ಮುಲ್ಕಿ: ಗಾಂಧೀಜಿ ಅಹಿಂಸಾ ತತ್ವ ದಿಂದ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟರು. ಇವರ ಹೋರಾಟ, ಸತ್ಯಾಗ್ರಹಗಳು
ನಮ್ಮ ಜೀವನಕ್ಕೆ ಮಾದರಿಗಳು. ರಾಮ ರಾಜ್ಯದ ಕನಸು ನನಸು ಮಾಡಲು ನಾವೆಲ್ಲರೂ ಕಟಿಬದ್ಧರಾಗೋಣ. ಎಂದು ಮುಲ್ಕಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಮೋಹನ್ ಕೋಟ್ಯಾನ್ ಹೇಳಿದರು.
ಅವರು ಮುಲ್ಕಿ ಬ್ಲಾಕ್ ಕಾಂಗ್ರೆಸ್ ವತಿಯಿಂದ ನಡೆದ ಗಾಂಧಿ ಜಯಂತಿ ಕಾರ್ಯಕ್ರಮ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿ ನೆನಪು ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡುತ್ತಿದ್ದರು.
ಕೆಪಿಸಿಸಿ ಸದಸ್ಯರಾದ ವಸಂತ್ ಬರ್ನಾಡ್ ಮಾತನಾಡಿ, ಗಾಂಧಿ ಕನಸು ನನಸು ಆಗಬೇಕಾದರೆ ರಾಹುಲ್ ಗಾಂಧಿಯವರು ಮುಂದಿನ ದಿನಗಳಲ್ಲಿ ದೇಶವನ್ನು ಆಳುವಂತಾಗಬೇಕು. ಕಾಂಗ್ರೆಸ್ ಶಕ್ತಿಯೇ ಇದಕ್ಕೆಲ್ಲ ಮೂಲ ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಮಹಿಳಾ ಅಧ್ಯಕ್ಷ ಪದ್ಮಾವತಿ ಶೆಟ್ಟಿ ಯುವ ಕಾಂಗ್ರೆಸ್ ಅಧ್ಯಕ್ಷ ಅಶೋಕ್ ಪೂಜಾರ್, ಉದ್ಯಮಿ ಶಶಿೇಂದ್ರ ಸಾಲಿಯಾನ್, ನಾಯಕರುಗಳಾದ ಮಂಜುನಾಥ ಕಂಬಾರ, ಉತ್ತಮ ಕುಮಾರ್, ಸತೀಶ್ ಕೋಟ್ಯಾನ್, ಅಬ್ದುಲ್ ಖಾದರ್, ಅಬ್ದುಲ್ ಅಜೀಜ್, ನೀತು ನಿರಂಜಲ, ಶಶಿಕಲಾ ಕರಿದೋಟ, ಕ್ಯಾರೋಲ್ ಕುಟಿನ್ಯೂ, ಬಶೀರ್ ಕುಳಾಯಿ, ಸುಬ್ಬು ಕೇ ಎಸ್ ನಗರ, ಮೊದಲಾದವರು ಇದ್ದರು
ಬಾವಿಗೆ ಬಿದ್ದ ಹೆಣ್ಣು ಮಗುವನ್ನು ಸ್ಥಳೀಯ ಯುವಕ ರಕ್ಷಿಸಿದ ಘಟನೆ ವರದಿಯಾಗಿದೆ. ಉಳ್ಳಾಲದಲ್ಲಿ ಆಟವಾಡುತ್ತಾ ಎರಡೂವರೆ ಹರೆಯದ ಮಗುವೊಂದು ದಂಡೆಯಿಲ್ಲದ…
ಸಮಾಜದಲ್ಲಿ ಒಡಕುಂಟು ಮಾಡಿ, ದ್ವೇಷವನ್ನು ಬಿತ್ತುವ ಹಾಗೂ ಶಾಂತಿಯನ್ನು ಕದಡಲು ಪ್ರಚೋದನಾತ್ಮಕ ಭಾಷಣವನ್ನು ಯಾರು ಮಾಡಿದರೂ, ಅವರ ಮೇಲೆ ಪ್ರಕರಣ…
ಕರಾವಳಿಯ ಗಂಡುಕಲೆ ಎಂದೇ ಪ್ರಸಿದ್ಧ ಪಡೆದಿರುವ ಯಕ್ಷಗಾನ ಉತ್ತರ ಪ್ರದೇಶದ ಶ್ರೀರಾಮ ಜನ್ಮ ಭೂಮಿ ಅಯೋಧ್ಯೆಯಲ್ಲಿ ಪ್ರಪ್ರಥಮ ಬಾರಿಗೆ ಪ್ರದರ್ಶನವಾಗಿದೆ.…
ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ' ಕೃತಿಯನ್ನು ಬಿಡುಗಡೆ ಮಾಡಲಾಯಿತು. ಅಮೃತ ಪ್ರಕಾಶನದ 45ನೇ ಸರಣಿ ಕೃತಿ ಕೊಡಗಿನ ಚಿತ್ರ…
ಕಳೆದ ವಾರಗಳಿಂದೀಚೆಗೆ ಸುರಿಯುತ್ತಿರುವ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿಯಾಗಿದೆ. ಇಡ್ಕಿದು ಗ್ರಾಮದ ಬಡಜ ಸುಧಾ ಎಂಬವರ…
ಕೇಂದ್ರ ಸರಕಾರದ ಪಿಎಂಇಜಿಪಿ ಯೋಜನೆ ಅಡಿಯಲ್ಲಿ ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಕೋಟ್ಯಂತರ ರೂ. ಹಣ ವಂಚಿಸಿರುವ ಪ್ರಕರಣಕ್ಕೆ ಸಂಬಂಧಿಸಿ…