ಮಂಗಳೂರು: ಬಜಪೆ ಠಾಣೆಯ ಕೆಲವೆಡೆ ಶನಿವಾರ ನಡೆದ ಮನೆ ಕಳವು ಪ್ರಕರಣಗಳಲ್ಲಿ ಇಬ್ಬರು ಆರೋಪಿಗಳನ್ನು ಬಜಪೆ ಪೊಲೀಸರು ಬಂಧಿಸಿದ್ದು, ಸುಮಾರು ರೂ. 5 ಲಕ್ಷ. ಮೌಲ್ಯದ ಚಿನ್ನಾಭರಣಗಳನ್ನು ವಶಪಡಿಸಿಕೊಳ್ಳಲಾಗಿದೆ. ಸುರತ್ಕಲ್ ಚೊಕ್ಕಬೆಟ್ಟು ನಿವಾಸಿ ತೌಸೀಫ್ ಅಹ್ಮದ್ (34), ಕಸಬಾ ಬೆಂಗ್ರೆ ನಿವಾಸಿ ಮೊಹಮ್ಮದ್ ಫರಾಝ್ (27) ಬಂಧಿತ ಆರೋಪಿಗಳು.
ಮಾಹಿತಿ ಪಡೆದ ಬಜ್ಪೆ ಠಾಣೆ ಸಬ್ ಇನ್ಸ್ ಪೆಕ್ಟರ್ ಗುರಪ್ಪ ಕಾಂತಿ ನೇತೃತ್ವದ ತಂಡ ಸೆ. 29ರಂದು ಸಂಜೆ 4 ಗಂಟೆ ಸುಮಾರಿಗೆ ಪಣಂಬೂರಿನ ಕುದುರೆಮುಖ ಜಂಕ್ಷನ್ ಬಳಿ ತೌಸೀಫ್ ಅಹ್ಮದ್ ಮತ್ತು ಮೊಹಮ್ಮದ್ ಫರಾಝ್ ಅವರನ್ನು ಬಂಧಿಸಿ ವಿಚಾರಣೆ ನಡೆಸಿತು.
ಬಳಿಕ ಅವರಿಂದ ಸುಮಾರು 5 ಲಕ್ಷ ರೂ. ಮೌಲ್ಯದ 75 ಗ್ರಾಂ ಚಿನ್ನಾಭರಣ ಹಾಗೂ ಕಳ್ಳತನಕ್ಕೆ ಬಳಸಿದ್ದ ವಾಹನ (ಬೈಕ್) ವಶಪಡಿಸಿಕೊಳ್ಳಲಾಗಿದೆ.
ಮಂಗಳೂರು ನಗರ ಪೊಲೀಸ್ ಅನುಪಮ್ ಅಗರವಾಲ್ ಅವರ ಮಾರ್ಗದರ್ಶನದಂತೆ ಡಿಸಿಪಿಗಳಾದ ಸಿದ್ಧಾರ್ಥ ಗೋಯೆಲ್, ದಿನೇಶ್ ಕುಮಾರ್ ಅವರ ನಿರ್ದೇಶನದಂತೆ ಮಂಗಳೂರು ಉತ್ತರ ಉಪವಿಭಾಗ ಎಸಿಪಿ ಮನೋಜ್ ಕುಮಾರ್ ಮತ್ತು ಬಜಪೆ ಪೊಲೀಸ್ ನಿರೀಕ್ಷಕ ಗುರುರಾಜ್ ಅವರ ನೇತೃತ್ವದಲ್ಲಿ ಉಪನಿರೀಕ್ಷಕರುಗಳಾದ ಗುರಪ್ಪ ಕಾಂತಿ, ರೇವಣಸಿದ್ದಪ್ಪ, ಕುಮಾರೇಶನ್, ಲತಾ, ಎ ಎಸ್ ಐ ರಾಮ ಪೂಜಾರಿ, ರಶೀದಾ ಶೇಖ್, ಸುಜನ್, ದುರ್ಗಾಪ್ರಸಾದ್ ಶೆಟ್ಟಿ, ಮಂಜುನಾಥ, ಬಸವರಾಜ್ ಪಾಟೀಲ್, ಜಗದೀಶ್, ದಯಾನಂದ, ಮಧು, ಅನಿಲ್, ಕೆಂಚಪ್ಪ ಮತ್ತಿತರರು ಕಾರ್ಯಾಚರಣೆ ನಡೆಸಿ ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಯಕ್ಷಧ್ರುವ ಪಟ್ಲ ಫೌಂಡೇಷನ್ ಮಂಗಳೂರು ಇದರ ಜೊತೆ ಕಾರ್ಯದರ್ಶಿ ರವಿ ಶೆಟ್ಟಿ ಅಶೋಕ್ ನಗರ ಅಪಘಾತದಿಂದ ಮಂಗಳವಾರ (ಜು.21) ಮುಂಜಾನೆ…
ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದ ದಾಸೋಟ್ಟು-ಕುಕ್ಕಾಜೆ ನಿವಾಸಿ ರಮೇಶ್ ಪೂಜಾರಿ ಅವರ ಮನೆಯ ಹಿಂಭಾಗಕ್ಕೆ ಹೊಂದಿಕೊಂಡಿದ್ದ ಬಚ್ಚಲು ಮನೆ ಹಾಗೂ…
ಪೊಲೀಸ್ ಇಲಾಖೆಯ ನಿಜವಾದ ಕರ್ತವ್ಯನಿಷ್ಠೆ, ಸಮಯಪ್ರಜ್ಞೆ ಮತ್ತು ಮಾನವೀಯತೆಯ ಅಪರೂಪದ ಉದಾಹರಣೆಯೊಂದು ಸೂರಿಕುಮೇರ್ ಪೆಟ್ರೋಲ್ ಬಂಕ್ ಸಮೀಪದಲ್ಲಿ ನಡೆದ ಅಪಘಾತದ…
ವಿವಾಹಿತ ಮಹಿಳೆಯೊಬ್ಬರು ಮನೆಯಲ್ಲಿಯೇ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮೂಡಬಿದರೆಯ ಮಿಜಾರು ಕೊಪ್ಪದಕುಮೇರಿಯಲ್ಲಿ ಸಂಜೆ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ…
ನಿಯಂತ್ರಣ ತಪ್ಪಿದ ಟಿಪ್ಪರ್ ಲಾರಿಯೊಂದು ರಸ್ತೆ ಬದಿಯ ಮರವೊಂದಕ್ಕೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಗಂಭೀರ ಗಾಯಗೊಂಡ ಘಟನೆ ವಿಟ್ಲ…
ಶುಕ್ರವಾರ ಸಂಜೆ ಬೀಸಿದ ಬಿರುಗಾಳಿ ಮಳೆಗೆ ರಾಷ್ಟ್ರೀಯ ಹೆದ್ದಾರಿ ಮಾಣಿ ಬೊಳ್ಳುಕಲ್ಲಿನಿಂದ ಪೆರಾಜೆ ಶ್ರೀ ರಾಮಚಂದ್ರಾಪುರ ಮಠಕ್ಕೆ ಹೋಗುವ ಕಮಲ…