ಮುಲ್ಕಿ: ಗಾಂಧೀಜಿ ಅಹಿಂಸಾ ತತ್ವ ದಿಂದ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟರು. ಇವರ ಹೋರಾಟ, ಸತ್ಯಾಗ್ರಹಗಳು
ನಮ್ಮ ಜೀವನಕ್ಕೆ ಮಾದರಿಗಳು. ರಾಮ ರಾಜ್ಯದ ಕನಸು ನನಸು ಮಾಡಲು ನಾವೆಲ್ಲರೂ ಕಟಿಬದ್ಧರಾಗೋಣ. ಎಂದು ಮುಲ್ಕಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಮೋಹನ್ ಕೋಟ್ಯಾನ್ ಹೇಳಿದರು.
ಅವರು ಮುಲ್ಕಿ ಬ್ಲಾಕ್ ಕಾಂಗ್ರೆಸ್ ವತಿಯಿಂದ ನಡೆದ ಗಾಂಧಿ ಜಯಂತಿ ಕಾರ್ಯಕ್ರಮ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿ ನೆನಪು ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡುತ್ತಿದ್ದರು.
ಕೆಪಿಸಿಸಿ ಸದಸ್ಯರಾದ ವಸಂತ್ ಬರ್ನಾಡ್ ಮಾತನಾಡಿ, ಗಾಂಧಿ ಕನಸು ನನಸು ಆಗಬೇಕಾದರೆ ರಾಹುಲ್ ಗಾಂಧಿಯವರು ಮುಂದಿನ ದಿನಗಳಲ್ಲಿ ದೇಶವನ್ನು ಆಳುವಂತಾಗಬೇಕು. ಕಾಂಗ್ರೆಸ್ ಶಕ್ತಿಯೇ ಇದಕ್ಕೆಲ್ಲ ಮೂಲ ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಮಹಿಳಾ ಅಧ್ಯಕ್ಷ ಪದ್ಮಾವತಿ ಶೆಟ್ಟಿ ಯುವ ಕಾಂಗ್ರೆಸ್ ಅಧ್ಯಕ್ಷ ಅಶೋಕ್ ಪೂಜಾರ್, ಉದ್ಯಮಿ ಶಶಿೇಂದ್ರ ಸಾಲಿಯಾನ್, ನಾಯಕರುಗಳಾದ ಮಂಜುನಾಥ ಕಂಬಾರ, ಉತ್ತಮ ಕುಮಾರ್, ಸತೀಶ್ ಕೋಟ್ಯಾನ್, ಅಬ್ದುಲ್ ಖಾದರ್, ಅಬ್ದುಲ್ ಅಜೀಜ್, ನೀತು ನಿರಂಜಲ, ಶಶಿಕಲಾ ಕರಿದೋಟ, ಕ್ಯಾರೋಲ್ ಕುಟಿನ್ಯೂ, ಬಶೀರ್ ಕುಳಾಯಿ, ಸುಬ್ಬು ಕೇ ಎಸ್ ನಗರ, ಮೊದಲಾದವರು ಇದ್ದರು
ವ್ಯಕ್ತಿಯೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ನಗರದ ಅಂಬಲಪಾಡಿ ಸಮೀಪದ ಬಿಆರ್ ಮೆಡೋಸ್ ಅಪಾರ್ಟ್ಮೆಂಟ್ನಲ್ಲಿ ನಡೆದಿದೆ. ಮೃತರನ್ನು ಉಡುಪಿಯ…
ಅಂತರರಾಷ್ಟ್ರೀಯ ಮಟ್ಟದಲ್ಲಿ ಆರೋಗ್ಯ ಸೇವೆ ನೀಡುತ್ತಿರುವ ಡೋಲ್ಚೆ ಎಸ್ಥೆಟಿಕಾ ಸಂಸ್ಥೆಯ ಕರ್ನಾಟಕದ ಮೊದಲ ಶಾಖೆ ಆಗಸ್ಟ್ 13ರಂದು ಮಂಗಳೂರಿನಲ್ಲಿ ಕಾರ್ಯಾರಂಭಗೊಳ್ಳಲಿದೆ.…
ಕದ್ರಿ ಬಂಜನ್ ಆದಿ ಮೂಲಸ್ಥಾನ ಶ್ರೀ ನಾಗಬ್ರಹ್ಮ ಕ್ಷೇತ್ರದ ವತಿಯಿಂದ ನಿವೃತ್ತ ವೀರ ಯೋಧರು ಹಾಗೂ ವೀರನಾರಿಯರನ್ನು ಗೌರವಿಸುವ ವಿಶೇಷ…
ಡಿಸಿ ಮನ್ನಾ ಭೂಮಿಯನ್ನು ಅರ್ಹ ಬಡ ಹಾಗೂ ಶೋಷಿತ ಕುಟುಂಬಗಳಿಗೆ ಹಂಚಿಕೆ ಮಾಡುವಂತೆ ಆಗ್ರಹಿಸಿರುವ ಕರ್ನಾಟಕ ದಲಿತ ಸಂಘರ್ಷ ಸಮಿತಿ,…
ಕಸಬಾ ಗ್ರಾಮದ ಕುರುಂಬಳ ನಿವಾಸಿ ಹಮೀದ್ ಅವರ ಮನೆಯಲ್ಲಿ ಭಾನುವಾರ ಬೆಳಗ್ಗೆ ಗ್ಯಾಸ್ ಸಿಲಿಂಡರ್ ಏಕಾಏಕಿ ಸ್ಫೋಟಗೊಂಡು ಮನೆ ಸಂಪೂರ್ಣ…
ತೊಕ್ಕೊಟ್ಟು ವಿನಮ್ರ ಬಾರ್ ಬಳಿ ತಲವಾರು ಬೀಸಿ ಸಾರ್ವಜನಿಕರಲ್ಲಿ ಆತಂಕ ಸೃಷ್ಟಿಸಿದ ಆರೋಪದ ಮೇಲೆ ರೌಡಿಶೀಟರ್ವೊಬ್ಬನನ್ನು ಉಳ್ಳಾಲ ಪೊಲೀಸರು ಬಂಧಿಸಿದ್ದಾರೆ.…