ಮಂಗಳೂರು : ತುಳು ಭಾಷೆಯಲ್ಲಿ ವಿವಿಧ ತರವಾದ ಪ್ರಾದೇಶಿಕ ಬದಲಾವಣೆಗಳಿವೆ, ಅಲ್ಲದೆ ಜಾತಿಯ ಬದಲಾವಣೆಗಳಿವೆ ಇದೆಲ್ಲವೂ ತುಳುನಾಡಿನ ತುಳು ಭಾಷೆಯ ವಿಶಿಷ್ಟತೆಯನ್ನು ಸಾರುತ್ತದೆ. ದಾನ ಧರ್ಮದ ಕೆಲಸದಲ್ಲಿ ನನ್ನ ಮನೆಯವರ ಸಹಕಾರ ಮತ್ತು ಶ್ರದ್ಧೆ ಇನ್ನಷ್ಟು ಉತ್ತೇಜಿಸಿದೆ . ನನ್ನಲ್ಲಿ ನನ್ನ ಧರ್ಮಪತ್ನಿ ಮಕ್ಕಳು ಯಾವುದೇ ಪ್ರೀತಿಯ ಆಕ್ಷೇಪಗಳನ್ನು ನೀಡದಿರುವುದೇ ಈ ರೀತಿಯ ಕೆಲಸ ಕಾರ್ಯಗಳ ಪ್ರೋತ್ಸಾಹ ಎಂದು ತುಳುವೆರೆ ಕರ್ಣೆ ಕನ್ಯಾನ ಸದಾಶಿವ ಶೆಟ್ಟಿ ಹೇಳಿದರು.
ಮಂಗಳೂರು ಪುರ ಭವನದಲ್ಲಿ ನಡೆದ ತುಳುವೆರೆ ಆಯನೊ ಕೂಟ ಕುಡ್ಲ ಇದರ ಪದಗ್ರಹಣ ಸಮಾರಂಭದಲ್ಲಿ ತುಳುವೆರೆ ಕರ್ಣೆ ಬಿರುದು ಸ್ವೀಕರಿಸಿ ಸದಾಶಿವ ಶೆಟ್ಟಿ ಕನ್ಯಾನ ಮಾತನಾಡಿದರು.
ಕಾರ್ಯಕ್ರಮವನ್ನು ಕಟೀಲು ಕ್ಷೇತ್ರದ ಅನುವಂಶಿಕ ಅರ್ಚಕರಾದ ಹರಿನಾರಾಯಣ ಅಸ್ರಣ್ಣರವರು ದೀಪ ಬೆಳಗಿಸಿ ಉದ್ಘಾಟಿಸಿದರು. ಸಮಾರಂಭದಲ್ಲಿ ಸಂಸದರಾದ ನಳಿನ್ ಕುಮಾರ್ ಕಟೀಲ್, ಮಂಗಳೂರು ದಕ್ಷಿಣ ಶಾಸಕ ವೇದವ್ಯಾಸ್ ಕಾಮತ್, ಕಾಪು ಶಾಸಕ ಸುರೇಶ್ ಶೆಟ್ಟಿ ಗುರ್ಮೆ, ಕರ್ನಾಟಕ ಮಾಜಿ ಸಚಿವರಾದ ರಮನಾಥ ರೈ, ವಿಶ್ವ ಬಂಟರ ಕೂಟಗಳ ಒಕ್ಕೂಟದ ಅಧ್ಯಕ್ಷ ಐಕಳ ಹರೀಶ್ ಶೆಟ್ಟಿ, ಮಾಜಿ ಮೇಯರ್ ಪ್ರೇಮಾನಂದ ಶೆಟ್ಟಿ, ಮಹಾನಗರ ಪಾಲಿಕೆ ಹಣಕಾಸು ಸ್ಥಾಯಿ ಸಮಿತಿ ಅಧ್ಯಕ್ಷ ವರುಣ್ ಚೌಟ, ನ್ಯಾಯವಾದಿ, ನೋಟರಿ ಪದ್ಮರಾಜ್, ಅಖಿಲ ಭಾರತ ತುಳು ಒಕ್ಕೂಟದ ಅಧ್ಯಕ್ಷ ಎ.ಸಿ ಭಂಡಾರಿ, ದಯಾನಂದ ಕತ್ತಲಸಾರ್, ಯೋಗೀಶ್ ಶೆಟ್ಟಿ ಜಪ್ಪು, ಪ್ರವೀಣ್ ಕುಮಾರ್ ಕೊಡಿಯಾಲ್ ಬೈಲ್ ಮೊದಲಾದವರು ಉಪಸ್ಥಿತರಿದ್ದರು.
ಖ್ಯಾತ ಸಂಗೀತ ನಿರ್ದೇಶಕ ಪ್ರಮೋದ ಸಪ್ರೆ ಮತ್ತು ಬಳಗದವರು ತುಳುನಾಡ ಗೀತೆ ಹಾಡಿದರು. ನವೀನ್ ಶೆಟ್ಟಿ ಎಡ್ಮೇಮಾರುರವರು ಕಾರ್ಯಕ್ರಮ ನಿರೂಪಿಸಿದರು. ಪದಗ್ರಹಣ ಸಮಾರಂಭದಲ್ಲಿ ಗೌರವಾಧ್ಯಕ್ಷರಾಗಿ ಮನೋಹರ್ ಶೆಟ್ಟಿ ಸಾಯಿ ರಾಧ ಗ್ರೂಪ್ ಆಡಳಿತ ನಿರ್ದೇಶಕ, ಅಧ್ಯಕ್ಷರಾಗಿ ಶಮೀನಾ ಆಳ್ವ, ಕಾರ್ಯದರ್ಶಿಯಾಗಿ ರಾಜೇಶ್ ಹೆಗ್ಡೆ ಪೊಳಲಿ, ಉಪಾಧ್ಯಕ್ಷರಾಗಿ ಗೋಪಾಡ್ಕರ್,ಆಶಾ ಶೆಟ್ಟಿ ಅತ್ತಾವರ, ಯಾದವ್ ಕೋಟ್ಯಾನ್ ಸಹಿತ ಎಲ್ಲಾ ಸದಸ್ಯರು ಪ್ರಮಾಣವಚನ ಸ್ವೀಕರಿಸಿದರು. ಡಾ. ರಾಜೇಶ್ ಆಳ್ವ ಪ್ರಮಾಣ ವಚನ ಬೋಧಿಸಿದರು.
ಅಗರಿ ಶ್ರೀನಿವಾಸ ಭಾಗವತರು ಬರೆದ, ಮೂಲ ಕನ್ನಡ ದೇವಿ ಮಹಾತ್ಮೆ ಪ್ರಸಂಗವನ್ನು ದೇವದಾಸ್ ಈಶ್ವರಮಂಗಲ ತುಳುವಿಗೆ ಅನುವಾದಿಸಿ, ಸರಪಾಡಿ ಅಶೋಕ್ ಶೆಟ್ಟಿ ಸಂಪಾದಿಸಿದ, ಐಲೇಸಾ ಬೆಂಗಳೂರು ಮತ್ತು ಟೋಟಲ್ ಕನ್ನಡ ಇವರು ಪುಸ್ತಕ ಪ್ರಕಾಶನ ಮಾಡಿದ ಸಿರಿ ದೇವಿ ಮಾತ್ಮೆ ಯಕ್ಷಗಾನ ಪ್ರಸಂಗ ಪುಸ್ತಕ ಬಿಡುಗಡೆಗೊಳಿಸಲಾಯಿತು.
ವಾಯ್ಸ್ ಆಫ್ ಆರಾಧನಾ ತಂಡದ ಮಕ್ಕಳಿಂದ ಜೋಕ್ಲೆ ಮಿನದನ ಕಾರ್ಯಕ್ರಮ ಉತ್ತಮವಾಗಿ ಮೂಡಿ ಬಂತು. ಮಂಗಳೂರು ಪುರಭವನದಲ್ಲಿ ಪ್ರಪ್ರಥಮ ಬಾರಿಗೆ ತುಳು ಭಾಷೆಯಲ್ಲಿ ಭಾಗವತಿಕೆ ಸಹಿತ ತುಳು ದೇವಿ ಮಹಾತ್ಮೆ ಯಕ್ಷಗಾನವನ್ನು ರಾಜ್ಯ ಪ್ರಶಸ್ತಿ ವಿಜೇತ ಸರಪಾಡಿ ಅಶೋಕ್ ಶೆಟ್ಟಿ ಸಂಯೋಜನೆಯಲ್ಲಿ ಸುಮಾರು 40 ಮಂದಿ ತೆಂಕುತಿಟ್ಟಿನ ಹೆಮ್ಮೆಯ ಕಲಾವಿದರ ಕೂಡುವಿಕೆಯಿಂದ ಯಕ್ಷಗಾನ ಬಯಲಾಟ ಯಶಸ್ವಿ ಪ್ರದರ್ಶನ ಕಂಡಿತು.
ಕಾರ್ಯಕ್ರಮದ ಕೊನೆಯಲ್ಲಿ ಸರಪಾಡಿ ಅಶೋಕ ಶೆಟ್ಟರನ್ನು ತುಳುವರೇ ಆಯನೊ ಕೂಟದ ಸದಸ್ಯರು ಮತ್ತು ಹಿತೈಷಿಗಳ ಸಮ್ಮುಖದಲ್ಲಿ ಡಾಕ್ಟರ್ ಮಂದಾರ ರಾಜೇಶ್ ಭಟ್ ಜೊತೆಗೂಡಿ ಗೌರವಿಸಿದರು.
ಇರಾನ್ನ ನೂತನ ಸುಪ್ರೀಂ ಲೀಡರ್ ಮೊಜ್ತಬಾ ಖಮೇನಿ ಅವರ ಆರೋಗ್ಯ ಹಾಗೂ ಅವರು ಎಲ್ಲಿದ್ದಾರೆ ಎಂಬ ಕುರಿತು ಜಾಗತಿಕ ಮಟ್ಟದಲ್ಲಿ…
ಥೈಲ್ಯಾಂಡ್ನ ರಾಜಧಾನಿ ಬ್ಯಾಂಕಾಕ್ ಸಮೀಪದ ಶಾಲೆಯೊಂದರಲ್ಲಿ 9ನೇ ತರಗತಿ ವಿದ್ಯಾರ್ಥಿಯೊಬ್ಬ ನಡೆಸಿದ ಗುಂಡಿನ ದಾಳಿಯಲ್ಲಿ ಶಿಕ್ಷಕರೊಬ್ಬರು ಮೃತಪಟ್ಟಿದ್ದು, ಕನಿಷ್ಠ 15…
ಮೂಡಬಿದ್ರೆಯ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ ಆಯೋಜಿಸಿರುವ ಆಳ್ವಾಸ್ ಪ್ರಗತಿ-2026 ಬೃಹತ್ ಉದ್ಯೋಗ ಮೇಳಕ್ಕೆ ತೆರಳಲು ಬಂಟ್ವಾಳದಿಂದ ಶುಕ್ರವಾರ ಎರಡು ಉಚಿತ…
ರಾಷ್ಟ್ರೀಯ ಹೆದ್ದಾರಿ 75ರ ಸುರಿಕುಮೇರು ಸಮೀಪದ ಹಿಂದೂಸ್ತಾನ್ ಪೆಟ್ರೋಲ್ ಬಂಕ್ ಬಳಿ ನಡೆದ ರಸ್ತೆ ಅಪಘಾತದಲ್ಲಿ ಒಂದೇ ಕುಟುಂಬದ ಆರು…
ಬಿ.ಸಿ.ರೋಡ್ನ ಎನ್.ಜಿ. ಸರ್ಕಲ್ನಲ್ಲಿ ಗುರುವಾರ ಸಂಜೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಇಬ್ಬರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.…
ಕಳೆದ ಒಂದು ವಾರದಿಂದ ನ್ಯುಮೋನಿಯಾ ಜ್ವರದಿಂದ ಬಳಲುತ್ತಿದ್ದ ವಿದ್ಯಾರ್ಥಿನಿಯೊಬ್ಬಳು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿರುವ ದುಃಖದ ಘಟನೆ ನಡೆದಿದೆ. ಮೃತ ವಿದ್ಯಾರ್ಥಿನಿಯನ್ನು…