ಜನ ಮನದ ನಾಡಿ ಮಿಡಿತ

Advertisement

ಕುಂದಾಪುರದಲ್ಲಿ ಚೂರಿ ಇರಿತ ಪ್ರಕರಣ: 42 ವರ್ಷದ ವ್ಯಕ್ತಿ ಆಸ್ಪತ್ರೆಯಲ್ಲಿ ಸಾವು

ಭಾನುವಾರ ಸಂಜೆ ಕಾರಿನಲ್ಲಿ ಬಂದ ಅಪರಿಚಿತರಿಂದ ಇರಿತಕ್ಕೊಳಗಾದ ಕಾರ್ವಿಕೇರಿಯ ನಿವಾಸಿ ಬನ್ಸ್ ರಘು ಅಲಿಯಾಸ್ ರಾಘವೇಂದ್ರ ಶೇರೆಗಾರ್ (42) ಸೋಮವಾರ ಬೆಳಗ್ಗೆ ಮಣಿಪಾಲದ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.
ರಾಘವೇಂದ್ರ ಅವರು ತಮ್ಮ ಹೋಂಡಾ ಸಿಟಿ ಕಾರಿನಲ್ಲಿ ಭಾನುವಾರ ಸಂಜೆ 7 ಗಂಟೆ ಸುಮಾರಿಗೆ ಇಲ್ಲಿನ ಚಿಕನ್ ಸಾಲ್ ರಸ್ತೆಯಲ್ಲಿರುವ ಅಂಚೆ ಕಚೇರಿ ಬಳಿಯ ನವದೆಹಲಿ ಬಜಾರ್ ಬಳಿ ಬಂದರು. ಇದೇ ವೇಳೆ ಅವರ ವ್ಯಾಗನ್ ಆರ್ ನಲ್ಲಿ ಬಂದ ವ್ಯಕ್ತಿಯೊಬ್ಬ ರಾಘವೇಂದ್ರ ಜತೆ ಕೆಲಕಾಲ ವಾಗ್ವಾದ ನಡೆಸಿ ಆತನ ತೊಡೆಗೆ ಚಾಕುವಿನಿಂದ ಇರಿದು ಪರಾರಿಯಾಗಿದ್ದಾನೆ. ಗಂಭೀರವಾಗಿ ಗಾಯಗೊಂಡ ರಘು ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಬನ್ಸ್ ರಘು ಅಲಿಯಾಸ್ ರಾಘವೇಂದ್ರ ಶೇರೆಗಾರ್

ರಾಘವೇಂದ್ರನಿಗೆ ಚೂರಿಯಿಂದ ಇರಿದ ಸಂದರ್ಭ ಪ್ರತ್ಯಕ್ಷದರ್ಶಿಯೊಬ್ಬ ಆರೋಪಿಯ ಫೋಟೋ ಹಾಗೂ ಆತನ ಕಾರನ್ನು ತೆಗೆದಿದ್ದಾನೆ. ಆರೋಪಿಯನ್ನು ತೀರ್ಥಹಳ್ಳಿ ಮೂಲದ ಶಫಿ ಎಂದು ಪೊಲೀಸರು ಗುರುತಿಸಿದ್ದಾರೆ. ಕೆಲ ದಿನಗಳಿಂದ ಕುಂದಾಪುರದ ಲಾಡ್ಜ್‌ನಲ್ಲಿ ತಂಗಿದ್ದರು ಎನ್ನಲಾಗಿದೆ. ತಲೆಮರೆಸಿಕೊಂಡಿರುವ ಶಫಿಗಾಗಿ ಪೊಲೀಸರು ಹುಡುಕಾಟ ನಡೆಸಿದ್ದಾರೆ.

ಹಣಕಾಸಿನ ವಿಚಾರದಲ್ಲಿ ಚೂರಿ ಇರಿತ ನಡೆದಿರುವುದು ಮೇಲ್ನೋಟಕ್ಕೆ ಬೆಳಕಿಗೆ ಬಂದಿದೆ. ರಾಘವೇಂದ್ರ ಅವರು ಪತ್ನಿ ಹಾಗೂ ಪುತ್ರಿಯನ್ನು ಅಗಲಿದ್ದಾರೆ. ಕುಂದಾಪುರ ಪೊಲೀಸರು ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ.

Leave a Reply

Your email address will not be published. Required fields are marked *

ಉಡುಪಿ: ಜಾನಪದ ಕಲಾವಿದ ಡಾ. ಗಣೇಶ್ ಗಂಗೊಳ್ಳಿ ಇನ್ನಿಲ್ಲ….!

ಉಡುಪಿ: ಕೆಎಸ್‌ಆರ್‌ಟಿಸಿ ಬಸ್ ಡಿ*ಕ್ಕಿ ಹೊಡೆದು ಮಹಿಳೆ ಮೃ*ತ್ಯು….!

ಸುಬ್ರಹ್ಮಣ್ಯ: ಕನ್ನಡಚಿತ್ರ ನಟ ನಿರ್ದೇಶಕ ರಿಷಬ್ ಶೆಟ್ಟಿ ಕುಕ್ಕೆ ಸುಬ್ರಹ್ಮಣ್ಯಕ್ಕೆ ಭೇಟಿ..!

ಮಂಗಳೂರು: ಕೌಡಿಚ್ಚಾರಿನಲ್ಲಿ ಪಿಕಪ್ ವಾಹನ ಮೋರಿಗೆ ಢಿ*ಕ್ಕಿ…!

ಮಂಗಳೂರು: ಸರ್ಕಾರಿ ಬಸ್ ಮತ್ತು ಕಾರಿನ ಮಧ್ಯೆ ಡಿ*ಕ್ಕಿ; ಮಹಿಳೆಗೆ ಗಾಯ….!

ಬಂಟ್ವಾಳ: ವಸತಿಗೃಹದ ಮುಂಭಾಗದಲ್ಲಿದ್ದ ಸ್ಕೂಟರ್ ಕಳವು; ಇಬ್ಬರ ಬಂಧನ!

ಮುಂಡ್ಕೂರು ರವೀಂದ್ರ ಶೆಟ್ಟಿ ನಿಧನಕ್ಕೆ ಬಂಟರ ಸಂಘದ ಶ್ರದ್ದಾಂಜಲಿ..!

ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ…!

ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ ಅಧ್ಯಕ್ಷ ತಾರಾನಾಥ ಶೆಟ್ಟಿ ಬೋಳಾರ ಇವರ ಅಧ್ಯಕ್ಷತೆಯಲ್ಲಿ ಶ್ರೀ ಮಂಗಳಾದೇವಿ ದೇವಸ್ಥಾನದ ಪ್ರಾಂಗಣದಲ್ಲಿ ಜರಗಿತು.

error: Content is protected !!