ಮುಲ್ಕಿ: ಶ್ರೀ ರಾಧಾ ಸುರಭಿ ಗೋ ಮಂದಿರ, ರಾಷ್ಟ್ರೀಯ ಗೋ ಸೇವಾ ಸಂಸ್ಥಾನ ಬಂಟ್ವಾಳ ಮತ್ತು ಗೋಸೇವಾ ಗತಿ ವಿಧಿ ಕರ್ನಾಟಕದ ಸಂಯುಕ್ತ ಆಶ್ರಯದಲ್ಲಿ ಗೋ ನವರಾತ್ರಿ ಉತ್ಸವದ ಸಂದೇಶ ಮತ್ತು ಉದ್ದೇಶವನ್ನು ಸಾರುವ ಗೋ ರಥಯಾತ್ರೆ ಮುಲ್ಕಿ ಸೀಮೆಯ ಒಂಬತ್ತು ಮಾಗಣೆಯ ಬಪ್ಪನಾಡು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನಕ್ಕೆ ಆಗಮಿಸಿತು.
ದೇವಸ್ಥಾನದ ಆಡಳಿತ ಮೊಕ್ತೇಸರ ಮನೋಹರ ಶೆಟ್ಟಿ, ಸಹಿತ ಭಕ್ತಾದಿಗಳು ಸ್ವಾಗತಿಸಿದರು.
ಬಳಿಕ ದೇವಸ್ಥಾನದ ಅರ್ಚಕ ಶ್ರೀಪತಿ ಉಪಾಧ್ಯಾಯ ನೇತೃತ್ವದಲ್ಲಿ ಗೋಪೂಜೆ ನಡೆಯಿತು.
ಈ ಸಂದರ್ಭ ಸುನಿಲ್ ಆಳ್ವ, ಮಹೀಮ್ ಹೆಗ್ಡೆ, ವೈ ಎನ್ ಸಾಲ್ಯಾನ್, ಗಂಗಾಧರ ಶೆಟ್ಟಿ ಬರ್ಕೆ ತೋಟ ಮತ್ತಿತರರು ಉಪಸ್ಥಿತರಿದ್ದರು.
ರಾಧಾ ಸುರಭಿ ಗೋ ಮಂದಿರ, ರಾಷ್ಟ್ರೀಯ ಗೋ ಸೇವಾ ಸಂಸ್ಥಾನ ಬಂಟ್ವಾಳ ಮತ್ತು ಗೋಸೇವಾ ಗತಿ ವಿಧಿ ಕರ್ನಾಟಕದ ಸಂಯುಕ್ತ ಆಶ್ರಯದಲ್ಲಿ ಗೋ ನವರಾತ್ರಿ ಉತ್ಸವದ ಸಂದೇಶ ಮತ್ತು ಉದ್ದೇಶವನ್ನು ಸಾರುವ ಗೋ ರಥಯಾತ್ರೆ ಮುಲ್ಕಿ ಸೀಮೆ ಅರಮನೆ ಪ್ರವೇಶಿಸಿತು.
ಸೀಮೆಯ ಅರಸರಾದ ದುಗ್ಗಣ್ಣ ಸಾವಂತರು ಗೋವಿಗೆ ವಿಶೇಷ ಪೂಜೆ ಸಲ್ಲಿಸಿದರು.
ಈ ಸಂದರ್ಭ ಪಡುಪಣಂಬೂರು ಗ್ರಾಪಂ ಮಾಜೀ ಅಧ್ಯಕ್ಷ ವಿನೋದ್ ಸಾಲ್ಯಾನ್,ಪಿಸಿಎ ಬ್ಯಾಂಕ್ ನಿರ್ದೇಶಕ ಶ್ಯಾಮ್ ಪ್ರಸಾದ್ , ಗೌತಮ್ ಜೈನ್ ಮುಲ್ಕಿ ಅರಮನೆ ಮತ್ತಿತರರು ಉಪಸ್ಥಿತರಿದ್ದರು.
ಬಳಿಕ ಗೋಯಾತ್ರೆ ಯು ಚಿತ್ರಾಪು ಮೂಲಕ ಮುಲ್ಕಿಗೆ ಸಂಚರಿಸಿತು.
ಮುಡಿಪು-ಬಿ. ಸಿ. ರೋಡ್ ರಸ್ತೆಯ ಸಜಿಪ ಎಂಬಲ್ಲಿ ಕಾರು ಮತ್ತು ಆಕ್ಟಿವಾ ಸ್ಕೂಟರ್ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ…
ಎಂಆರ್ಜಿ ಸಮೂಹದ ಸಂಸ್ಥಾಪಕ ಹಾಗೂ ಅಧ್ಯಕ್ಷರಾದ ಡಾ. ಕೆ. ಪ್ರಕಾಶ್ ಶೆಟ್ಟಿ ಅವರು ತಮ್ಮ ಉದ್ಯಮ ಸಮೂಹಕ್ಕೆ ಖಾಸಗಿ ವಿಮಾನವನ್ನು…
ಬಸ್ವೊಂದು ಸ್ಕೂಟಿಗೆ ಡಿಕ್ಕಿ ಹೊಡೆದ ಪರಿಣಾಮ ಸ್ಕೂಟಿ ಸವಾರ ಗಂಭೀರವಾಗಿ ಗಾಯಗೊಂಡ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ಕಾಪು…
ಮುಡಿಪು-ಬಿ. ಸಿ. ರೋಡ್ ರಸ್ತೆಯ ಸಜಿಪ ಎಂಬಲ್ಲಿ ಕಾರು ಮತ್ತು ಆಕ್ಟಿವಾ ಸ್ಕೂಟರ್ ನಡುವೆ ಸಂಭವಿಸಿದ ಭೀಕರ ರಸ್ತೆ…
ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಭೇಟಿ ನೀಡಿ ದೇವಿ ಮೂಕಾಂಬಿಕಾ…
ಮಳೆಗಾಲ ಆರಂಭವಾಗುತ್ತಿದ್ದಂತೆ ಸೇತುವೆಯೊಂದು ಕುಸಿದು ಬಿದ್ದ ಪರಿಣಾಮ ಹಲವು ಗ್ರಾಮಗಳ ಸಂಪರ್ಕದ ಕೊಂಡಿ ಕಳಚಿ ಬಿದ್ದು, ಜನರು ದ್ವೀಪದಂತೆ, ಹಳ್ಳಿಯೊಳಗೆ…