ಮುಲ್ಕಿ: ಭಾರತ ಸರಕಾರ ಯುವಕಾರ್ಯ ಮತ್ತು ಕ್ರೀಡಾ ಸಚಿವಾಲಯ ನೆಹರೂ ಯುವ ಕೇಂದ್ರ ಮಂಗಳೂರು, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಮಂಗಳೂರು, ಗ್ರಾಮ ಪಂಚಾಯತ್ ಪಡುಪಣಂಬೂರು, ರೋಟರಿ ಕ್ಲಬ್ ಬೈಕಂಪಾಡಿ ಇದರ ಸಹಕಾರದಲ್ಲಿ ಫೇಮಸ್ ಯೂತ್ ಕ್ಲಬ್ (ರಿ) ಮತ್ತು ಮಹಿಳಾ ಮಂಡಲ 10ನೇ ತೋಕೂರು ಹಳೆಯಂಗಡಿ ಇವರ ಆಶ್ರಯದಲ್ಲಿ ಕೇಂದ್ರ ಸಂಸ್ಕೃತಿ ಮತ್ತು ಯುವಜನ ವ್ಯವಹಾರಗಳು ಹಾಗೂ ಕ್ರೀಡಾ ಸಚಿವಾಲಯ, ನೆಹರೂ ಯುವ ಕೇಂದ್ರದ ಕಾರ್ಯಕ್ರಮದ ಅಡಿಯಲ್ಲಿ ದೇಶಾದ್ಯಂತ 01.09.2023 ರಿಂದ 30.09.2023 ರ ವರೆಗೆ ನಡೆಯುತ್ತಿರುವ “ನನ್ನ ಮಣ್ಣು ನನ್ನ ದೇಶ” MERI MATI MERA DESH ” ಕಾರ್ಯಕ್ರಮದ ಅಂಗವಾಗಿ ಶನಿವಾರದಂದು ಫೇಮಸ್ ಯೂತ್ ಕ್ಲಬ್ ನ ವ್ಯಾಪ್ತಿಯ ಮನೆಗಳಿಗೆ ತೆರಳಿ “ಅಮೃತ ಕಲಶಕ್ಕೆ ಮಣ್ಣನ್ನು ಹಾಕುವ” ಅಭಿಯಾನವನ್ನು ನಡೆಸಲಾಯಿತು.
ಕಾರ್ಯಕ್ರಮದಲ್ಲಿ ಪಡುಪಣಂಬೂರು ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶ್ರೀಮತಿ ಕುಸುಮ ಉಪಾಧ್ಯಕ್ಷರಾದ ಶ್ರೀ ಹೇಮನಾಥ ಅಮೀನ್ ಪಂಚಾಯತ್ ಅಭಿವೃದ್ಧಿ ಅಧಿಕಾರಿಯಾದ ಸುಧೀರ್, ಮುಲ್ಕಿ ತಾಲೂಕು ಪಂಚಾಯತ್ ಕಾರ್ಯನಿರ್ವಹಣಾಧಿಕಾರಿ ಗುರು ಶಾಂತಪ್ಪ, ಪ್ರಬಂಧಕರಾದ ಯೋಗೀಶ್ ಗ್ರಾಮ ಪಂಚಾಯತ್ ಸದಸ್ಯರಾದ ಮೋಹನ್ ದಾಸ್, ಜ್ಯೋತಿ ಕುಲಾಲ್, ಫೇಮಸ್ ಯೂತ್ ಕ್ಲಬ್ಬಿನ ಅಧ್ಯಕ್ಷರಾದ ಭಾಸ್ಕರ್ ಅಮೀನ್ ತೋಕೂರು, ಕಾರ್ಯದರ್ಶಿ ಹಿಮಕರ್ ಕೋಟ್ಯಾನ್, ಸದಸ್ಯರಾದ ಮೊಹಮ್ಮದ್ ಶರೀಫ್ ಮತ್ತು ವಿಶ್ವಜಿತ್ ಆಚಾರ್ಯ, ಮತ್ತು ರೋಟರಿ ಸಮುದಾಯದಳದ ಅಧ್ಯಕ್ಷರಾದ ಶ್ರೀ ಮೋಹನ್ ದಾಸ್ ದೇವಾಡಿಗ, ಮಹಿಳಾ ಮಂಡಲದ ಅಧ್ಯಕ್ಷರಾದ ಪ್ರೇಮಲತಾ ಯೋಗೀಶ್, ಉಪಾಧ್ಯಕ್ಷೆ ಅಮಿತಾ ದಿನಕರ್ ಸಾಲ್ಯಾನ್, ಕಾರ್ಯದರ್ಶಿ ಕುಸುಮ ಹರೀಶ್ ಕೋಟ್ಯಾನ್, ಕೋಶಾಧಿಕಾರಿ ಇಂದಿರಾ ಸಂಜೀವ ಕರ್ಕೇರ ಮತ್ತು ಮಹಿಳಾ ಮಂಡಲದ ಸದಸ್ಯರು ಹಾಗೂ ಗ್ರಾಮ ಪಂಚಾಯತ್ ಸಿಬ್ಬಂದಿಗಳು ಉಪಸ್ಥಿತರಿದ್ದರು.
ಬಾವಿಗೆ ಬಿದ್ದ ಹೆಣ್ಣು ಮಗುವನ್ನು ಸ್ಥಳೀಯ ಯುವಕ ರಕ್ಷಿಸಿದ ಘಟನೆ ವರದಿಯಾಗಿದೆ. ಉಳ್ಳಾಲದಲ್ಲಿ ಆಟವಾಡುತ್ತಾ ಎರಡೂವರೆ ಹರೆಯದ ಮಗುವೊಂದು ದಂಡೆಯಿಲ್ಲದ…
ಸಮಾಜದಲ್ಲಿ ಒಡಕುಂಟು ಮಾಡಿ, ದ್ವೇಷವನ್ನು ಬಿತ್ತುವ ಹಾಗೂ ಶಾಂತಿಯನ್ನು ಕದಡಲು ಪ್ರಚೋದನಾತ್ಮಕ ಭಾಷಣವನ್ನು ಯಾರು ಮಾಡಿದರೂ, ಅವರ ಮೇಲೆ ಪ್ರಕರಣ…
ಕರಾವಳಿಯ ಗಂಡುಕಲೆ ಎಂದೇ ಪ್ರಸಿದ್ಧ ಪಡೆದಿರುವ ಯಕ್ಷಗಾನ ಉತ್ತರ ಪ್ರದೇಶದ ಶ್ರೀರಾಮ ಜನ್ಮ ಭೂಮಿ ಅಯೋಧ್ಯೆಯಲ್ಲಿ ಪ್ರಪ್ರಥಮ ಬಾರಿಗೆ ಪ್ರದರ್ಶನವಾಗಿದೆ.…
ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ' ಕೃತಿಯನ್ನು ಬಿಡುಗಡೆ ಮಾಡಲಾಯಿತು. ಅಮೃತ ಪ್ರಕಾಶನದ 45ನೇ ಸರಣಿ ಕೃತಿ ಕೊಡಗಿನ ಚಿತ್ರ…
ಕಳೆದ ವಾರಗಳಿಂದೀಚೆಗೆ ಸುರಿಯುತ್ತಿರುವ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿಯಾಗಿದೆ. ಇಡ್ಕಿದು ಗ್ರಾಮದ ಬಡಜ ಸುಧಾ ಎಂಬವರ…
ಕೇಂದ್ರ ಸರಕಾರದ ಪಿಎಂಇಜಿಪಿ ಯೋಜನೆ ಅಡಿಯಲ್ಲಿ ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಕೋಟ್ಯಂತರ ರೂ. ಹಣ ವಂಚಿಸಿರುವ ಪ್ರಕರಣಕ್ಕೆ ಸಂಬಂಧಿಸಿ…