ಬ0ಟ್ವಾಳ ತಾಲೂಕು ನರಿಕೊಂಬು ಗ್ರಾಮದ ಕೆದ್ದೇಲುಗುತ್ತು ಎಂಬಲ್ಲಿ ಸುಮಾರು 800 ವರ್ಷಗಳ ಇತಿಹಾಸವಿರುವ ಶ್ರೀ ನಾಲ್ಕೈತ್ತಾಯ ಹಾಗೂ ಶ್ರೀ ಪರಿವಾರ ದೈವಗಳ ಧರ್ಮ ಚಾವಡಿಯು ಅಂದಾಜು 2 ಕೋಟಿ ವೆಚ್ಚದಲ್ಲಿ ಜೀರ್ಣೋದ್ಧಾರಗೊಳ್ಳಲಿದೆ.
ಈ ಬಗ್ಗೆ ಅಷ್ಟಮಂಗಳ ಪ್ರಶ್ನಾಚಿಂತನೆಯು ಪೂರ್ಣಗೊಂಡು ಪ್ರಥಮ ಹಂತವಾಗಿ ಕೆದ್ದೇಲುಗುತ್ತು ಮನೆಯಲ್ಲಿ ಪರಿಹಾರ ಕಾರ್ಯವಾಗಿ ಹೋಮ ಹವನಗಳು ಕೆದ್ದೇಲುಗುತ್ತು ಪಾಂಡಿ ಪೂಜಾರಿ ಸುವರ್ಣ ಕುಟುಂಬಸ್ಥರ ವತಿಯಿಂದ ಆದಿತ್ಯವಾರದಂದು ನಡೆಯಿತು,
ತಂತ್ರಿವರ್ಯರಾದ ನೀಲೇಶ್ವರ ಪದ್ಮನಾಭ ಉಚ್ಚಿಲತ್ತಾಯ ತಂತ್ರಿಗಳ ನೇತೃತ್ವದಲ್ಲಿ ಬೆಳಿಗ್ಗೆ ಭಾಗ್ಯ ಸೂಕ್ತ, ಸಪ್ತ ಸೂಕ್ತ, ಐಕ್ಯ ಮಂತ್ರ ಸೂಕ್ತ ಸಹಿತ ಗಣಪತಿ ಹೋಮ ಮತ್ತು 5 ಕಾಯಿ ಗಣಹೋಮ ನಡೆಯಿತು. ಸಂಜೆ ಸುದರ್ಶನ ಹೋಮ ದುರ್ಗಾನಮಸ್ಕಾರ ಪೂಜೆ ಮತ್ತು ಭೂತ ಮಾರಣ ಬಲಿ ನಡೆದಿದೆ.
ಇನ್ನೂ ಟ್ರಸ್ಟ್ ನ ಗೌರವಾಧ್ಯಕ್ಷ ಗೋಪಾಲ ಸುವರ್ಣ ಮತ್ತು ಅಧ್ಯಕ್ಷ ಜಗನ್ನಾಥ ಕಲ್ಲಡ್ಕ, ಕೊರಗಪ್ಪ ಪೂಜಾರಿ ಹಾಗೂ ಟ್ರಸ್ಟಿಗಳ ಮುಂದಾಳತ್ವದಲ್ಲಿ ನಡೆದ ಕಾರ್ಯಕ್ರಮದಲ್ಲಿ ಕುಟುಂಬಸ್ಥರು ಭಾಗಿಯಾಗಿದ್ರು.
ಕನ್ನಡ ಜಾನಪದ ಪರಿಷತ್ ಉಡುಪಿ ಜಿಲ್ಲಾಧ್ಯಕ್ಷ, ಜಾನಪದ ಕಲಾವಿದ ಡಾ.ಗಣೇಶ್ ಗಂಗೊಳ್ಳಿ ಅವರು ಇಂದು ನಿಧನರಾಗಿದ್ದಾರೆ. ಕಳೆದ ರಾತ್ರಿ ಸಮಾರಂಭವೊಂದರಲ್ಲಿ…
ಕೆಎಸ್ಆರ್ಟಿಸಿ ಬಸ್ ಡಿಕ್ಕಿಯಾಗಿ ಮಹಿಳೆಯೋರ್ವರು ಸ್ಥಳದಲ್ಲೇ ಮೃತಪಟ್ಟ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ತೆಕ್ಕಟ್ಟೆ ಪ್ರೆಸಿಡೆಂಟ್ ಕನ್ವೆನ್ಷನ್ ಹಾಲ್ ಮುಂಭಾಗ…
ಕನ್ನಡ ಚಿತ್ರರಂಗದ ಖ್ಯಾತ ನಟ ಹಾಗೂ ನಿರ್ದೇಶಕ ರಿಷಬ್ ಶೆಟ್ಟಿ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಕುಟುಂಬ ಸಮೇತರಾಗಿ ಆಗಮಿಸಿದ್ದಾರೆ. ರಿಷಬ್…
ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು -ಸುಳ್ಯ ರಾಷ್ಟ್ರೀಯ ಹೆದ್ದಾರಿಯ ಕೌಡಿಚ್ಚಾರು ಎಂಬಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಪಿಕಪ್ ವಾಹನ ಮೋರಿಗೆ…
ಸರ್ಕಾರಿ ಬಸ್ ಮತ್ತು ಕಾರಿನ ಮಧ್ಯೆ ಡಿಕ್ಕಿ ಸಂಭವಿಸಿ ಕಾರಿನಲ್ಲಿದ್ದ ಮಹಿಳೆಯೊಬ್ಬರು ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. ಈ ಘಟನೆ ದಕ್ಷಿಣ…
ವಸತಿಗೃಹವೊಂದರ ಮುಂಭಾಗದಲ್ಲಿ ನಿಲ್ಲಿಸಲಾಗಿದ್ದ ಬೈಕ್ ಕಳವು ಮಾಡಿದ ಆರೋಪಿಗಳಿಬ್ಬರನ್ನು ಬಂಟ್ವಾಳ ನಗರ ಠಾಣಾ ಪೋಲೀಸರು ಬಂಧಿಸಿದ್ದಾರೆ. ಬಂಟ್ವಾಳ ಸಜೀಪ ಮುನ್ನೂರು…