ರಾಷ್ಟ್ರೀಯ ಹೆದ್ದಾರಿ 66ರ ಅವ್ಯವಸ್ಥೆಯನ್ನು ಖಂಡಿಸಿ, ಸುರತ್ಕಲ್ ಬ್ಲಾಕ್ ಕಾಂಗ್ರೆಸ್ ಸಮಿತಿ ವತಿಯಿಂದ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಇನಾಯತ್ ಅಲಿ ನೇತೃತ್ವದಲ್ಲಿ ಕೂಳೂರಿನಲ್ಲಿ ಪ್ರತಿಭಟನಾ ಸಭೆ ನಡೆಯಿತು. ‘ರಾಷ್ಟ್ರೀಯ ಹೆದ್ದಾರಿಯ ಅವ್ಯವಸ್ಥೆಯನ್ನು ಸರಿಪಡಿಸುವ ಬಗ್ಗೆ ಜಿಲ್ಲೆಯ ಸಂಸದರ ಭರವಸೆ ಕೇವಲ ಭಾಷಣಕ್ಕೆ ಮಾತ್ರ ಸೀಮಿತವಾಗಿದೆ. ಕೂಳೂರು ಸೇತುವೆ ಸಂಚಾರಕ್ಕೆ ಸಮರ್ಥವಲ್ಲ ಎಂದು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳು ನಾಲ್ಕು ವರ್ಷಗಳ ಹಿಂದೆಯೇ ವರದಿ ನೀಡಿದ್ದರೂ ಹೊಸ ಸೇತುವೆಯ ಕಾಮಗಾರಿ ಆಮೆಗತಿಯಲ್ಲಿ ಸಾಗುತ್ತಿದೆ. ಪಂಪ್ವೆಲ್ ಸೇತುವೆ ಮಾಡಲು ಹತ್ತು ವರ್ಷ ಬೇಕಾಯಿತು, ಇನ್ನು ಕೆಪಿಟಿ, ನಂತೂರು ಸೇತುವೆ ಮಾಡಲು ಇಪ್ಪತ್ತು ವರ್ಷ ಬೇಕಾಗಬಹುದೆ’ ಎಂದು ಪ್ರತಿಭಟನೆಯನ್ನುದ್ದೇಶಿಸಿ ಮಾತನಾಡಿದ ಇನಾಯತ್ ಅಲಿ ಅವರು ಪ್ರಶ್ನಿಸಿದರು.
‘ಮುಂದಿನ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರಲಿದ್ದು, ಒಂದೆರಡು ವರ್ಷದಲ್ಲಿ ಸೇತುವೆ ಮಾಡಬೇಡಿ’ ಎಂದು ವ್ಯಂಗ್ಯವಾಗಿ ಹೇಳಿದರು. ‘ಇಲ್ಲಿನ ಶಾಸಕರಿಗೆ ಈ ಬಗ್ಗೆ ಕಿಂಚಿತ್ತು ಕಾಳಜಿಯೇ ಇಲ್ಲ, ಶಾಸಕರಿಗೆ ಅಭಿವೃದ್ಧಿಯ ಭಾಷೆಯೇ ಗೊತ್ತಿಲ್ಲ, ಅವರದ್ದು ಪ್ರಚೋದನಕಾರಿ ಭಾಷೆ ಮಾತ್ರ’ ಎಂದು ಇನಾಯತ್ ಅಲಿ ಮಾತನಾಡಿದರು.
ಸುರತ್ಕಲ್ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪುರುಷೋತ್ತಮ ಚಿತ್ರಾಪುರ, ಗುರುಪುರ ಬ್ಲಾಕ್ ಅಧ್ಯಕ್ಷ ಸುರೇಂದ್ರ ಕಂಬಳಿ, ಮಾಜಿ ಮೇಯರ್ಗಳಾದ ಶಶಿಧರ್ ಹೆಗ್ಡೆ, ಮಹಾಬಲ ಮಾರ್ಲ, ಹರಿನಾಥ್, ಕವಿತಾ ಸನಿಲ್, ಕಾರ್ಪೋರೆಟರ್ ಅನಿಲ್ ಕುಮಾರ್, ಮುಖಂಡರಾದ ಪ್ರತಿಭಾ ಕುಳಾಯಿ, ಗೋವರ್ಧನ್ ಶೆಟ್ಟಿಗಾರ್, ಪದ್ಮನಾಭ ಅಮೀನ್, ಬಿ.ಕೆ. ತಾರಾನಾಥ್, ರಾಜೇಶ್ ಕುಳಾಯಿ, ರೆಹಮಾನ್ ಖಾನ್ ಕುಂಜತ್ತಬೈಲ್ ಮತ್ತಿತರರು ಉಪಸ್ಥಿತರಿದ್ದರು.
ಮುಡಿಪು-ಬಿ. ಸಿ. ರೋಡ್ ರಸ್ತೆಯ ಸಜಿಪ ಎಂಬಲ್ಲಿ ಕಾರು ಮತ್ತು ಆಕ್ಟಿವಾ ಸ್ಕೂಟರ್ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ…
ಎಂಆರ್ಜಿ ಸಮೂಹದ ಸಂಸ್ಥಾಪಕ ಹಾಗೂ ಅಧ್ಯಕ್ಷರಾದ ಡಾ. ಕೆ. ಪ್ರಕಾಶ್ ಶೆಟ್ಟಿ ಅವರು ತಮ್ಮ ಉದ್ಯಮ ಸಮೂಹಕ್ಕೆ ಖಾಸಗಿ ವಿಮಾನವನ್ನು…
ಬಸ್ವೊಂದು ಸ್ಕೂಟಿಗೆ ಡಿಕ್ಕಿ ಹೊಡೆದ ಪರಿಣಾಮ ಸ್ಕೂಟಿ ಸವಾರ ಗಂಭೀರವಾಗಿ ಗಾಯಗೊಂಡ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ಕಾಪು…
ಮುಡಿಪು-ಬಿ. ಸಿ. ರೋಡ್ ರಸ್ತೆಯ ಸಜಿಪ ಎಂಬಲ್ಲಿ ಕಾರು ಮತ್ತು ಆಕ್ಟಿವಾ ಸ್ಕೂಟರ್ ನಡುವೆ ಸಂಭವಿಸಿದ ಭೀಕರ ರಸ್ತೆ…
ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಭೇಟಿ ನೀಡಿ ದೇವಿ ಮೂಕಾಂಬಿಕಾ…
ಮಳೆಗಾಲ ಆರಂಭವಾಗುತ್ತಿದ್ದಂತೆ ಸೇತುವೆಯೊಂದು ಕುಸಿದು ಬಿದ್ದ ಪರಿಣಾಮ ಹಲವು ಗ್ರಾಮಗಳ ಸಂಪರ್ಕದ ಕೊಂಡಿ ಕಳಚಿ ಬಿದ್ದು, ಜನರು ದ್ವೀಪದಂತೆ, ಹಳ್ಳಿಯೊಳಗೆ…