ಜನ ಮನದ ನಾಡಿ ಮಿಡಿತ

Advertisement

ಕಿನ್ನಿಗೋಳಿ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ನಾಗರಾಜ್ ಅವರಿಗೆ ಘಟಕ ನಿರ್ಮಾಣ ಮಾಡುವುದನ್ನು ನಿಲ್ಲಿಸುವಂತೆ ಮನವಿ

ಬಜಪೆಯ ತ್ಯಾಜ್ಯ ವಸ್ತುಗಳನ್ನು ಮೆನ್ನಬೆಟ್ಟು ಗ್ರಾಮದಲ್ಲಿರುವ 17 ಎಕರೆ ಗೋಮಾಳ ಜಮೀನಿನಲ್ಲಿ ಘಟಕ ನಿರ್ಮಾಣ ಮಾಡುವುದನ್ನು ತಡೆಗಟ್ಟುವುದು ಮತ್ತು ಈ ಜಮೀನಿನಲ್ಲಿ ದಾಖಲೆಯಾಗಿರುವ ಮಂಜೂರಾತಿಯನ್ನು ರದ್ದು ಮಾಡುವಂತೆ ಮಾನ್ಯ ಜಿಲ್ಲಾಧಿಕಾರಿಗೆ ಮನವಿಯನ್ನು ನೀಡುವ ಹಾಗೂ ಘಟಕ ವಿರೋಧಿಸುವ ಪ್ರತಿಭಟನಾ ಸಭೆ ಕಿನ್ನಿಗೋಳಿ ಪಟ್ಟಣ ಪಂಚಾಯತ್ ನಲ್ಲಿ ನಡೆಯಿತು.

ಈ ಪ್ರತಿಭಟನೆಯಲ್ಲಿ ಸೋಂದಾ ಭಾಸ್ಕರ ಭಟ್, ಸಮಿತಿಯ ಸಂಚಾಲಕ ಸಂಜೀವ ಮಡಿವಾಳ ಕಟೀಲು, ನಿವ್ರತ ಶಿಕ್ಷಕರಾದ ಸೋಂದಾ ಭಾಸ್ಕರ ಭಟ್, ಜಿಲ್ಲಾ ಪಂಚಾಯತ್ ಮಾಜಿ ಸದಸ್ಯರಾದ ಈಶ್ವರ ಕಟೀಲು, ಭುವನಾಭಿರಾಮ ಉಡುಪ, ಜಿಲ್ಲಾ ಪಂಚಾಯತ್ ಮಾಜಿ ಸದಸ್ಯರಾದ ಶೈಲಾ ಸಿಕ್ವೇರಾ, ಗ್ರಾಮ ಪಂಚಾಯತ್ ಮಾಜಿ ಸದಸ್ಯರಾದ ಸುನೀಲ್ ಸಿಕ್ವೇರಾ, ಸ್ಟ್ಯಾನಿ ಪಿಂಟೋ, ಸಂತಾನ್ ಡಿಸೋಜ,ಕಿರಣ್ ಶೆಟ್ಟಿ,ಧನಂಜಯ ಶೆಟ್ಟಿಗಾರ್,ಅನೀತಾ,ರಾಜೀವಿ,ಸಾಮಾಜಿಕ ಕಾರ್ಯಕರ್ತರಾದ ಕುಶಲ ಬಲ್ಲಣ,ಬೀದಿ ಬದಿ ವ್ಯಾಪಾರಸ್ಥರ ಸಂಘದ ಅಧ್ಯಕ್ಷರಾದ ಗೋವಿಂದ, ಸುಕುಮಾರ್ ಗಿಡಿಗೆರೆ ಕಟೀಲು,ಕೊಂಡೇಲ ಗಿಡಿಗೆರೆ ಪರಿಸರದ ಸಂಘಸಂಸ್ಥೆಗಳ ಜನಪ್ರತಿನಿಧಿಗಳು ಭಾಗವಹಿಸಿದ್ದರು.

ಇದೇ ಸಂದರ್ಭದಲ್ಲಿ ಕಿನ್ನಿಗೋಳಿ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ನಾಗರಾಜ್ ಅವರಿಗೆ ಘಟಕ ನಿರ್ಮಾಣ ಮಾಡುವುದನ್ನು ನಿಲ್ಲಿಸುವಂತೆ ಮನವಿ ಸಲ್ಲಿಸಲಾಯಿತು.

Leave a Reply

Your email address will not be published. Required fields are marked *

ದಕ್ಷಿಣ ಕನ್ನಡ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿಗೆ ಭಾಜನರಾದ ಡಾ. ಮಮತಾ ಪಿ. ಶೆಟ್ಟಿ..!

ಮಂಗಳೂರು: ಮಾಧ್ಯಮ ಮಿತ್ರ ನಾಗರಾಜ್ ಅನಾರೋಗ್ಯದಿಂದ ನಿಧನ

ಆಂಬ್ಯುಲೆನ್ಸ್ ವಾಹನವೊಂದಕ್ಕೆ ಸೈಡ್ ಬಿಡದ ಸ್ಕೂಟರ್ ಸವಾರನ ಬಂಧನ

ಮಂಗಳೂರು: ಝಕರಿಯಾ ಜೋಕಟ್ಟೆ ಕನ್ನಡ ರಾಜ್ಯೋತ್ಸವ ಪ್ರಶಸ್ತಿಗೆ ಆಯ್ಕೆ

ಮಂಗಳೂರು: ಸೇತುವೆ ಬಳಿ ನಾಪತ್ತೆಯಾದ ಆಟೋ ಚಾಲಕನ ಶವ ಪತ್ತೆ….!

ಮಂಗಳೂರು: ವಂಚನೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿ ದಂಪತಿಯ ಬಂಧನ..!

ಕಡಬ: ಮದುವೆಯ ವಾಹನ ಪಲ್ಟಿ; 20ಕ್ಕೂ ಅಧಿಕ ಮಂದಿಗೆ ಗಾಯ..!

ಹುಣಸೂರು: ಜಮೀನಿನಲ್ಲಿ ಬಿದ್ದಿದ್ದ ಕರೆಂಟ್ ತಂತಿ ಸ್ಪರ್ಶ, ತಾಯಿ- ಮಗ ಬಲಿ…!

ಬಂಟ್ವಾಳ: ಬಿ.ಸಿ.ರೋಡ್ ನಲ್ಲಿರುವ ಮೆಸ್ಕಾಂ ಭವನದಲ್ಲಿ ಜನಸಂಪರ್ಕ ಸಭೆ..!

error: Content is protected !!