ಜನ ಮನದ ನಾಡಿ ಮಿಡಿತ

Advertisement

ಕಲ್ಲಡ್ಕದಲ್ಲಿ ನಿತ್ಯ ಕಾಡುತ್ತಿರುವ ಟ್ರಾಫಿಕ್ ಸಮಸ್ಯೆಯ ಬಗ್ಗೆ ಸಾರ್ವಜನಿಕ ವಲಯದಲ್ಲಿ ಆಕ್ರೋಶ

ಬಂಟ್ವಾಳ: ಕಲ್ಲಡ್ಕದಲ್ಲಿ ನಿತ್ಯ ಕಾಡುತ್ತಿರುವ ಟ್ರಾಫಿಕ್ ಸಮಸ್ಯೆಯ ಬಗ್ಗೆ ಸಾರ್ವಜನಿಕ ವಲಯದಲ್ಲಿ ಆಕ್ರೋಶ ವ್ಯಕ್ತವಾಗಿದೆ.


ಕಲ್ಲಡ್ಕ ಸರ್ವೀಸ್ ರಸ್ತೆಯಲ್ಲಿ ಕಳೆದ ಕೆಲವು ತಿಂಗಳಿನಿಂದ ಸಂಚಾರಕ್ಕೆ ಅಡಚಣೆಯಾಗುತ್ತಿದ್ದು, ಸಾರ್ವಜನಿಕ ವಲಯದಲ್ಲಿ ಸಾಕಷ್ಟು ಆಕ್ರೋಶಗಳು ವ್ಯಕ್ತವಾಗುತ್ತಿದೆ.


ಬೆಳಿಗ್ಗೆ ಹೊತ್ತಿಗೆ ಕೆಲಸಕ್ಕೆ ಹೋಗುವ ಪ್ರಯಾಣಿಕರಿಗೆ ನಿತ್ಯ ತೊಂದರೆಯಾಗುತ್ತಿದ್ದು, ಸರಿಯಾದ ಸಮಯಕ್ಕೆ ಕೆಲಸಕ್ಕೆ ಮತ್ತು ವಿದ್ಯಾರ್ಥಿಗಳಿಗೆ ಶಾಲೆಗೆ ತಲುಪಲು ಸಾಧ್ಯವಾಗುತ್ತಿಲ್ಲ ಎಂಬ ಆರೋಪ ಕೇಳಿ ಬಂದಿವೆ.


ಕಲ್ಲಡ್ಕದಲ್ಲಿ ಪ್ಲೈ ಓವರ್ ಕಾಮಗಾರಿ ನಡೆಯುತ್ತಿರುವ ಹಿನ್ನೆಲೆಯಲ್ಲಿ ಇಲ್ಲಿ ಟ್ರಾಫಿಕ್ ಜಾಮ್ ಸಮಸ್ಯೆ ಉಂಟಾಗುತ್ತಿದೆ ಎಂದು ಹೇಳಲಾಗುತ್ತಿದೆ‌.ಮೊದಲೇ ಕಿರಿದಾದ ಸರ್ವೀಸ್ ರಸ್ತೆಯಲ್ಲಿ ಪ್ಲೈ ಓವರ್ ಕಾಮಗಾರಿಗೆಂದು ಕಂಪೆನಿ ಘನಗಾತ್ರದ ವಾಹನಗಳನ್ನು ನಿಲ್ಲಿಸಿದರೆ ಸಮಸ್ಯೆಯಾಗುತ್ತಿದೆ ಎಂದು ಹೇಳಲಾಗುತ್ತಿದೆ.


ಇದರ ಜೊತೆಗೆ ಕಿರಿದಾದ ಸರ್ವೀಸ್ ರಸ್ತೆಯಲ್ಲಿ ಬಸ್ ಅಥವಾ ಇತರ ವಾಹನಗಳು ಜನರನ್ನು ಪಿಕ್ ಆಪ್ ಮತ್ತು ಡ್ರಾಪ್ ಮಾಡಲು ನಿಲ್ಲಿಸಿದರೆ ಮತ್ತೆ ಟ್ರಾಫಿಕ್ ಜಾಮ್ ಹೀಗೆ ನಿತ್ಯ
ತಾಸುಗಟ್ಟಲೆ ಟ್ರಾಫಿಕ್ ಸಮಸ್ಯೆ ಕಾಡುತ್ತಿರುವ ಬಗ್ಗೆ ಪ್ರಯಾಣಿಕರು ಬೇಸರ ವ್ಯಕ್ತಪಡಿಸಿದ್ದಾರೆ.

Leave a Reply

Your email address will not be published. Required fields are marked *

ಕಾಸರಗೋಡು: ಸಮುದ್ರದಲ್ಲಿ ಕೊಚ್ಚಿಹೋದ ಇಬ್ಬರು ಕಾಲೇಜು ವಿದ್ಯಾರ್ಥಿಗಳು..!

ಕಡಬ: ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಪಿಕಪ್ ಪಲ್ಟಿ..!

ಕಡಬ: ಗೋಳಿತ್ತಡಿ-ಏಣಿತ್ತಡ್ಕ-ಕುದುಲೂರು ಸಂಪರ್ಕಿತ ರಸ್ತೆ; ರಸ್ತೆಯುದ್ದಕ್ಕೂ ಹೊಂಡಮಯ..!

ಬಂಟ್ವಾಳ: ಪಾಣೆಮಂಗಳೂರು ಕಲ್ಲುರ್ಟಿ ದೈವಸ್ಥಾನದ ಮುಂಭಾಗದ ಸರ್ವೀಸ್ ರಸ್ತೆಯಲ್ಲಿ ಹೊಂಡಗುಂಡಿ…!

ಉಡುಪಿ: ಮಾದಕ ದ್ರವ್ಯ ಸಾಗಾಟ- ಮಾರಾಟ ಪ್ರಕರಣ: ಪಿಐಟಿ- ಎನ್‌ಡಿಪಿಎಸ್ ಕಾಯ್ದೆಯಡಿ ಆರೋಪಿಯ ಬಂಧನ…!

ಮಂಗಳೂರು: ಅಕ್ರಮ ಆನೆದಂತಗಳ ಮಾರಾಟ; ಆರೋಪಿಗಳ ಬಂಧನ..!

ಬೆಂಗಳೂರು: ಕಾರ್ಕಳದಲ್ಲಿ ತುಳು ಭವನ ನಿರ್ಮಾಣಕ್ಕೆ ಅನುದಾನ ಬಿಡುಗಡೆಗೊಳಿಸುವಂತೆ ಮನವಿ..!

ಬೆಂಗಳೂರು: ಭೀಕರ ರಸ್ತೆ ಅಪಘಾತದಲ್ಲಿ ಕೇರಳ ಮೂಲದ ಇಬ್ಬರು ನರ್ಸಿಂಗ್ ವಿದ್ಯಾರ್ಥಿಗಳು ಮೃತ್ಯು…!

ಉಡುಪಿ: ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ತಮಿಳುನಾಡು ಮುಖ್ಯಮಂತ್ರಿ ವಿಜಯ್ ಭೇಟಿ…!

error: Content is protected !!