ಬಂಟ್ವಾಳಃ ಪಾಣೆಮಂಗಳೂರು ಶ್ರೀ ಭಯಂಕೇಶ್ವರ ದೇವಳದಲ್ಲಿ ಅ. 26ರಂದು ನಡೆಸಲು ಉದ್ದೇಶಿಸಿರುವ ಪ್ರಶ್ನಾ ಚಿಂತನೆ ಪೂರ್ವಭಾವಿ ಸಭೆಯು ಶ್ರೀ ಕ್ಷೇತ್ರದಲ್ಲಿ ಅ.1 ರಂದು ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ರಘು ಸೋಮಯಾಜಿ ನೇತೃತ್ವದಲ್ಲಿ ನಡೆಯಿತು.
ಅವರು ಮಾತಾಡಿ ಕ್ಷೇತ್ರದ ತಂತ್ರಿ ಗಳಾದ ನಿಲೇಶ್ವರ ಉಚ್ಚಿಲತ್ತಾಯ ಪದ್ಮನಾಭ ತಂತ್ರಿಗಳ ನೇತೃತ್ವದಲ್ಲಿ,
ಪ್ರಸಿದ್ದ ದೈವಜ್ಞರಾದ ಬೇಲ ಪದ್ಮನಾಭ ಶರ್ಮ ಅವರು ಪ್ರಶ್ನಾ ಚಿಂತನೆ ನಡೆಸಿ ಸೂಕ್ತ ಮಾರ್ಗದರ್ಶನ ನೀಡುವರು ಎಂದು ತಿಳಿಸಿದರು.
ಪ್ರಶ್ನಾ ಚಿಂತನೆಗೆ ಧನಾತ್ಮಕವಾಗಿ ಸ್ಪಂದನೆ ನೀಡಿ ಅದರ ಸದುಪಯೋಗವನ್ನು
ಕ್ಷೇತ್ರದ ಸಾನಿಧ್ಯ ಅಭಿವೃದ್ದಿಗಾಗಿ ಬಳಸಿಕೊಳ್ಳಬೇಕು ಎಂದರು. ಕ್ಷೇತ್ರಕ್ಕೆ ನಿತ್ಯವು ಭಕ್ತಾಧಿಗಳ ಸಂಪರ್ಕ ಹೆಚ್ಚಾಗಬೇಕು ಅದಕ್ಕಾಗಿ ಸೌಕರ್ಯ ಅಳವಡಿಸುವುದು. ನಿತ್ಯ ಭಜನಾ ಸಂಕೀರ್ತನೆ ನಡೆಸುವ ಬಗ್ಗೆ ತಿಳಿಸಿದರು.
ವೇದಿಕೆಯಿಂದ ವೈದಿಕರಾದ ವೆಂಕಟರಮಣ ಮುಚ್ಚಿನ್ನಾಯ, ಕೇಶವ ಶಾಂತಿ, ಪ್ರಮುಖರಾದ ರಾಜಾ ಬಂಟ್ವಾಳ್, ಜಗನ್ನಾಥ ಬಂಗೇರ ನಿರ್ಮಾಲ್, ಸಮಿತಿ ಸದಸ್ಯರಾದ ಲೊಕೇಶ್ ನರಹರಿನಗರ ಮಾತನಾಡಿದರು.
ಗುತ್ತು ಮನೆಯ ಕೇಶವ ಶೆಣೈ, ರವಿ ಶೆಣೈ, ಐದು ಮನೆ ಮುಖ್ಯಸ್ಥರಾದ ಹೊಸಲಚ್ಚಿಲು ಯತೀಶ್ ಶೆಟ್ಟಿ, ಕೆದ್ದೇಲು ರಂಜಿತ್, ಕೋಡಿ ಕೇಶವ ಪೂಜಾರಿ, ಪಲ್ಲತಿಲ ಜಯರಾಜ್,
ನಿರ್ಮಾಲ್ ರಾಜೇಶ್ , ಗಣ್ಯರಾದ ರಘು ಸಪಲ್ಯ, ಪ್ರೇಮನಾಥ ಶೆಟ್ಟಿ , ವೇದವ ಗಾಣಿಗ, ಉಲ್ಲಾಸ್ ರೈ ಸೂರಿಕುಮೇರ್, ಪುರುಷೋತ್ತಮ ಬಂಗೇರ ನಾಟಿ ಮತ್ತು ಇತರ ನೇತಾರರು ಉಪಸ್ಥಿತರಿದ್ದರು.
ವ್ಯವಸ್ಥಾಪನಾ ಸಮಿತಿಯ ಕೃಷ್ಣಪ್ಪ ಗಾಣಿಗ ಸ್ವಾಗತಿಸಿ ವಂದಿಸಿದರು. ಮೆನೇಜರ್ ನಾಗೇಂದ್ರ ರಾವ್ ಕಾರ್ಯಕ್ರಮ ನಿರೂಪಿಸಿದರು.
ಇರಾನ್ನ ನೂತನ ಸುಪ್ರೀಂ ಲೀಡರ್ ಮೊಜ್ತಬಾ ಖಮೇನಿ ಅವರ ಆರೋಗ್ಯ ಹಾಗೂ ಅವರು ಎಲ್ಲಿದ್ದಾರೆ ಎಂಬ ಕುರಿತು ಜಾಗತಿಕ ಮಟ್ಟದಲ್ಲಿ…
ಥೈಲ್ಯಾಂಡ್ನ ರಾಜಧಾನಿ ಬ್ಯಾಂಕಾಕ್ ಸಮೀಪದ ಶಾಲೆಯೊಂದರಲ್ಲಿ 9ನೇ ತರಗತಿ ವಿದ್ಯಾರ್ಥಿಯೊಬ್ಬ ನಡೆಸಿದ ಗುಂಡಿನ ದಾಳಿಯಲ್ಲಿ ಶಿಕ್ಷಕರೊಬ್ಬರು ಮೃತಪಟ್ಟಿದ್ದು, ಕನಿಷ್ಠ 15…
ಮೂಡಬಿದ್ರೆಯ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ ಆಯೋಜಿಸಿರುವ ಆಳ್ವಾಸ್ ಪ್ರಗತಿ-2026 ಬೃಹತ್ ಉದ್ಯೋಗ ಮೇಳಕ್ಕೆ ತೆರಳಲು ಬಂಟ್ವಾಳದಿಂದ ಶುಕ್ರವಾರ ಎರಡು ಉಚಿತ…
ರಾಷ್ಟ್ರೀಯ ಹೆದ್ದಾರಿ 75ರ ಸುರಿಕುಮೇರು ಸಮೀಪದ ಹಿಂದೂಸ್ತಾನ್ ಪೆಟ್ರೋಲ್ ಬಂಕ್ ಬಳಿ ನಡೆದ ರಸ್ತೆ ಅಪಘಾತದಲ್ಲಿ ಒಂದೇ ಕುಟುಂಬದ ಆರು…
ಬಿ.ಸಿ.ರೋಡ್ನ ಎನ್.ಜಿ. ಸರ್ಕಲ್ನಲ್ಲಿ ಗುರುವಾರ ಸಂಜೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಇಬ್ಬರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.…
ಕಳೆದ ಒಂದು ವಾರದಿಂದ ನ್ಯುಮೋನಿಯಾ ಜ್ವರದಿಂದ ಬಳಲುತ್ತಿದ್ದ ವಿದ್ಯಾರ್ಥಿನಿಯೊಬ್ಬಳು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿರುವ ದುಃಖದ ಘಟನೆ ನಡೆದಿದೆ. ಮೃತ ವಿದ್ಯಾರ್ಥಿನಿಯನ್ನು…