ಬಂಟ್ವಾಳ: ಮಂಗಳೂರು – ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ಮಧ್ಯೆ ಕಲ್ಲಡ್ಕ ಸರ್ವೀಸ್ ರಸ್ತೆಯ ಚರಂಡಿಗೆ ಘನಗಾತ್ರದ ಲಾರಿಯೊಂದು ಬಿದ್ದ ಪರಿಣಾಮ ಸಂಚಾರಕ್ಕೆ ಅಡಚಣೆ ಉಂಟಾದ ಘಟನೆ ಅ.1 ರಂದು ಆದಿತ್ಯವಾರ ಬೆಳಿಗ್ಗೆ ವೇಳೆ ನಡೆದಿದೆ.
ಕಲ್ಲಡ್ಕದ ಪೇಟೆಯಿಂದ ಸ್ವಲ್ಪ ಮುಂದೆ ಪೂರ್ಲಿಪಾಡಿ ನಡುವೆ ಸರ್ವೀಸ್ ರಸ್ತೆಯ ಬದಿಯಲ್ಲಿ ಮಳೆ ನೀರು ಹರಿದು ಹೋಗಲು ತಾತ್ಕಾಲಿಕವಾಗಿ ಮಾಡಲಾದ ಚರಂಡಿಗೆ ಲಾರಿ ಬಿದ್ದಿದೆ.
ನಿಜವಾಗಿ ಹೇಳಬೇಕೆಂದರೆ ಇಲ್ಲಿ ರಸ್ತೆ ಮತ್ತು ಚರಂಡಿ ಎರಡು ಒಂದೇ ರೀತಿಯಲ್ಲಿ ಸಮನಾಗಿದೆ. ಹಾಗಾಗಿ ವಾಹನ ಸವಾರರು ಸ್ವಲ್ಪ ಎಚ್ಚರ ತಪ್ಪಿ ರಸ್ತೆಯ ಬದಿಗೆ ಸರಿದರೆ ವಾಹನಗಳು ಹೂತು ಹೋಗುವುದು ಗ್ಯಾರಂಟಿ.
ಕಲ್ಲಡ್ಕ ಪೇಟೆ ಉಳಿಸುವ ಸಲುವಾಗಿ ಇಲ್ಲಿ ಪ್ಲೈ ಓವರ್ ನಿರ್ಮಾಣ ಮಾಡಲಾಗುತ್ತಿದೆ.
ಪ್ಲೈ ಓವರ್ ನಿರ್ಮಾಣ ಮಾಡುವ ಸಂದರ್ಭ ಎರಡು ಬದಿಯಲ್ಲಿ ಸರ್ವೀಸ್ ರಸ್ತೆ ನಿರ್ಮಾಣ ಮಾಡಲಾಗಿದೆ.
ಆದರೆ ಸರ್ವೀಸ್ ರಸ್ತೆಯನ್ನು ಪರಿಪೂರ್ಣ ರೀತಿಯಲ್ಲಿ ಮಾಡದೆ ಜನರು ಸಂಕಷ್ಟಕ್ಕೆ ಸಿಲುಕುವಂತೆ ಮಾಡಿದ್ದಾರೆ ಎಂಬುದು ಸಾರ್ವಜನಿಕ ಆರೋಪ. ಕನಿಷ್ಟ ಡಾಮರೀಕರಣ ಮಾಡಿದರೆ ಇವರ ಪ್ಲೈ ಓವರ್ ಕಾಮಗಾರಿ ಮುಗಿಯುವವರೆಗೆ ಸಂಚಾರ ಮಾಡಬಹುದಿತ್ತು. ಇದೀಗ ಕೆಸರು ಮಿಶ್ರಿತ ಅವೈಜ್ಞಾನಿಕ ರೀತಿಯ ರಸ್ತೆಯಲ್ಲಿ ವಾಹನ ಸಂಚಾರಕ್ಕೆ ತೊಂದರೆ ಒಂದು ಕಡೆಯಾದರೆ, ಇನ್ನೊಂದು ಕಡೆ ವಾಹನಗಳ ಅಪಘಾತಗಳು ನಿತ್ಯ ಸಂಭವಿಸುತ್ತಿದ್ದು ಟ್ರಾಫಿಕ್ ಜಾಮ್ ಸಮಸ್ಯೆ ಉಂಟಾಗುತ್ತಿದೆ ಎಂದು ಸಾರ್ವಜನಿಕರು ಆರೋಪ ಮಾಡುತ್ತಿದ್ದಾರೆ.
ಬಿಸಿಯೂಟದ ಸಿಬ್ಬಂದಿಯೊಬ್ಬರ ಕೈ ವಿದ್ಯುತ್ ಚಾಲಿತ ತುರಿಮಣೆಯಲ್ಲಿ ಸಿಲುಕಿಕೊಂಡ ಸಂದರ್ಭದಲ್ಲಿ ಸಮಯಪ್ರಜ್ಞೆ ಮೆರೆದ ನರಿಕೊಂಬು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ…
ನಗರದ ಕೆಪಿಟಿ ಸಿಗ್ನಲ್ ಸಮೀಪ ರಸ್ತೆಯ ಮಧ್ಯಭಾಗದಲ್ಲೇ ಭಾರೀ ಗುಂಡಿಯೊಂದು ನಿರ್ಮಾಣವಾಗಿದ್ದು, ವಾಹನ ಸವಾರರಿಗೆ ಅಪಾಯ ಎದುರಾಗಿದೆ. ಈ ಮಾರ್ಗದಲ್ಲಿ…
ಆಟಿ ಅಮಾವಾಸ್ಯೆಯ ಪವಿತ್ರ ದಿನದಂದು ಬಂಟ್ವಾಳ ತಾಲೂಕಿನ ಐತಿಹಾಸಿಕ ಹಾಗೂ ಪೌರಾಣಿಕ ಪ್ರಸಿದ್ಧಿಯ ನರಹರಿ ಪರ್ವತ ಶ್ರೀ ಸದಾಶಿವ ದೇವಸ್ಥಾನದಲ್ಲಿ…
ತುಳುಕೂಟ ಬಂಟ್ವಾಳ ಹಾಗೂ ಶ್ರೀ ರಕ್ತೇಶ್ವರಿ ದೇವಿ ದೇವಸ್ಥಾನ, ಬಿ.ಸಿ.ರೋಡು ಇದರ ಆಡಳಿತ ಮಂಡಳಿಯ ಆಶ್ರಯದಲ್ಲಿ ವರ್ಷಂಪ್ರತಿ ನಡೆಯುವ ಆಟಿ…
ಲೋಕಾಯುಕ್ತದಲ್ಲಿ ದಾಖಲಾಗಿರುವ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ಮೇಲಾಧಿಕಾರಿಗಳ ನಿರ್ದೇಶನದ ಮೇರೆಗೆ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ತಾಲೂಕು ಕಚೇರಿಗಳಿಗೆ ಲೋಕಾಯುಕ್ತ ಅಧಿಕಾರಿಗಳು…
ಆಟಿ ಅಮಾವಾಸ್ಯೆಯ ಪ್ರಯುಕ್ತ ತಾಲೂಕಿನ ಪ್ರಸಿದ್ಧ ಕಾರಿಂಜ ಶ್ರೀ ಕಾರಿಂಜೇಶ್ವರ ದೇವಸ್ಥಾನದಲ್ಲಿ ಬುಧವಾರ ಶ್ರದ್ಧಾಭಕ್ತಿ ಹಾಗೂ ಸಂಭ್ರಮದಿಂದ ವಿವಿಧ ಧಾರ್ಮಿಕ…