ರಾಷ್ಟ್ರೀಯ ಹೆದ್ದಾರಿ 66ರ ಅವ್ಯವಸ್ಥೆಯನ್ನು ಖಂಡಿಸಿ, ಸುರತ್ಕಲ್ ಬ್ಲಾಕ್ ಕಾಂಗ್ರೆಸ್ ಸಮಿತಿ ವತಿಯಿಂದ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಇನಾಯತ್ ಅಲಿ ನೇತೃತ್ವದಲ್ಲಿ ಕೂಳೂರಿನಲ್ಲಿ ಪ್ರತಿಭಟನಾ ಸಭೆ ನಡೆಯಿತು. ‘ರಾಷ್ಟ್ರೀಯ ಹೆದ್ದಾರಿಯ ಅವ್ಯವಸ್ಥೆಯನ್ನು ಸರಿಪಡಿಸುವ ಬಗ್ಗೆ ಜಿಲ್ಲೆಯ ಸಂಸದರ ಭರವಸೆ ಕೇವಲ ಭಾಷಣಕ್ಕೆ ಮಾತ್ರ ಸೀಮಿತವಾಗಿದೆ. ಕೂಳೂರು ಸೇತುವೆ ಸಂಚಾರಕ್ಕೆ ಸಮರ್ಥವಲ್ಲ ಎಂದು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳು ನಾಲ್ಕು ವರ್ಷಗಳ ಹಿಂದೆಯೇ ವರದಿ ನೀಡಿದ್ದರೂ ಹೊಸ ಸೇತುವೆಯ ಕಾಮಗಾರಿ ಆಮೆಗತಿಯಲ್ಲಿ ಸಾಗುತ್ತಿದೆ. ಪಂಪ್ವೆಲ್ ಸೇತುವೆ ಮಾಡಲು ಹತ್ತು ವರ್ಷ ಬೇಕಾಯಿತು, ಇನ್ನು ಕೆಪಿಟಿ, ನಂತೂರು ಸೇತುವೆ ಮಾಡಲು ಇಪ್ಪತ್ತು ವರ್ಷ ಬೇಕಾಗಬಹುದೆ’ ಎಂದು ಪ್ರತಿಭಟನೆಯನ್ನುದ್ದೇಶಿಸಿ ಮಾತನಾಡಿದ ಇನಾಯತ್ ಅಲಿ ಅವರು ಪ್ರಶ್ನಿಸಿದರು.
‘ಮುಂದಿನ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರಲಿದ್ದು, ಒಂದೆರಡು ವರ್ಷದಲ್ಲಿ ಸೇತುವೆ ಮಾಡಬೇಡಿ’ ಎಂದು ವ್ಯಂಗ್ಯವಾಗಿ ಹೇಳಿದರು. ‘ಇಲ್ಲಿನ ಶಾಸಕರಿಗೆ ಈ ಬಗ್ಗೆ ಕಿಂಚಿತ್ತು ಕಾಳಜಿಯೇ ಇಲ್ಲ, ಶಾಸಕರಿಗೆ ಅಭಿವೃದ್ಧಿಯ ಭಾಷೆಯೇ ಗೊತ್ತಿಲ್ಲ, ಅವರದ್ದು ಪ್ರಚೋದನಕಾರಿ ಭಾಷೆ ಮಾತ್ರ’ ಎಂದು ಇನಾಯತ್ ಅಲಿ ಮಾತನಾಡಿದರು.
ಸುರತ್ಕಲ್ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪುರುಷೋತ್ತಮ ಚಿತ್ರಾಪುರ, ಗುರುಪುರ ಬ್ಲಾಕ್ ಅಧ್ಯಕ್ಷ ಸುರೇಂದ್ರ ಕಂಬಳಿ, ಮಾಜಿ ಮೇಯರ್ಗಳಾದ ಶಶಿಧರ್ ಹೆಗ್ಡೆ, ಮಹಾಬಲ ಮಾರ್ಲ, ಹರಿನಾಥ್, ಕವಿತಾ ಸನಿಲ್, ಕಾರ್ಪೋರೆಟರ್ ಅನಿಲ್ ಕುಮಾರ್, ಮುಖಂಡರಾದ ಪ್ರತಿಭಾ ಕುಳಾಯಿ, ಗೋವರ್ಧನ್ ಶೆಟ್ಟಿಗಾರ್, ಪದ್ಮನಾಭ ಅಮೀನ್, ಬಿ.ಕೆ. ತಾರಾನಾಥ್, ರಾಜೇಶ್ ಕುಳಾಯಿ, ರೆಹಮಾನ್ ಖಾನ್ ಕುಂಜತ್ತಬೈಲ್ ಮತ್ತಿತರರು ಉಪಸ್ಥಿತರಿದ್ದರು.
ಕನ್ನಡ ಜಾನಪದ ಪರಿಷತ್ ಉಡುಪಿ ಜಿಲ್ಲಾಧ್ಯಕ್ಷ, ಜಾನಪದ ಕಲಾವಿದ ಡಾ.ಗಣೇಶ್ ಗಂಗೊಳ್ಳಿ ಅವರು ಇಂದು ನಿಧನರಾಗಿದ್ದಾರೆ. ಕಳೆದ ರಾತ್ರಿ ಸಮಾರಂಭವೊಂದರಲ್ಲಿ…
ಕೆಎಸ್ಆರ್ಟಿಸಿ ಬಸ್ ಡಿಕ್ಕಿಯಾಗಿ ಮಹಿಳೆಯೋರ್ವರು ಸ್ಥಳದಲ್ಲೇ ಮೃತಪಟ್ಟ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ತೆಕ್ಕಟ್ಟೆ ಪ್ರೆಸಿಡೆಂಟ್ ಕನ್ವೆನ್ಷನ್ ಹಾಲ್ ಮುಂಭಾಗ…
ಕನ್ನಡ ಚಿತ್ರರಂಗದ ಖ್ಯಾತ ನಟ ಹಾಗೂ ನಿರ್ದೇಶಕ ರಿಷಬ್ ಶೆಟ್ಟಿ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಕುಟುಂಬ ಸಮೇತರಾಗಿ ಆಗಮಿಸಿದ್ದಾರೆ. ರಿಷಬ್…
ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು -ಸುಳ್ಯ ರಾಷ್ಟ್ರೀಯ ಹೆದ್ದಾರಿಯ ಕೌಡಿಚ್ಚಾರು ಎಂಬಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಪಿಕಪ್ ವಾಹನ ಮೋರಿಗೆ…
ಸರ್ಕಾರಿ ಬಸ್ ಮತ್ತು ಕಾರಿನ ಮಧ್ಯೆ ಡಿಕ್ಕಿ ಸಂಭವಿಸಿ ಕಾರಿನಲ್ಲಿದ್ದ ಮಹಿಳೆಯೊಬ್ಬರು ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. ಈ ಘಟನೆ ದಕ್ಷಿಣ…
ವಸತಿಗೃಹವೊಂದರ ಮುಂಭಾಗದಲ್ಲಿ ನಿಲ್ಲಿಸಲಾಗಿದ್ದ ಬೈಕ್ ಕಳವು ಮಾಡಿದ ಆರೋಪಿಗಳಿಬ್ಬರನ್ನು ಬಂಟ್ವಾಳ ನಗರ ಠಾಣಾ ಪೋಲೀಸರು ಬಂಧಿಸಿದ್ದಾರೆ. ಬಂಟ್ವಾಳ ಸಜೀಪ ಮುನ್ನೂರು…