ಭಾರತ ಸರಕಾರ ಯುವ ಕಾರ್ಯ ಮತ್ತು ಕ್ರೀಡಾ ಸಚಿವಾಲಯ ನೆಹರೂ ಯುವ ಕೇಂದ್ರ ಮಂಗಳೂರು ಗ್ರಾಮ ಪಂಚಾಯತ್ ಹಳೆಯಂಗಡಿ ಶ್ರೀ ವಿದ್ಯಾವಿನಾಯಕ ಯುವಕ ಮಂಡಲ ( ರಿ) ಹಳೆಯಂಗಡಿ ಇದರ ನೇತೃತ್ವದಲ್ಲಿ ಶ್ರೀ ವಿದ್ಯಾವಿನಾಯಕ ರಜತ ಸೇವಾ ಟ್ರಸ್ಟ್ (ರಿ), ಯುವತಿ ಮತ್ತು ಮಹಿಳಾ ಮಂಡಲ ಹಳೆಯಂಗಡಿ ಅಮಲ ಭಾರತ ಅಭಿಯಾನ, ಮಾತ ಅಮೃತನಂದ ಮಾಯಿ ಮಠ ಬೋಳೂರು, ಮಂಗಳೂರು ಆಟೋ ಫ್ರೆಂಡ್ಸ್ ಹಳೆಯಂಗಡಿ ಇದರ ಸಹಕಾರದಲ್ಲಿ ವಿವಿಧ ಸಂಘ ಸಂಸ್ಥೆಗಳ ಸಹಯೋಗದೊಂದಿಗೆ ಗಾಂಧೀ ಜಯಂತಿಯ ಅಂಗವಾಗಿ ” ಸ್ವಚ್ಚತಾ ಹೀ ಸೇವಾ ” ಆಂದೋಲನದ ಅಡಿಯಲ್ಲಿ “ಬೃಹತ್ ಸ್ವಚ್ಛತಾ ಕಾರ್ಯಕ್ರಮ” ಇಂದು ದಿನಾಂಕ 01.10.2023 ರಂದು ಬೆಳಿಗ್ಗೆ 8 ರಿಂದ 10 ಗಂಟೆಯವರೆಗೆ ಹಳೆಯಂಗಡಿ ಮತ್ತು ಪಾವಂಜೆ ಮುಖ್ಯ ಪೇಟೆಯ ಬಸ್ಸು ನಿಲ್ದಾಣದ ಬಳಿ ಜರುಗಿತು.ಬಸ್ಸು ತಂಗುದಾಣದ ಸುತ್ತಮುತ್ತ ಇದ್ದ ಹುಲ್ಲು, ಪ್ಲಾಸ್ಟಿಕ್, ಕಸ ಕಡ್ಡಿಗಳನ್ನು ಸ್ವಚ್ಚ ಮಾಡಲಾಯಿತು. ನೀರಿನ ಟ್ಯಾಂಕರ್ ಬಳಸಿ ಬಸ್ಸು ತಂಗುದಾಣವನ್ನು ಗುಡಿಸಿ ಸ್ವಚ್ಛತೆ ಮಾಡಲಾಯಿತು. ನೀರು ನಿಲ್ಲುವ ಎಲ್ಲಾ ಕಡೆ ಸುಣ್ಣ ಹಾಕಿ ಸುಂದರಗೊಳಿಸಲಾಯಿತು.
ಈ ಅಭಿಯಾನದಲ್ಲಿ ಗ್ರಾಮ ಪಂಚಾಯತ್ ಹಳೆಯಂಗಡಿ ಅಧ್ಯಕ್ಷರಾದ ಶ್ರೀಮತಿ ಪೂರ್ಣಿಮಾ, ಉಪಾಧ್ಯಕ್ಷರಾದ ಶ್ರೀಮತಿ ಚಂದ್ರಿಕಾ, ಪಂಚಾಯತ್ ಅಭಿವೃದ್ಧಿ ಅಧಿಕಾರಿ ದೀಪ್ತಿ, ಯುವಕ ಮಂಡಲದ ಅಧ್ಯಕ್ಷರಾದ ಶ್ರೀ ನಾಗೇಶ್ ಟಿ.ಜಿ, ಪ್ರಧಾನ ಕಾರ್ಯದರ್ಶಿ ಶ್ರೀ ಹಿಮಕರ್ ಕದಿಕೆ, ಸುವರ್ಣ ಮಹೋತ್ಸವ ಸಮಿತಿಯ ಕಾರ್ಯ ಅಧ್ಯಕ್ಷರಾದ ಶ್ರೀ ಸುಧಾಕರ ಆರ್ ಅಮೀನ್, ಟ್ರಸ್ಟಿನ ಪ್ರದಾನ ಕಾರ್ಯದರ್ಶಿ ಶ್ರೀ ಸ್ಟ್ಯಾನಿ ಡಿ ಕೋಸ್ಟಾ , ಸಲಹಾ ಸಮಿತಿಯ ಅಧ್ಯಕ್ಷರಾದ ಶ್ರೀ ಮೋಹನ್ ಬಂಗೇರ, ಯುವತಿ ಮಂಡಲದ ಅಧ್ಯಕ್ಷರಾದ ಕುಮಾರಿ ರಶ್ವಿತ, ಕಾರ್ಯದರ್ಶಿ ಕುಮಾರಿ ದಿವ್ಯಶ್ರೀ ಕೋಟ್ಯಾನ್, ಮಹಿಳಾ ಮಂಡಲದ ಅಧ್ಯಕ್ಷರಾದ ಶ್ರೀಮತಿ ರೇಷ್ಮಾ, ಕೋಶಾಧಿಕಾರಿ ರಾಜೇಶ್ವರಿ ರಾಮನಗರ, ಆಟೋ ಫೆಂಡ್ಸ್ ಇದರ ಅಧ್ಯಕ್ಷರಾದ ಶ್ರೀ ಮೋಹನ್ ಕುಮಾರ್ ಹಾಗೂ ಗ್ರಾಮ ಪಂಚಾಯತ್ ಸದಸ್ಯರು, ಸಿಬ್ಬಂದಿವರ್ಗ, ಯುವಕ, ಯುವತಿ ಮತ್ತು ಮಹಿಳಾ ಮಂಡಲದ ಸದಸ್ಯರು, ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ್ದರು.
ಇರಾನ್ನ ನೂತನ ಸುಪ್ರೀಂ ಲೀಡರ್ ಮೊಜ್ತಬಾ ಖಮೇನಿ ಅವರ ಆರೋಗ್ಯ ಹಾಗೂ ಅವರು ಎಲ್ಲಿದ್ದಾರೆ ಎಂಬ ಕುರಿತು ಜಾಗತಿಕ ಮಟ್ಟದಲ್ಲಿ…
ಥೈಲ್ಯಾಂಡ್ನ ರಾಜಧಾನಿ ಬ್ಯಾಂಕಾಕ್ ಸಮೀಪದ ಶಾಲೆಯೊಂದರಲ್ಲಿ 9ನೇ ತರಗತಿ ವಿದ್ಯಾರ್ಥಿಯೊಬ್ಬ ನಡೆಸಿದ ಗುಂಡಿನ ದಾಳಿಯಲ್ಲಿ ಶಿಕ್ಷಕರೊಬ್ಬರು ಮೃತಪಟ್ಟಿದ್ದು, ಕನಿಷ್ಠ 15…
ಮೂಡಬಿದ್ರೆಯ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ ಆಯೋಜಿಸಿರುವ ಆಳ್ವಾಸ್ ಪ್ರಗತಿ-2026 ಬೃಹತ್ ಉದ್ಯೋಗ ಮೇಳಕ್ಕೆ ತೆರಳಲು ಬಂಟ್ವಾಳದಿಂದ ಶುಕ್ರವಾರ ಎರಡು ಉಚಿತ…
ರಾಷ್ಟ್ರೀಯ ಹೆದ್ದಾರಿ 75ರ ಸುರಿಕುಮೇರು ಸಮೀಪದ ಹಿಂದೂಸ್ತಾನ್ ಪೆಟ್ರೋಲ್ ಬಂಕ್ ಬಳಿ ನಡೆದ ರಸ್ತೆ ಅಪಘಾತದಲ್ಲಿ ಒಂದೇ ಕುಟುಂಬದ ಆರು…
ಬಿ.ಸಿ.ರೋಡ್ನ ಎನ್.ಜಿ. ಸರ್ಕಲ್ನಲ್ಲಿ ಗುರುವಾರ ಸಂಜೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಇಬ್ಬರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.…
ಕಳೆದ ಒಂದು ವಾರದಿಂದ ನ್ಯುಮೋನಿಯಾ ಜ್ವರದಿಂದ ಬಳಲುತ್ತಿದ್ದ ವಿದ್ಯಾರ್ಥಿನಿಯೊಬ್ಬಳು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿರುವ ದುಃಖದ ಘಟನೆ ನಡೆದಿದೆ. ಮೃತ ವಿದ್ಯಾರ್ಥಿನಿಯನ್ನು…