ಮುಲ್ಕಿ: ಶ್ರೀ ರಾಧಾ ಸುರಭಿ ಗೋ ಮಂದಿರ, ರಾಷ್ಟ್ರೀಯ ಗೋ ಸೇವಾ ಸಂಸ್ಥಾನ ಬಂಟ್ವಾಳ ಮತ್ತು ಗೋಸೇವಾ ಗತಿ ವಿಧಿ ಕರ್ನಾಟಕದ ಸಂಯುಕ್ತ ಆಶ್ರಯದಲ್ಲಿ ಗೋ ನವರಾತ್ರಿ ಉತ್ಸವದ ಸಂದೇಶ ಮತ್ತು ಉದ್ದೇಶವನ್ನು ಸಾರುವ ಗೋ ರಥಯಾತ್ರೆ ಮುಲ್ಕಿ ಸೀಮೆಯ ಒಂಬತ್ತು ಮಾಗಣೆಯ ಬಪ್ಪನಾಡು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನಕ್ಕೆ ಆಗಮಿಸಿತು.
ದೇವಸ್ಥಾನದ ಆಡಳಿತ ಮೊಕ್ತೇಸರ ಮನೋಹರ ಶೆಟ್ಟಿ, ಸಹಿತ ಭಕ್ತಾದಿಗಳು ಸ್ವಾಗತಿಸಿದರು.
ಬಳಿಕ ದೇವಸ್ಥಾನದ ಅರ್ಚಕ ಶ್ರೀಪತಿ ಉಪಾಧ್ಯಾಯ ನೇತೃತ್ವದಲ್ಲಿ ಗೋಪೂಜೆ ನಡೆಯಿತು.
ಈ ಸಂದರ್ಭ ಸುನಿಲ್ ಆಳ್ವ, ಮಹೀಮ್ ಹೆಗ್ಡೆ, ವೈ ಎನ್ ಸಾಲ್ಯಾನ್, ಗಂಗಾಧರ ಶೆಟ್ಟಿ ಬರ್ಕೆ ತೋಟ ಮತ್ತಿತರರು ಉಪಸ್ಥಿತರಿದ್ದರು.
ರಾಧಾ ಸುರಭಿ ಗೋ ಮಂದಿರ, ರಾಷ್ಟ್ರೀಯ ಗೋ ಸೇವಾ ಸಂಸ್ಥಾನ ಬಂಟ್ವಾಳ ಮತ್ತು ಗೋಸೇವಾ ಗತಿ ವಿಧಿ ಕರ್ನಾಟಕದ ಸಂಯುಕ್ತ ಆಶ್ರಯದಲ್ಲಿ ಗೋ ನವರಾತ್ರಿ ಉತ್ಸವದ ಸಂದೇಶ ಮತ್ತು ಉದ್ದೇಶವನ್ನು ಸಾರುವ ಗೋ ರಥಯಾತ್ರೆ ಮುಲ್ಕಿ ಸೀಮೆ ಅರಮನೆ ಪ್ರವೇಶಿಸಿತು.
ಸೀಮೆಯ ಅರಸರಾದ ದುಗ್ಗಣ್ಣ ಸಾವಂತರು ಗೋವಿಗೆ ವಿಶೇಷ ಪೂಜೆ ಸಲ್ಲಿಸಿದರು.
ಈ ಸಂದರ್ಭ ಪಡುಪಣಂಬೂರು ಗ್ರಾಪಂ ಮಾಜೀ ಅಧ್ಯಕ್ಷ ವಿನೋದ್ ಸಾಲ್ಯಾನ್,ಪಿಸಿಎ ಬ್ಯಾಂಕ್ ನಿರ್ದೇಶಕ ಶ್ಯಾಮ್ ಪ್ರಸಾದ್ , ಗೌತಮ್ ಜೈನ್ ಮುಲ್ಕಿ ಅರಮನೆ ಮತ್ತಿತರರು ಉಪಸ್ಥಿತರಿದ್ದರು.
ಬಳಿಕ ಗೋಯಾತ್ರೆ ಯು ಚಿತ್ರಾಪು ಮೂಲಕ ಮುಲ್ಕಿಗೆ ಸಂಚರಿಸಿತು.
ಇರಾನ್ನ ನೂತನ ಸುಪ್ರೀಂ ಲೀಡರ್ ಮೊಜ್ತಬಾ ಖಮೇನಿ ಅವರ ಆರೋಗ್ಯ ಹಾಗೂ ಅವರು ಎಲ್ಲಿದ್ದಾರೆ ಎಂಬ ಕುರಿತು ಜಾಗತಿಕ ಮಟ್ಟದಲ್ಲಿ…
ಥೈಲ್ಯಾಂಡ್ನ ರಾಜಧಾನಿ ಬ್ಯಾಂಕಾಕ್ ಸಮೀಪದ ಶಾಲೆಯೊಂದರಲ್ಲಿ 9ನೇ ತರಗತಿ ವಿದ್ಯಾರ್ಥಿಯೊಬ್ಬ ನಡೆಸಿದ ಗುಂಡಿನ ದಾಳಿಯಲ್ಲಿ ಶಿಕ್ಷಕರೊಬ್ಬರು ಮೃತಪಟ್ಟಿದ್ದು, ಕನಿಷ್ಠ 15…
ಮೂಡಬಿದ್ರೆಯ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ ಆಯೋಜಿಸಿರುವ ಆಳ್ವಾಸ್ ಪ್ರಗತಿ-2026 ಬೃಹತ್ ಉದ್ಯೋಗ ಮೇಳಕ್ಕೆ ತೆರಳಲು ಬಂಟ್ವಾಳದಿಂದ ಶುಕ್ರವಾರ ಎರಡು ಉಚಿತ…
ರಾಷ್ಟ್ರೀಯ ಹೆದ್ದಾರಿ 75ರ ಸುರಿಕುಮೇರು ಸಮೀಪದ ಹಿಂದೂಸ್ತಾನ್ ಪೆಟ್ರೋಲ್ ಬಂಕ್ ಬಳಿ ನಡೆದ ರಸ್ತೆ ಅಪಘಾತದಲ್ಲಿ ಒಂದೇ ಕುಟುಂಬದ ಆರು…
ಬಿ.ಸಿ.ರೋಡ್ನ ಎನ್.ಜಿ. ಸರ್ಕಲ್ನಲ್ಲಿ ಗುರುವಾರ ಸಂಜೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಇಬ್ಬರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.…
ಕಳೆದ ಒಂದು ವಾರದಿಂದ ನ್ಯುಮೋನಿಯಾ ಜ್ವರದಿಂದ ಬಳಲುತ್ತಿದ್ದ ವಿದ್ಯಾರ್ಥಿನಿಯೊಬ್ಬಳು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿರುವ ದುಃಖದ ಘಟನೆ ನಡೆದಿದೆ. ಮೃತ ವಿದ್ಯಾರ್ಥಿನಿಯನ್ನು…