಯ ಕೊಯನಾಡು ಸರ್ವಿಸ್ ಬಸ್ಸು…
ನದಿಯಲ್ಲಿ ಸ್ನಾನ ಮಾಡುಲು ತೆರಳಿದ್ದ ವ್ಯಕ್ತಿ ಕಾಲು ಜಾರಿ ಬಿದ್ದು ಸಾವನ್ನಪ್ಪಿದ ಘಟನೆ ಹಾವೇರಿಯ ಕಿರಗೆರೆ ಗ್ರಾಮದ ಬಳಿ ಇರುವ…
ಗಾಜಿಯಾಬಾದ್ನ ಇಂದಿರಾಪುರಂ ಪ್ರದೇಶದ ಗೌರ್ ಗ್ರೀನ್ ಅವೆನ್ಯೂ ಹೌಸಿಂಗ್ ಸೊಸೈಟಿಯ ಒಂಭತ್ತನೇ ಮಹಡಿಯಲ್ಲಿ ಭಾರೀ ಅಗ್ನಿ ಅವಘಡ ಸಂಭವಿಸಿದೆ. ಬೆಳಿಗ್ಗೆ…