ಜನ ಮನದ ನಾಡಿ ಮಿಡಿತ

Advertisement

“ನನ್ನ ಮಣ್ಣು ನನ್ನ ದೇಶ” ಕಾರ್ಯಕ್ರಮದ ಅಂಗವಾಗಿ ಶನಿವಾರದಂದು “ಅಮೃತ ಕಲಶಕ್ಕೆ ಮಣ್ಣನ್ನು ಹಾಕುವ” ಅಭಿಯಾನ

ಮುಲ್ಕಿ: ಭಾರತ ಸರಕಾರ ಯುವಕಾರ್ಯ ಮತ್ತು ಕ್ರೀಡಾ ಸಚಿವಾಲಯ ನೆಹರೂ ಯುವ ಕೇಂದ್ರ ಮಂಗಳೂರು, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಮಂಗಳೂರು, ಗ್ರಾಮ ಪಂಚಾಯತ್ ಪಡುಪಣಂಬೂರು, ರೋಟರಿ ಕ್ಲಬ್ ಬೈಕಂಪಾಡಿ ಇದರ ಸಹಕಾರದಲ್ಲಿ ಫೇಮಸ್ ಯೂತ್ ಕ್ಲಬ್ (ರಿ) ಮತ್ತು ಮಹಿಳಾ ಮಂಡಲ 10ನೇ ತೋಕೂರು ಹಳೆಯಂಗಡಿ ಇವರ ಆಶ್ರಯದಲ್ಲಿ ಕೇಂದ್ರ ಸಂಸ್ಕೃತಿ ಮತ್ತು ಯುವಜನ ವ್ಯವಹಾರಗಳು ಹಾಗೂ ಕ್ರೀಡಾ ಸಚಿವಾಲಯ, ನೆಹರೂ ಯುವ ಕೇಂದ್ರದ ಕಾರ್ಯಕ್ರಮದ ಅಡಿಯಲ್ಲಿ ದೇಶಾದ್ಯಂತ 01.09.2023 ರಿಂದ 30.09.2023 ರ ವರೆಗೆ ನಡೆಯುತ್ತಿರುವ “ನನ್ನ ಮಣ್ಣು ನನ್ನ ದೇಶ” MERI MATI MERA DESH ” ಕಾರ್ಯಕ್ರಮದ ಅಂಗವಾಗಿ ಶನಿವಾರದಂದು ಫೇಮಸ್ ಯೂತ್ ಕ್ಲಬ್ ನ ವ್ಯಾಪ್ತಿಯ ಮನೆಗಳಿಗೆ ತೆರಳಿ “ಅಮೃತ ಕಲಶಕ್ಕೆ ಮಣ್ಣನ್ನು ಹಾಕುವ” ಅಭಿಯಾನವನ್ನು ನಡೆಸಲಾಯಿತು.

ಕಾರ್ಯಕ್ರಮದಲ್ಲಿ ಪಡುಪಣಂಬೂರು ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶ್ರೀಮತಿ ಕುಸುಮ ಉಪಾಧ್ಯಕ್ಷರಾದ ಶ್ರೀ ಹೇಮನಾಥ ಅಮೀನ್ ಪಂಚಾಯತ್ ಅಭಿವೃದ್ಧಿ ಅಧಿಕಾರಿಯಾದ ಸುಧೀರ್, ಮುಲ್ಕಿ ತಾಲೂಕು ಪಂಚಾಯತ್ ಕಾರ್ಯನಿರ್ವಹಣಾಧಿಕಾರಿ ಗುರು ಶಾಂತಪ್ಪ, ಪ್ರಬಂಧಕರಾದ ಯೋಗೀಶ್ ಗ್ರಾಮ ಪಂಚಾಯತ್ ಸದಸ್ಯರಾದ ಮೋಹನ್ ದಾಸ್, ಜ್ಯೋತಿ ಕುಲಾಲ್, ಫೇಮಸ್ ಯೂತ್ ಕ್ಲಬ್ಬಿನ ಅಧ್ಯಕ್ಷರಾದ ಭಾಸ್ಕರ್ ಅಮೀನ್ ತೋಕೂರು, ಕಾರ್ಯದರ್ಶಿ ಹಿಮಕರ್ ಕೋಟ್ಯಾನ್, ಸದಸ್ಯರಾದ ಮೊಹಮ್ಮದ್ ಶರೀಫ್ ಮತ್ತು ವಿಶ್ವಜಿತ್ ಆಚಾರ್ಯ, ಮತ್ತು ರೋಟರಿ ಸಮುದಾಯದಳದ ಅಧ್ಯಕ್ಷರಾದ ಶ್ರೀ ಮೋಹನ್ ದಾಸ್ ದೇವಾಡಿಗ, ಮಹಿಳಾ ಮಂಡಲದ ಅಧ್ಯಕ್ಷರಾದ ಪ್ರೇಮಲತಾ ಯೋಗೀಶ್, ಉಪಾಧ್ಯಕ್ಷೆ ಅಮಿತಾ ದಿನಕರ್ ಸಾಲ್ಯಾನ್, ಕಾರ್ಯದರ್ಶಿ ಕುಸುಮ ಹರೀಶ್ ಕೋಟ್ಯಾನ್, ಕೋಶಾಧಿಕಾರಿ ಇಂದಿರಾ ಸಂಜೀವ ಕರ್ಕೇರ ಮತ್ತು ಮಹಿಳಾ ಮಂಡಲದ ಸದಸ್ಯರು ಹಾಗೂ ಗ್ರಾಮ ಪಂಚಾಯತ್ ಸಿಬ್ಬಂದಿಗಳು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

ಉಡುಪಿ: ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಭೇಟಿ….!

ಬಂಟ್ವಾಳ: ಬಡಗಬೆಳ್ಳೂರಿನಲ್ಲಿ ಕುಸಿದು ಬಿದ್ದ ಸೇತುವೆ; ಜನ ಸಂಚಾರಕ್ಕೆ ಭಾರೀ ಸಂಕಷ್ಟ…..!

ಬಂಟ್ವಾಳ: ಜ್ವರದಿಂದ ಬಳಲುತ್ತಿದ್ದ ಬಾಲಕಿ ಚಿಕಿತ್ಸೆ ಫಲಕಾರಿಯಾಗದೆ ನಿಧನ….!

ಬಂಟ್ವಾಳ: ಮಿನಿ ವಿಧಾನಸೌಧ ಮುಂಭಾಗದ ಕ್ಯಾಂಟೀನ್‌ನಲ್ಲಿ ಅನಿಲ ಸೋರಿಕೆ ಆತಂಕ….!

ಕಾಸರಗೋಡು: ಸಮುದ್ರದಲ್ಲಿ ಕೊಚ್ಚಿಹೋದ ಇಬ್ಬರು ಕಾಲೇಜು ವಿದ್ಯಾರ್ಥಿಗಳು..!

ಕಡಬ: ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಪಿಕಪ್ ಪಲ್ಟಿ..!

ಕಡಬ: ಗೋಳಿತ್ತಡಿ-ಏಣಿತ್ತಡ್ಕ-ಕುದುಲೂರು ಸಂಪರ್ಕಿತ ರಸ್ತೆ; ರಸ್ತೆಯುದ್ದಕ್ಕೂ ಹೊಂಡಮಯ..!

ಬಂಟ್ವಾಳ: ಪಾಣೆಮಂಗಳೂರು ಕಲ್ಲುರ್ಟಿ ದೈವಸ್ಥಾನದ ಮುಂಭಾಗದ ಸರ್ವೀಸ್ ರಸ್ತೆಯಲ್ಲಿ ಹೊಂಡಗುಂಡಿ…!

ಉಡುಪಿ: ಮಾದಕ ದ್ರವ್ಯ ಸಾಗಾಟ- ಮಾರಾಟ ಪ್ರಕರಣ: ಪಿಐಟಿ- ಎನ್‌ಡಿಪಿಎಸ್ ಕಾಯ್ದೆಯಡಿ ಆರೋಪಿಯ ಬಂಧನ…!

error: Content is protected !!