ನಾಗಬನ ಹಾಗೂ ಮನೆಯ ಮೇಲೆ ಅಪಾಯಕಾರಿಯಾಗಿ ವಾಲುತ್ತಿದ್ದ ಮರ ಕಡಿಯುತ್ತಿದ್ದ ಮರ ಕಾರ್ಮಿಕರ ಮೇಲೆ ಉರುಳಿದ್ದರಿಂದ ಜಾರ್ಖಂಡ್ ಮೂಲದ ಕಾರ್ಮಿಕರೊಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಸೋಮವಾರ ಮಧ್ಯಾಹ್ನ ಮಜೂರು ಗ್ರಾಮದ ಕರಂದಾಡಿ ಎಂಬಲ್ಲಿ ಈ ಘಟನೆ ನಡೆದಿದೆ.
ಬಿಹಾರ-ಜಾರ್ಖಂಡ್ ಮೂಲದ ದಿನಗೂಲಿ ಕಾರ್ಮಿಕ ಸುಧೀರ್ ಪಂಜೆ ಮೃತ ವ್ಯಕ್ತಿ.
ಕರಂದಾಡಿ ವಿಷ್ಣುಮೂರ್ತಿ ದೇವಸ್ಥಾನದ ಖಾಸಗಿ ಜಮೀನಿನ ಬಳಿ ಇರುವ ನಾಗಬನದ ಮೇಲೆ ವಾಲುತ್ತಿದ್ದ ಗೋಲಿಮರ ‘ಫಿಕಸ್ ಡ್ರುಪೇಸಿಯಾ ಹೆಬ್ಬೆಟ್ಟು’ ಎಂದು ಸ್ಥಳೀಯವಾಗಿ ಕರೆಯಲಾಗುವ ಬೃಹತ್ ಮರಕ್ಕೆ ಕೊಡಲಿ ಏಟು ಹಾಕಲಾಗುತ್ತಿದೆ.
ಮರ ಕಡಿಯುತ್ತಿದ್ದ ಮೂವರು ಕಾರ್ಮಿಕರು ಮರದ ಅವಶೇಷಗಳಡಿ ಸಿಲುಕಿಕೊಂಡರು. ಓರ್ವ ಕಾರ್ಮಿಕ ಸ್ಥಳದಲ್ಲೇ ಮೃತಪಟ್ಟರೆ, ಇಬ್ಬರನ್ನು ರಕ್ಷಿಸಿ ಉಡುಪಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಮರದ ಕೆಳಗೆ ಮೃತಪಟ್ಟ ಕಾರ್ಮಿಕನನ್ನು ಹೊರತೆಗೆಯಲಾಗುತ್ತಿದೆ. ಕಾಪು ಪೊಲೀಸರು ಸ್ಥಳಕ್ಕೆ ಧಾವಿಸಿದ್ದಾರೆ. ಸ್ಥಳೀಯರ ನೆರವಿನಿಂದ ಮರವನ್ನು ತೆಗೆಯಲಾಗುತ್ತಿದೆ.
ಘಟನಾ ಸ್ಥಳಕ್ಕೆ ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ, ಕಾಪು ಎಸ್ಐ ಅಬ್ದುಲ್ ಖಾದರ್, ಕ್ರೈಂ ಎಸ್ಐ ಪುರುಷೋತ್ತಮ ಹಾಗೂ ಪೊಲೀಸ್ ಸಿಬ್ಬಂದಿ ಭೇಟಿ ನೀಡಿದ್ದಾರೆ. ಬಿದ್ದ ಮರವನ್ನು ತೆಗೆಯಲು ಹಾಗೂ ರಕ್ಷಣಾ ಕಾರ್ಯದಲ್ಲಿ ಸ್ಥಳೀಯರು ಸಹಕರಿಸಿದರು.
ಇರಾನ್ನ ನೂತನ ಸುಪ್ರೀಂ ಲೀಡರ್ ಮೊಜ್ತಬಾ ಖಮೇನಿ ಅವರ ಆರೋಗ್ಯ ಹಾಗೂ ಅವರು ಎಲ್ಲಿದ್ದಾರೆ ಎಂಬ ಕುರಿತು ಜಾಗತಿಕ ಮಟ್ಟದಲ್ಲಿ…
ಥೈಲ್ಯಾಂಡ್ನ ರಾಜಧಾನಿ ಬ್ಯಾಂಕಾಕ್ ಸಮೀಪದ ಶಾಲೆಯೊಂದರಲ್ಲಿ 9ನೇ ತರಗತಿ ವಿದ್ಯಾರ್ಥಿಯೊಬ್ಬ ನಡೆಸಿದ ಗುಂಡಿನ ದಾಳಿಯಲ್ಲಿ ಶಿಕ್ಷಕರೊಬ್ಬರು ಮೃತಪಟ್ಟಿದ್ದು, ಕನಿಷ್ಠ 15…
ಮೂಡಬಿದ್ರೆಯ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ ಆಯೋಜಿಸಿರುವ ಆಳ್ವಾಸ್ ಪ್ರಗತಿ-2026 ಬೃಹತ್ ಉದ್ಯೋಗ ಮೇಳಕ್ಕೆ ತೆರಳಲು ಬಂಟ್ವಾಳದಿಂದ ಶುಕ್ರವಾರ ಎರಡು ಉಚಿತ…
ರಾಷ್ಟ್ರೀಯ ಹೆದ್ದಾರಿ 75ರ ಸುರಿಕುಮೇರು ಸಮೀಪದ ಹಿಂದೂಸ್ತಾನ್ ಪೆಟ್ರೋಲ್ ಬಂಕ್ ಬಳಿ ನಡೆದ ರಸ್ತೆ ಅಪಘಾತದಲ್ಲಿ ಒಂದೇ ಕುಟುಂಬದ ಆರು…
ಬಿ.ಸಿ.ರೋಡ್ನ ಎನ್.ಜಿ. ಸರ್ಕಲ್ನಲ್ಲಿ ಗುರುವಾರ ಸಂಜೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಇಬ್ಬರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.…
ಕಳೆದ ಒಂದು ವಾರದಿಂದ ನ್ಯುಮೋನಿಯಾ ಜ್ವರದಿಂದ ಬಳಲುತ್ತಿದ್ದ ವಿದ್ಯಾರ್ಥಿನಿಯೊಬ್ಬಳು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿರುವ ದುಃಖದ ಘಟನೆ ನಡೆದಿದೆ. ಮೃತ ವಿದ್ಯಾರ್ಥಿನಿಯನ್ನು…