ನಾಗಬನ ಹಾಗೂ ಮನೆಯ ಮೇಲೆ ಅಪಾಯಕಾರಿಯಾಗಿ ವಾಲುತ್ತಿದ್ದ ಮರ ಕಡಿಯುತ್ತಿದ್ದ ಮರ ಕಾರ್ಮಿಕರ ಮೇಲೆ ಉರುಳಿದ್ದರಿಂದ ಜಾರ್ಖಂಡ್ ಮೂಲದ ಕಾರ್ಮಿಕರೊಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಸೋಮವಾರ ಮಧ್ಯಾಹ್ನ ಮಜೂರು ಗ್ರಾಮದ ಕರಂದಾಡಿ ಎಂಬಲ್ಲಿ ಈ ಘಟನೆ ನಡೆದಿದೆ.
ಬಿಹಾರ-ಜಾರ್ಖಂಡ್ ಮೂಲದ ದಿನಗೂಲಿ ಕಾರ್ಮಿಕ ಸುಧೀರ್ ಪಂಜೆ ಮೃತ ವ್ಯಕ್ತಿ.
ಕರಂದಾಡಿ ವಿಷ್ಣುಮೂರ್ತಿ ದೇವಸ್ಥಾನದ ಖಾಸಗಿ ಜಮೀನಿನ ಬಳಿ ಇರುವ ನಾಗಬನದ ಮೇಲೆ ವಾಲುತ್ತಿದ್ದ ಗೋಲಿಮರ ‘ಫಿಕಸ್ ಡ್ರುಪೇಸಿಯಾ ಹೆಬ್ಬೆಟ್ಟು’ ಎಂದು ಸ್ಥಳೀಯವಾಗಿ ಕರೆಯಲಾಗುವ ಬೃಹತ್ ಮರಕ್ಕೆ ಕೊಡಲಿ ಏಟು ಹಾಕಲಾಗುತ್ತಿದೆ.
ಮರ ಕಡಿಯುತ್ತಿದ್ದ ಮೂವರು ಕಾರ್ಮಿಕರು ಮರದ ಅವಶೇಷಗಳಡಿ ಸಿಲುಕಿಕೊಂಡರು. ಓರ್ವ ಕಾರ್ಮಿಕ ಸ್ಥಳದಲ್ಲೇ ಮೃತಪಟ್ಟರೆ, ಇಬ್ಬರನ್ನು ರಕ್ಷಿಸಿ ಉಡುಪಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಮರದ ಕೆಳಗೆ ಮೃತಪಟ್ಟ ಕಾರ್ಮಿಕನನ್ನು ಹೊರತೆಗೆಯಲಾಗುತ್ತಿದೆ. ಕಾಪು ಪೊಲೀಸರು ಸ್ಥಳಕ್ಕೆ ಧಾವಿಸಿದ್ದಾರೆ. ಸ್ಥಳೀಯರ ನೆರವಿನಿಂದ ಮರವನ್ನು ತೆಗೆಯಲಾಗುತ್ತಿದೆ.
ಘಟನಾ ಸ್ಥಳಕ್ಕೆ ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ, ಕಾಪು ಎಸ್ಐ ಅಬ್ದುಲ್ ಖಾದರ್, ಕ್ರೈಂ ಎಸ್ಐ ಪುರುಷೋತ್ತಮ ಹಾಗೂ ಪೊಲೀಸ್ ಸಿಬ್ಬಂದಿ ಭೇಟಿ ನೀಡಿದ್ದಾರೆ. ಬಿದ್ದ ಮರವನ್ನು ತೆಗೆಯಲು ಹಾಗೂ ರಕ್ಷಣಾ ಕಾರ್ಯದಲ್ಲಿ ಸ್ಥಳೀಯರು ಸಹಕರಿಸಿದರು.
ವ್ಯಕ್ತಿಯೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ನಗರದ ಅಂಬಲಪಾಡಿ ಸಮೀಪದ ಬಿಆರ್ ಮೆಡೋಸ್ ಅಪಾರ್ಟ್ಮೆಂಟ್ನಲ್ಲಿ ನಡೆದಿದೆ. ಮೃತರನ್ನು ಉಡುಪಿಯ…
ಅಂತರರಾಷ್ಟ್ರೀಯ ಮಟ್ಟದಲ್ಲಿ ಆರೋಗ್ಯ ಸೇವೆ ನೀಡುತ್ತಿರುವ ಡೋಲ್ಚೆ ಎಸ್ಥೆಟಿಕಾ ಸಂಸ್ಥೆಯ ಕರ್ನಾಟಕದ ಮೊದಲ ಶಾಖೆ ಆಗಸ್ಟ್ 13ರಂದು ಮಂಗಳೂರಿನಲ್ಲಿ ಕಾರ್ಯಾರಂಭಗೊಳ್ಳಲಿದೆ.…
ಕದ್ರಿ ಬಂಜನ್ ಆದಿ ಮೂಲಸ್ಥಾನ ಶ್ರೀ ನಾಗಬ್ರಹ್ಮ ಕ್ಷೇತ್ರದ ವತಿಯಿಂದ ನಿವೃತ್ತ ವೀರ ಯೋಧರು ಹಾಗೂ ವೀರನಾರಿಯರನ್ನು ಗೌರವಿಸುವ ವಿಶೇಷ…
ಡಿಸಿ ಮನ್ನಾ ಭೂಮಿಯನ್ನು ಅರ್ಹ ಬಡ ಹಾಗೂ ಶೋಷಿತ ಕುಟುಂಬಗಳಿಗೆ ಹಂಚಿಕೆ ಮಾಡುವಂತೆ ಆಗ್ರಹಿಸಿರುವ ಕರ್ನಾಟಕ ದಲಿತ ಸಂಘರ್ಷ ಸಮಿತಿ,…
ಕಸಬಾ ಗ್ರಾಮದ ಕುರುಂಬಳ ನಿವಾಸಿ ಹಮೀದ್ ಅವರ ಮನೆಯಲ್ಲಿ ಭಾನುವಾರ ಬೆಳಗ್ಗೆ ಗ್ಯಾಸ್ ಸಿಲಿಂಡರ್ ಏಕಾಏಕಿ ಸ್ಫೋಟಗೊಂಡು ಮನೆ ಸಂಪೂರ್ಣ…
ತೊಕ್ಕೊಟ್ಟು ವಿನಮ್ರ ಬಾರ್ ಬಳಿ ತಲವಾರು ಬೀಸಿ ಸಾರ್ವಜನಿಕರಲ್ಲಿ ಆತಂಕ ಸೃಷ್ಟಿಸಿದ ಆರೋಪದ ಮೇಲೆ ರೌಡಿಶೀಟರ್ವೊಬ್ಬನನ್ನು ಉಳ್ಳಾಲ ಪೊಲೀಸರು ಬಂಧಿಸಿದ್ದಾರೆ.…