ಜನ ಮನದ ನಾಡಿ ಮಿಡಿತ

Advertisement

ನನ್ನ ಮಣ್ಣು – ನನ್ನ ದೇಶ ಅಭಿಯಾನಕ್ಕೆ ಚಾಲನೆ; ದೇಶ ಪ್ರೇಮದ ಜಾಗೃತಿ ಸದಾ ಇರಲಿ: ಶ್ರೀ ಮಹೇಶ್ ಸುವರ್ಣ

ಭಾರತ ಸರಕಾರ ಯುವ ಕಾರ್ಯ ಮತ್ತು ಕ್ರೀಡಾ ಸಚಿವಾಲಯ, ನೆಹರು ಯುವ ಕೇಂದ್ರ ಮಂಗಳೂರು, ಇವರುಗಳ ಮಾರ್ಗದರ್ಶನದಲ್ಲಿ ದೆಹಲಿಯ ಕರ್ತವ್ಯ ಪಥದಲ್ಲಿ ನಿರ್ಮಾಣವಾಗುತ್ತಿರುವ ಅಮೃತ ವಾಟಿಕಾ ವನಕ್ಕೆ ನೆಲದ ಮಣ್ಣು ಕಳಿಸುವ “ನನ್ನ ಮಣ್ಣು – ನನ್ನ ದೇಶ” ಅಭಿಯಾನಕ್ಕೆ ಜಿಲ್ಲಾ, ರಾಜ್ಯ ,ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಹಾಗೂ ದ.ಕ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ, ಶ್ರೀ ಸುಬ್ರಹ್ಮಣ್ಯ ಮಹಾಗಣಪತಿ ಸ್ಫೋರ್ಟ್ಸ್ ಕ್ಲಬ್ (ರಿ) ತೋಕೂರು, ಹಳೆಯಂಗಡಿ ಇದರ ಸಭಾಂಗಣದಲ್ಲಿ ಚಾಲನೆ ನೀಡಲಾಯಿತು.

ದೇಶ ಪ್ರೇಮದ ಜಾಗೃತಿ ಸದಾ ನಮ್ಮಲ್ಲಿರಬೇಕು , ಸೈನಿಕರ ಆತ್ಮ ವಿಶ್ವಾಸವನ್ನು ಹೆಚ್ಚಿಸುವ ಕಾರ್ಯದಲ್ಲಿ ಯುವ ಜನತೆಯು ತೊಡಗಿಸಿಕೊಳ್ಳಬೇಕು ,ದೇಶದ ಮಣ್ಣಿನ ಸತ್ಯದ ಅರಿವು ಎಲ್ಲರ ಮನದಲ್ಲಿ ಮೂಡಬೇಕು ಎಂದು ಕ್ಲಬ್ ನ ಹಿರಿಯ ಸದಸ್ಯ ಹಾಗೂ ಸಮಾಜ ಸೇವಕ ಶ್ರೀ ಮಹೇಶ್ ಸುವರ್ಣ “ನನ್ನ ಮಣ್ಣು- ನನ್ನ ದೇಶ” ಅಭಿಯಾನಕ್ಕೆ ಚಾಲನೆ ನೀಡಿ ಮಾತನಾಡಿದರು.


ಈ ಅಭಿಯಾನದಲ್ಲಿ ಸ್ಫೋರ್ಟ್ಸ್ ಕ್ಲಬ್ ನ ಅಧ್ಯಕ್ಷರಾದ ಜಗದೀಶ್ ಕುಲಾಲ್, ಉಪಾಧ್ಯಕ್ಷರಾದ ಸುನಿಲ್ ದೇವಾಡಿಗ, ಕಾರ್ಯಾಧ್ಯಕ್ಷರಾದ ಸಂತೋಷ್ ದೇವಾಡಿಗ, ನಿಕಟ ಪೂರ್ವ ಕಾರ್ಯಾಧ್ಯಕ್ಷರಾದ ಸುರೇಶ್ ಶೆಟ್ಟಿ, ಪರಿಸರ ಸಂರಕ್ಷಣಾ ಕಾರ್ಯದರ್ಶಿ ಸಂಪತ್ ದೇವಾಡಿಗ,ಲೆಕ್ಕ ಪರಿಶೋಧಕ ಸುಭಾಸ್ ಅಮೀನ್, ಕ್ರೀಡಾ ಕಾರ್ಯದರ್ಶಿ ಯೂನುಸ್, ಹಾಗೂ ಗಣೇಶ್ ದೇವಾಡಿಗ, ಹಿಮಕರ್ ಕೋಟ್ಯಾನ್ , ಮಹೇಶ್ ಸುವರ್ಣ, ಸಚಿನ್ ಆಚಾರ್ಯ ಮತ್ತು ಮತ್ತಿತರರು ಪಾಲ್ಗೊಂಡರು.

Leave a Reply

Your email address will not be published. Required fields are marked *

ಮಂಗಳೂರು: ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ’ ಕೃತಿ ಬಿಡುಗಡೆ..!

ಬಂಟ್ವಾಳ: ಜೋರಾದ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿ..!

ಉಡುಪಿ: ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಮೋಸ ಮಾಡಿದ ಮಹಿಳೆ..!

ದುಬೈ: ಅಕ್ಟೋಬರ್ 25 ರಂದು ದುಬೈನಲ್ಲಿ ದುಬೈ ಗಡಿನಾಡ ಉತ್ಸವ

ಮಂಗಳೂರು: ಅಶೋಕ ಜನಮನ ಕಾರ್ಯಕ್ರಮ ಆಯೋಜನೆ; ನೂಕು ನುಗ್ಗಲು ಉಂಟಾಗಿ ಅಸ್ವಸ್ಥರಾದ 11ಕ್ಕೂ ಹೆಚ್ಚು ಜನ…!

ಬಂಟ್ವಾಳ: ದ.ಕ.ಜಿಲ್ಲಾ ತುಳು ನಾಟಕ ಕಲಾವಿದರ ಒಕ್ಕೂಟ ವಾರ್ಷಿಕ ಮಹಾಸಭೆ; ನೂತನ ಅಧ್ಯಕ್ಷರಾಗಿ ಕಿಶೋರ್ ಡಿ.ಶೆಟ್ಟಿ ಪುನರಾಯ್ಕೆ….!

ಬಂಟ್ವಾಳ: ಮೊಡಂಕಾಪು ಆಯ್ಯಪ್ಪ ಮಂದಿರದಲ್ಲಿ ನಡೆದ ಸಭೆಯಲ್ಲಿ ಮೂರನೇ ಅವಧಿಯ ಅಧ್ಯಕ್ಷರಾಗಿ ಆಯ್ಕೆಯಾದ ಸುನಿಲ್ ಎನ್

ಬಂಟ್ವಾಳ: ಸುರಿದ ಮಳೆಗೆ ಅವರಣಗೋಡೆ ಕುಸಿದು ಬಿದ್ದು ಹಾನಿ…!

ಪುತ್ತೂರಿನ ಪ್ರಕರಣ, ಕಾರ್ಕಳದ ಅಭಿಷೇಕ್ ಆತ್ಮಹತ್ಯೆಗೆ ಸಂಬಂಧಿಸಿ ಗ್ರಹಸಚಿವರಿಗೆ ಐವನ್ ಡಿಸೋಜಾ ಅವರಿಂದ ಮನವಿ

error: Content is protected !!