ಮುಲ್ಕಿ: ಭಾರತ ಸರಕಾರ ಯುವಕಾರ್ಯ ಮತ್ತು ಕ್ರೀಡಾ ಸಚಿವಾಲಯ, ನೆಹರೂ ಯುವ ಕೇಂದ್ರ ಮಂಗಳೂರು,
ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಮಂಗಳೂರು, ರೋಟರಿ ಕ್ಲಬ್ ಬೈಕಂಪಾಡಿ
ಇದರ ಸಹಕಾರದಲ್ಲಿ ಫೇಮಸ್ ಯೂತ್ ಕ್ಲಬ್ (ರಿ) ಮತ್ತು ಮಹಿಳಾ ಮಂಡಲ 10ನೇ ತೋಕೂರು ಹಳೆಯಂಗಡಿ ಇವರ ಆಶ್ರಯದಲ್ಲಿ “ಮಹಾತ್ಮ ಗಾಂಧೀಜಿಯವರ 154ನೇ ಜನ್ಮ ದಿನಾಚರಣೆ” ಕಾರ್ಯಕ್ರಮವನ್ನು ದಿನಾಂಕ 02.10.2023ರಂದು ಸಂಸ್ಥೆಯ ಕಾರ್ಯಾಲಯದಲ್ಲಿ ನೆರವೇರಿಸಲಾಯಿತು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಂಸ್ಥೆಯ ಗೌರವಾಧ್ಯಕ್ಷರಾದ ಶ್ರೀ ಗುರುರಾಜ ಎಸ್ ಪೂಜಾರಿಯವರು ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಜೀವನದ ತ್ಯಾಗ, ಶಾಂತಿ, ಮತ್ತು ಅಹಿಂಸೆಯ ತತ್ವವು ಇಂದಿನ ಯುವ ಪೀಳಿಗೆಗೆ ದಾರಿದೀಪವಾಗಿದೆ ಮಾತ್ರವಲ್ಲ ದೇಶದ ಸ್ವಾತಂತ್ರ್ಯ ಸಂಗ್ರಾಮದಲ್ಲಿ ಮಹಾತ್ಮ ಗಾಂಧೀಜಿಯವರ ಪಾತ್ರ ಮಹತ್ತರವಾದದ್ದು ಎಂಬ ಅಭಿಪ್ರಾಯವನ್ನು ವ್ಯಕ್ತಪಡಿಸಿದರು.
ಬಿಲ್ಲವ ಸಮಾಜ ಸೇವಾ ಸಂಘ ಹಳೆಯಂಗಡಿ ಗೌರವಾಧ್ಯಕ್ಷರಾದ ಶ್ರೀ ಗಣೇಶ್ ಜಿ ಬಂಗೇರ ರವರು ಮಹಾತ್ಮ ಗಾಂಧೀಜಿಯವರ ಬದುಕು ಮತ್ತು ಚಿಂತನೆಯ ವಿಚಾರವಾಗಿ ತಮ್ಮ ಅನಿಸಿಕೆಯನ್ನು ವಿವರಿಸಿ ಹೇಳಿದರು.
ಕಾರ್ಯಕ್ರಮದಲ್ಲಿ ಸಂಸ್ಥೆಯ ಅಧ್ಯಕ್ಷರಾದ ಶ್ರೀ ಭಾಸ್ಕರ್ ಅಮೀನ್ ತೋಕೂರುರವರು ಪ್ರಸ್ತಾವನೆಗೈದು ಸ್ವಾಗತವನ್ನು ನಿರ್ವಹಿಸಿದ್ದರು, ಸಂಸ್ಥೆಯ ಕಾರ್ಯದರ್ಶಿ ಶ್ರೀ ಹಿಮಕರ್ ರವರು ಕಾರ್ಯಕ್ರಮವನ್ನು ನಿರೂಪಿಸಿದರು.
ಫೇಮಸ್ ಯೂತ್ ಕ್ಲಬ್ಬಿನ ಕಾರ್ಯದರ್ಶಿ ನವೀನ್ ಚಂದ್ರ ಅಮೀನ್, ಸದಸ್ಯರಾದ ಶ್ರೀ ಸುರೇಶ್ ಬಿ ದೇವಾಡಿಗ, ಮಹಿಳಾ ಮಂಡಲದ ಅಧ್ಯಕ್ಷರಾದ ಪ್ರೇಮಲತಾ ಯೋಗೀಶ್, ಉಪಾಧ್ಯಕ್ಷೆ ಅಮಿತಾ ದಿನಕರ್ ಸಾಲ್ಯಾನ್, ಕಾರ್ಯದರ್ಶಿ ಕುಸುಮ ಹರೀಶ್ ಕೋಟ್ಯಾನ್, ಕೋಶಾಧಿಕಾರಿ ಇಂದಿರಾ ಸಂಜೀವ ಕರ್ಕೇರ ಮತ್ತು ಮಹಿಳಾ ಮಂಡಲದ ಸದಸ್ಯರು ಹಾಗೂ ಫೇಮಸ್ ಯೂತ್ ಕ್ಲಬ್ಬಿನ ಸದಸ್ಯರು ಉಪಸ್ಥಿತರಿದ್ದರು.
ಇರಾನ್ನ ನೂತನ ಸುಪ್ರೀಂ ಲೀಡರ್ ಮೊಜ್ತಬಾ ಖಮೇನಿ ಅವರ ಆರೋಗ್ಯ ಹಾಗೂ ಅವರು ಎಲ್ಲಿದ್ದಾರೆ ಎಂಬ ಕುರಿತು ಜಾಗತಿಕ ಮಟ್ಟದಲ್ಲಿ…
ಥೈಲ್ಯಾಂಡ್ನ ರಾಜಧಾನಿ ಬ್ಯಾಂಕಾಕ್ ಸಮೀಪದ ಶಾಲೆಯೊಂದರಲ್ಲಿ 9ನೇ ತರಗತಿ ವಿದ್ಯಾರ್ಥಿಯೊಬ್ಬ ನಡೆಸಿದ ಗುಂಡಿನ ದಾಳಿಯಲ್ಲಿ ಶಿಕ್ಷಕರೊಬ್ಬರು ಮೃತಪಟ್ಟಿದ್ದು, ಕನಿಷ್ಠ 15…
ಮೂಡಬಿದ್ರೆಯ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ ಆಯೋಜಿಸಿರುವ ಆಳ್ವಾಸ್ ಪ್ರಗತಿ-2026 ಬೃಹತ್ ಉದ್ಯೋಗ ಮೇಳಕ್ಕೆ ತೆರಳಲು ಬಂಟ್ವಾಳದಿಂದ ಶುಕ್ರವಾರ ಎರಡು ಉಚಿತ…
ರಾಷ್ಟ್ರೀಯ ಹೆದ್ದಾರಿ 75ರ ಸುರಿಕುಮೇರು ಸಮೀಪದ ಹಿಂದೂಸ್ತಾನ್ ಪೆಟ್ರೋಲ್ ಬಂಕ್ ಬಳಿ ನಡೆದ ರಸ್ತೆ ಅಪಘಾತದಲ್ಲಿ ಒಂದೇ ಕುಟುಂಬದ ಆರು…
ಬಿ.ಸಿ.ರೋಡ್ನ ಎನ್.ಜಿ. ಸರ್ಕಲ್ನಲ್ಲಿ ಗುರುವಾರ ಸಂಜೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಇಬ್ಬರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.…
ಕಳೆದ ಒಂದು ವಾರದಿಂದ ನ್ಯುಮೋನಿಯಾ ಜ್ವರದಿಂದ ಬಳಲುತ್ತಿದ್ದ ವಿದ್ಯಾರ್ಥಿನಿಯೊಬ್ಬಳು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿರುವ ದುಃಖದ ಘಟನೆ ನಡೆದಿದೆ. ಮೃತ ವಿದ್ಯಾರ್ಥಿನಿಯನ್ನು…