ಬಂಟ್ವಾಳ: ಮಂಗಳೂರು – ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ಮಧ್ಯೆ ಕಲ್ಲಡ್ಕ ಸರ್ವೀಸ್ ರಸ್ತೆಯ ಚರಂಡಿಗೆ ಘನಗಾತ್ರದ ಲಾರಿಯೊಂದು ಬಿದ್ದ ಪರಿಣಾಮ ಸಂಚಾರಕ್ಕೆ ಅಡಚಣೆ ಉಂಟಾದ ಘಟನೆ ಅ.1 ರಂದು ಆದಿತ್ಯವಾರ ಬೆಳಿಗ್ಗೆ ವೇಳೆ ನಡೆದಿದೆ.
ಕಲ್ಲಡ್ಕದ ಪೇಟೆಯಿಂದ ಸ್ವಲ್ಪ ಮುಂದೆ ಪೂರ್ಲಿಪಾಡಿ ನಡುವೆ ಸರ್ವೀಸ್ ರಸ್ತೆಯ ಬದಿಯಲ್ಲಿ ಮಳೆ ನೀರು ಹರಿದು ಹೋಗಲು ತಾತ್ಕಾಲಿಕವಾಗಿ ಮಾಡಲಾದ ಚರಂಡಿಗೆ ಲಾರಿ ಬಿದ್ದಿದೆ.
ನಿಜವಾಗಿ ಹೇಳಬೇಕೆಂದರೆ ಇಲ್ಲಿ ರಸ್ತೆ ಮತ್ತು ಚರಂಡಿ ಎರಡು ಒಂದೇ ರೀತಿಯಲ್ಲಿ ಸಮನಾಗಿದೆ. ಹಾಗಾಗಿ ವಾಹನ ಸವಾರರು ಸ್ವಲ್ಪ ಎಚ್ಚರ ತಪ್ಪಿ ರಸ್ತೆಯ ಬದಿಗೆ ಸರಿದರೆ ವಾಹನಗಳು ಹೂತು ಹೋಗುವುದು ಗ್ಯಾರಂಟಿ.
ಕಲ್ಲಡ್ಕ ಪೇಟೆ ಉಳಿಸುವ ಸಲುವಾಗಿ ಇಲ್ಲಿ ಪ್ಲೈ ಓವರ್ ನಿರ್ಮಾಣ ಮಾಡಲಾಗುತ್ತಿದೆ.
ಪ್ಲೈ ಓವರ್ ನಿರ್ಮಾಣ ಮಾಡುವ ಸಂದರ್ಭ ಎರಡು ಬದಿಯಲ್ಲಿ ಸರ್ವೀಸ್ ರಸ್ತೆ ನಿರ್ಮಾಣ ಮಾಡಲಾಗಿದೆ.
ಆದರೆ ಸರ್ವೀಸ್ ರಸ್ತೆಯನ್ನು ಪರಿಪೂರ್ಣ ರೀತಿಯಲ್ಲಿ ಮಾಡದೆ ಜನರು ಸಂಕಷ್ಟಕ್ಕೆ ಸಿಲುಕುವಂತೆ ಮಾಡಿದ್ದಾರೆ ಎಂಬುದು ಸಾರ್ವಜನಿಕ ಆರೋಪ. ಕನಿಷ್ಟ ಡಾಮರೀಕರಣ ಮಾಡಿದರೆ ಇವರ ಪ್ಲೈ ಓವರ್ ಕಾಮಗಾರಿ ಮುಗಿಯುವವರೆಗೆ ಸಂಚಾರ ಮಾಡಬಹುದಿತ್ತು. ಇದೀಗ ಕೆಸರು ಮಿಶ್ರಿತ ಅವೈಜ್ಞಾನಿಕ ರೀತಿಯ ರಸ್ತೆಯಲ್ಲಿ ವಾಹನ ಸಂಚಾರಕ್ಕೆ ತೊಂದರೆ ಒಂದು ಕಡೆಯಾದರೆ, ಇನ್ನೊಂದು ಕಡೆ ವಾಹನಗಳ ಅಪಘಾತಗಳು ನಿತ್ಯ ಸಂಭವಿಸುತ್ತಿದ್ದು ಟ್ರಾಫಿಕ್ ಜಾಮ್ ಸಮಸ್ಯೆ ಉಂಟಾಗುತ್ತಿದೆ ಎಂದು ಸಾರ್ವಜನಿಕರು ಆರೋಪ ಮಾಡುತ್ತಿದ್ದಾರೆ.
ಬೇಕಲ ಕೋಟೆ ಸಮೀಪದ ಪಳ್ಳಿಕರೆ ಕಡಲತೀರದಲ್ಲಿ ಭಾನುವಾರ ಸಂಜೆ ಸಂಭವಿಸಿದ ದುರ್ಘಟನೆಯಲ್ಲಿ ಇಬ್ಬರು ಕಾಲೇಜು ವಿದ್ಯಾರ್ಥಿಗಳು ಸಮುದ್ರದಲ್ಲಿ ಕೊಚ್ಚಿಹೋಗಿದ್ದು, ಅವರಿಗಾಗಿ…
ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಪಿಕಪ್ ಪಲ್ಟಿ ಹೊಡೆದ ಘಟನೆ ಸುಬ್ರಹ್ಮಣ್ಯ ಸಮೀಪದ ಕುಲ್ಕುಂದ ಎಂಬಲ್ಲಿ ನಡೆದಿದೆ. ರಾತ್ರಿ ವೇಳೆ…
ಕಡಬ ತಾಲೂಕು ಕೊಯಿಲ ಮತ್ತು ರಾಮಕುಂಜ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗೋಳಿತ್ತಡಿ-ಏಣಿತ್ತಡ್ಕ-ಕುದುಲೂರು ಸಂಪರ್ಕ ರಸ್ತೆಯುದ್ದಕ್ಕೂ ಉಂಟಾಗಿರುವ ಹೊಂಡಗಳಿಗೆ ಸ್ಥಳಿಯರು ಶ್ರಮ…
ರಾಷ್ಟ್ರೀಯ ಹೆದ್ದಾರಿಯ ಪಾಣೆಮಂಗಳೂರು ಕಲ್ಲುರ್ಟಿ ದೈವಸ್ಥಾನದ ಮುಂಭಾಗದಲ್ಲಿ ಸರ್ವೀಸ್ ರಸ್ತೆ ಹೊಂಡಗುಂಡಿಗಳಿಂದ ತುಂಬಿ ವಾಹನ ಸಂಚಾರಕ್ಕೆ ತೊಂದರೆಯಾಗುತ್ತಿದೆ ಎಂದು ಸ್ಥಳೀಯರು…
ಮಾದಕ ದ್ರವ್ಯ ಸಾಗಾಟ ಹಾಗೂ ಮಾರಾಟ ಪ್ರಕರಣಗಳಲ್ಲಿ ಭಾಗಿಯಾಗಿರುವ ಆರೋಪದಡಿ ಮಣಿಪಾಲ ಪೊಲೀಸ್ ಠಾಣೆ ವ್ಯಾಪ್ತಿಯ 80 ಬಡಗಬೆಟ್ಟು ಗ್ರಾಮದ…
ಮಂಗಳೂರು ನಗರದ ಪದವು ಗ್ರಾಮದ ಜೋಡುಕಟ್ಟೆ ಮರೋಳಿ ಹತ್ತಿರ ಜೂನ್ 11 ರಂದು ಅಕ್ರಮವಾಗಿ ಆನೆದಂತಗಳನ್ನು ಮಾರಾಟಕ್ಕೆ ಯತ್ನಿಸುತಿದ್ದವರನ್ನು ಬಂಧಿಸಲಾಗಿದೆ.…