ಜನ ಮನದ ನಾಡಿ ಮಿಡಿತ

Advertisement

ಬಂಟ್ವಾಳ: ಆರ್ಟ್ ಗ್ಯಾಲರಿ ಮಾಲಕರ ಶವ ಕೆರೆಯಲ್ಲಿ ಪತ್ತೆ

ಬಂಟ್ವಾಳ : ಮಾಣಿ – ಮೈಸೂರು ರಾಜ್ಯ ಹೆದ್ದಾರಿಯ ನೇರಳಕಟ್ಟೆ ಸಮೀಪದ ಪರ್ಲೊಟ್ಟು ಎಂಬಲ್ಲಿ ಸೋಮವಾರ ಮುಂಜಾನೆ ವ್ಯಕ್ತಿಯೋರ್ವ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಬಗ್ಗೆ ವರದಿಯಾಗಿದೆ.

ಮೃತರನ್ನು ಸೂರಿಕುಮೇರ್ ನಿವಾಸಿ ಅಮೂಲ್ಯ ಆರ್ಟ್ ಗ್ಯಾಲರಿ ಮಾಲಕ, ಎಲ್ಲೈಸಿ ಏಜೆಂಟ್ ನಾರಾಯಣ ಕುಲಾಲ್ ಎಂದು ಗುರುತಿಸಲಾಗಿದೆ.

ಸೋಮವಾರ ಮುಂಜಾನೆ 5 ರ ವೇಳೆಗೆ ಪರ್ಲೊಟ್ಟು ಎಂಬಲ್ಲಿನ ಕೆರೆಯ ಬಳಿ ಬೈಕ್, ಮೊಬೈಲ್, ಚಪ್ಪಲಿಯನ್ನು ನೋಡಿದ ಸ್ಥಳೀಯರು ಯಾರೋ ಕೆರೆಗೆ ಹಾರಿ ಆತ್ಮಹತ್ಯೆ ಗೈದಿರಬೇಕು ಎಂಬ ಸಂಶಯದಿಂದ ವಿಟ್ಲ ಪೊಲೀಸ್ ಠಾಣೆ ಹಾಗೂ ಅಗ್ನಿಶಾಮಕ ದಳದವರಿಗೆ ತಿಳಿಸಿದ್ದಾರೆ.

ಅಗ್ನಿಶಾಮಕ ದಳದವರು ಸ್ಥಳಕ್ಕೆ ಆಗಮಿಸಿದ್ದು ಕೆರೆಯಲ್ಲಿ ಹುಡುಕಾಟ ನಡೆಸಿ ಮೃತದೇಹವನ್ನು ಹೊರಗೆ ತೆಗೆದಿದ್ದಾರೆ. ಅಲ್ಲಿ ಸೇರಿದವರು ಮೃತನನ್ನು ಗುರುತಿಸಿದ್ದಾರೆ. ವಿಟ್ಲ ಠಾಣಾ ಪೊಲೀಸರು ಸ್ಥಳಕ್ಕೆ ಬೇಟಿ ನೀಡಿದ್ದು ಮುಂದಿನ ತನಿಖೆ ನಡೆಸುತ್ತಿದ್ದಾರೆ.

ಪ್ರಥಮ ನೋಟದಲ್ಲಿ ಇದು ಆತ್ಮಹತ್ಯೆ ಎಂದು ಕಂಡುಬಂದರೂ ಘಟನೆಯ ಬಗ್ಗೆ ಹೆಚ್ಚಿನ ಮಾಹಿತಿ ಪೊಲೀಸ್ ತನಿಖೆಯಿಂದ ತಿಳಿದುಬರಬೇಕಾಗಿದೆ.

Leave a Reply

Your email address will not be published. Required fields are marked *

ಟೆಹ್ರಾನ್: ಖಮೇನಿ ಭೇಟಿಯಲ್ಲೇ ಹೊಸ ರಹಸ್ಯ! ‘ನೀವೇ ಖಮೇನಿಯೇ?’ ಎಂದು ಪ್ರಶ್ನಿಸಿದ ಇರಾನ್ ಅಧ್ಯಕ್ಷ…!

ಬ್ಯಾಂಕಾಕ್: ಥೈಲ್ಯಾಂಡ್ ಶಾಲೆಯಲ್ಲಿ ಗುಂಡಿನ ದಾಳಿ: ಶಿಕ್ಷಕ ಸಾವು, 15 ಮಂದಿಗೆ ಗಾಯ…!

ಬಂಟ್ವಾಳ: ಆಳ್ವಾಸ್ ಪ್ರಗತಿ-2026 ಉದ್ಯೋಗ ಮೇಳಕ್ಕೆ ಬಂಟ್ವಾಳದಿಂದ ಉಚಿತ ಬಸ್…!

ಮಂಗಳೂರು: ರಾಷ್ಟ್ರೀಯ ಹೆದ್ದಾರಿ 75ರಲ್ಲಿ ಕಾರು ಅಪಘಾತ: ಒಂದೇ ಕುಟುಂಬದ ಆರು ಮಂದಿಗೆ ಗಾಯ…!

ಬಂಟ್ವಾಳ: ಬಿ.ಸಿ.ರೋಡ್ ಎನ್.ಜಿ. ಸರ್ಕಲ್‌ನಲ್ಲಿ ಭೀಕರ ಅಪಘಾತ: ಚಿಕಿತ್ಸೆ ಫಲಕಾರಿಯಾಗದೆ ಇಬ್ಬರು ಮೃತ್ಯು…!

ಮಂಗಳೂರು: ನ್ಯುಮೋನಿಯಾಗೆ 6ನೇ ತರಗತಿ ವಿದ್ಯಾರ್ಥಿನಿ ಬಲಿ

ಬಂಟ್ವಾಳ: ಬಿಸಿರೋಡು–ಅಡ್ಡಹೊಳೆ ಚತುಷ್ಪಥ ಕಾಮಗಾರಿ ನಿಂತಿಲ್ಲ: ಕೆಎನ್‌ಆರ್‌ಸಿಎಲ್ ಸ್ಪಷ್ಟನೆ

ವಾಷಿಂಗ್ಟನ್: ಟ್ರಂಪ್ ಸುಂಕಕ್ಕೆ ಸುಪ್ರೀಂ ಕೋರ್ಟ್ ಬ್ರೇಕ್; ಕಂಪನಿಗಳಿಗೆ ಬಿಲಿಯನ್‌ಗಟ್ಟಲೆ ಮರುಪಾವತಿ..!

ಟೆಹ್ರಾನ್: ಮೊಜ್ತಬಾ ಖಮೇನಿ ಸಂಪರ್ಕಿಸುವುದು ಕಷ್ಟ; ಇರಾನ್ ಅಧ್ಯಕ್ಷರ ಬಹಿರಂಗ ಹೇಳಿಕೆ…!

error: Content is protected !!