ಭಾನುವಾರ ಸಂಜೆ ಕಾರಿನಲ್ಲಿ ಬಂದ ಅಪರಿಚಿತರಿಂದ ಇರಿತಕ್ಕೊಳಗಾದ ಕಾರ್ವಿಕೇರಿಯ ನಿವಾಸಿ ಬನ್ಸ್ ರಘು ಅಲಿಯಾಸ್ ರಾಘವೇಂದ್ರ ಶೇರೆಗಾರ್ (42) ಸೋಮವಾರ ಬೆಳಗ್ಗೆ ಮಣಿಪಾಲದ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.
ರಾಘವೇಂದ್ರ ಅವರು ತಮ್ಮ ಹೋಂಡಾ ಸಿಟಿ ಕಾರಿನಲ್ಲಿ ಭಾನುವಾರ ಸಂಜೆ 7 ಗಂಟೆ ಸುಮಾರಿಗೆ ಇಲ್ಲಿನ ಚಿಕನ್ ಸಾಲ್ ರಸ್ತೆಯಲ್ಲಿರುವ ಅಂಚೆ ಕಚೇರಿ ಬಳಿಯ ನವದೆಹಲಿ ಬಜಾರ್ ಬಳಿ ಬಂದರು. ಇದೇ ವೇಳೆ ಅವರ ವ್ಯಾಗನ್ ಆರ್ ನಲ್ಲಿ ಬಂದ ವ್ಯಕ್ತಿಯೊಬ್ಬ ರಾಘವೇಂದ್ರ ಜತೆ ಕೆಲಕಾಲ ವಾಗ್ವಾದ ನಡೆಸಿ ಆತನ ತೊಡೆಗೆ ಚಾಕುವಿನಿಂದ ಇರಿದು ಪರಾರಿಯಾಗಿದ್ದಾನೆ. ಗಂಭೀರವಾಗಿ ಗಾಯಗೊಂಡ ರಘು ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಬನ್ಸ್ ರಘು ಅಲಿಯಾಸ್ ರಾಘವೇಂದ್ರ ಶೇರೆಗಾರ್
ರಾಘವೇಂದ್ರನಿಗೆ ಚೂರಿಯಿಂದ ಇರಿದ ಸಂದರ್ಭ ಪ್ರತ್ಯಕ್ಷದರ್ಶಿಯೊಬ್ಬ ಆರೋಪಿಯ ಫೋಟೋ ಹಾಗೂ ಆತನ ಕಾರನ್ನು ತೆಗೆದಿದ್ದಾನೆ. ಆರೋಪಿಯನ್ನು ತೀರ್ಥಹಳ್ಳಿ ಮೂಲದ ಶಫಿ ಎಂದು ಪೊಲೀಸರು ಗುರುತಿಸಿದ್ದಾರೆ. ಕೆಲ ದಿನಗಳಿಂದ ಕುಂದಾಪುರದ ಲಾಡ್ಜ್ನಲ್ಲಿ ತಂಗಿದ್ದರು ಎನ್ನಲಾಗಿದೆ. ತಲೆಮರೆಸಿಕೊಂಡಿರುವ ಶಫಿಗಾಗಿ ಪೊಲೀಸರು ಹುಡುಕಾಟ ನಡೆಸಿದ್ದಾರೆ.
ಹಣಕಾಸಿನ ವಿಚಾರದಲ್ಲಿ ಚೂರಿ ಇರಿತ ನಡೆದಿರುವುದು ಮೇಲ್ನೋಟಕ್ಕೆ ಬೆಳಕಿಗೆ ಬಂದಿದೆ. ರಾಘವೇಂದ್ರ ಅವರು ಪತ್ನಿ ಹಾಗೂ ಪುತ್ರಿಯನ್ನು ಅಗಲಿದ್ದಾರೆ. ಕುಂದಾಪುರ ಪೊಲೀಸರು ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ.
ಬಂಟ್ವಾಳ ತಾಲೂಕಿನ ತೆಂಕಬೆಳ್ಳೂರು ಗ್ರಾಮದ ಕಾಗುಡ್ಡೆ ಎಂಬಲ್ಲಿ ರಾತ್ರಿ ಸುರಿದ ಭಾರೀ ಮಳೆ ಹಾಗೂ ಬಿರುಗಾಳಿಯ ಅಬ್ಬರಕ್ಕೆ ಮನೆಯ ಚಾವಣಿ…
ಬಂಟ್ವಾಳ ತಾಲೂಕಿನ ಸಜೀಪಮೂಡ ಗ್ರಾಮದ ಕೊಳಕೆ ಎಂಬಲ್ಲಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್ನಿಂದ ಸಂಭವಿಸಿದಂತಹ ಅವಘಡದಲ್ಲಿ ಮನೆಯ ಪೀಠೋಪಕರಣಗಳು ಹಾಗೂ ದಿನನಿತ್ಯ…
ವಾಷಿಂಗ್ಟನ್ ಕರ್ನಾಟಕದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಡಾ. ಯು. ಟಿ. ಖಾದರ್ ಫರೀದ್ ಅವರ ಸಾರ್ವಜನಿಕ ಸೇವೆ…
ಫಿಫಾ ವಿಶ್ವಕಪ್ 2026ರ ಫೈನಲ್ ಹಾಗೂ ಸೆಮಿಫೈನಲ್ ಪಂದ್ಯಗಳ ವೇಳೆ ನಡೆದ ಗಲಾಟೆ ಮತ್ತು ನಿಯಮ ಉಲ್ಲಂಘನೆಗಳ ಹಿನ್ನೆಲೆಯಲ್ಲಿ, ಅರ್ಜೆಂಟೀನಾ…
'ನ್ಯೂಯಾರ್ಕ್ ಟೈಮ್ಸ್' ತನ್ನ ವರದಿಯಲ್ಲಿ 'ಪಾಕಿಸ್ತಾನಿ ಕಾಶ್ಮೀರ' ಎಂದು ಉಲ್ಲೇಖಿಸಿರುವುದಕ್ಕೆ ಭಾರತ ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ. ಅಮೆರಿಕದಲ್ಲಿರುವ ಭಾರತೀಯ ರಾಯಭಾರ…
ಚೀನಾ ಪಾಕಿಸ್ತಾನದ ಮೂಲಕ ಇರಾನ್ಗೆ 400 ರಾಕೆಟ್ ಲಾಂಚರ್ಗಳನ್ನು ಪೂರೈಸಿದೆ ಎಂಬ ವರದಿಗಳು ಜಾಗತಿಕ ಆತಂಕಕ್ಕೆ ಕಾರಣವಾಗಿವೆ. ಈ ಕುರಿತು…