ಮುಲ್ಕಿ: ಇಲ್ಲಿಗೆ ಸಮೀಪದ ಪಡುಪಣಂಬೂರು ಹೊಯ್ಗೆ ಗುಡ್ಡೆ ನಿವಾಸಿ ರಮೇಶ್ ಸುವರ್ಣ ಪಡುತೋಟ(68) ಹೃದಯಾಘಾತದಿಂದ ನಿಧನರಾದರು. ಅವರು ಪತ್ನಿ ಹಾಗೂ ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ.
ಅವರು ಪಡುಪಣಂಬೂರು ಹೊಯ್ಗೆಗುಡ್ಡೆ ಶ್ರೀ ಉಮಾಮಹೇಶ್ವರಿ ದೇವಸ್ಥಾನದ ಜೀರ್ಣೋದ್ಧಾರ ಸಮಿತಿಯ ಸದಸ್ಯರಾಗಿ,ಮುಲ್ಕಿ ಸೀಮೆಯ ಅರಸು ಕಂಬಳ ಸಮಿತಿಯ ಸದಸ್ಯರಾಗಿ, ಪಡುತೋಟ ಶ್ರೀ ಜಾರಂದಾಯ ದೇವಸ್ಥಾನದ ಜೀರ್ಣೋದ್ಧಾರ ಸಮಿತಿಯ ಸದಸ್ಯರಾಗಿ, ಪಡುಪಣಂಬೂರು ಗ್ರಾ ಪಂ ನ ಮಾಜೀ ಸದಸ್ಯ, ಕಾಂಗ್ರೆಸ್ ಪಕ್ಷದ ಸಕ್ರಿಯ ಕಾರ್ಯಕರ್ತರಾಗಿ,ವಿವಿಧ ಸಾಮಾಜಿಕ ಸೇವಾ ಸಂಸ್ಥೆಗಳ ಜೊತೆ ತಮ್ಮನ್ನು ತಾವು ಗುರುತಿಸಿಕೊಂಡು ಜನಾನುರಾಗಿಯಾಗಿದ್ದರು.
ಅವರ ನಿಧನಕ್ಕೆ ಬೆಂಗಳೂರಿನ ಅಂತರಾಷ್ಟ್ರೀಯ ವಾಸ್ತು ತಜ್ಞ ಹಾಗೂ ವೈಜ್ಞಾನಿಕ ಜ್ಯೋತಿಷಿ ಶ್ರೀ ಶ್ರೀ ಚಂದ್ರಶೇಖರ ಸ್ವಾಮೀಜಿ, ಮುಲ್ಕಿ ಸೀಮೆಯ ಅರಸರಾದ ದುಗ್ಗಣ್ಣ ಸಾವಂತರು, ಶಾಸಕ ಉಮಾನಾಥ ಕೋಟ್ಯಾನ್, ಮಾಜೀ ಸಚಿವ ಅಭಯಚಂದ್ರ ಜೈನ್, ಯುವ ಕಾಂಗ್ರೆಸ್ ನಾಯಕ ಮಿಥುನ್ ರೈ, ಉದ್ಯಮಿ ಅರವಿಂದ ಪೂಂಜ ಕಾರ್ನಾಡ್, ಮುಂಬೈ ಬಂಟರ ಸಂಘದ ಮಾಜೀ ಅಧ್ಯಕ್ಷ ಭುಜಂಗ ಶೆಟ್ಟಿ, ಪಿಸಿಎ ಬ್ಯಾಂಕ್ ಅಧ್ಯಕ್ಷ ಸತೀಶ್ ಭಟ್, ಪಡುಪಣಂಬೂರು, ಮುಲ್ಕಿ ಅರಸು ಕಂಬಳ ಸಮಿತಿ ಅಧ್ಯಕ್ಷ ಕಿರಣ್ ಶೆಟ್ಟಿ ಕೋಲ್ನಾಡು ಗುತ್ತು, ಗ್ರಾ.ಪಂ.ಅಧ್ಯಕ್ಷೆ ಕುಸುಮಾ ಚಂದ್ರಶೇಖರ್, ಉಪಾಧ್ಯಕ್ಷ ಹೇಮನಾಥ್ ತೋಕೂರು,ಮಾಜೀ ಅಧ್ಯಕ್ಷ ವಿನೋದ್ ಸಾಲ್ಯಾನ್, ಮೋಹನ್ ದಾಸ್, ಕೆಪಿಸಿಸಿ ಕೋ ಆರ್ಡಿನೇಟರ್ ವಸಂತ್ ಬೆರ್ನಾಡ್, ಮುಲ್ಕಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮೋಹನ್ ಕೋಟ್ಯಾನ್, ದಿನೇಶ್ ಸುವರ್ಣ , ಗೌತಮ್ ಜೈನ್ ಮುಲ್ಕಿ ಅರಮನೆ, ಸೇವಾದಳದ ಧರ್ಮಾನಂದ ಶೆಟ್ಟಿಗಾರ್, ಪತ್ರಕರ್ತ ಪುನೀತ್ ಕೃಷ್ಣ,ಹರೀಶ್ ಹೆಜ್ಮಾಡಿ ಮತ್ತಿತರರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.
ಇರಾನ್ನ ನೂತನ ಸುಪ್ರೀಂ ಲೀಡರ್ ಮೊಜ್ತಬಾ ಖಮೇನಿ ಅವರ ಆರೋಗ್ಯ ಹಾಗೂ ಅವರು ಎಲ್ಲಿದ್ದಾರೆ ಎಂಬ ಕುರಿತು ಜಾಗತಿಕ ಮಟ್ಟದಲ್ಲಿ…
ಥೈಲ್ಯಾಂಡ್ನ ರಾಜಧಾನಿ ಬ್ಯಾಂಕಾಕ್ ಸಮೀಪದ ಶಾಲೆಯೊಂದರಲ್ಲಿ 9ನೇ ತರಗತಿ ವಿದ್ಯಾರ್ಥಿಯೊಬ್ಬ ನಡೆಸಿದ ಗುಂಡಿನ ದಾಳಿಯಲ್ಲಿ ಶಿಕ್ಷಕರೊಬ್ಬರು ಮೃತಪಟ್ಟಿದ್ದು, ಕನಿಷ್ಠ 15…
ಮೂಡಬಿದ್ರೆಯ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ ಆಯೋಜಿಸಿರುವ ಆಳ್ವಾಸ್ ಪ್ರಗತಿ-2026 ಬೃಹತ್ ಉದ್ಯೋಗ ಮೇಳಕ್ಕೆ ತೆರಳಲು ಬಂಟ್ವಾಳದಿಂದ ಶುಕ್ರವಾರ ಎರಡು ಉಚಿತ…
ರಾಷ್ಟ್ರೀಯ ಹೆದ್ದಾರಿ 75ರ ಸುರಿಕುಮೇರು ಸಮೀಪದ ಹಿಂದೂಸ್ತಾನ್ ಪೆಟ್ರೋಲ್ ಬಂಕ್ ಬಳಿ ನಡೆದ ರಸ್ತೆ ಅಪಘಾತದಲ್ಲಿ ಒಂದೇ ಕುಟುಂಬದ ಆರು…
ಬಿ.ಸಿ.ರೋಡ್ನ ಎನ್.ಜಿ. ಸರ್ಕಲ್ನಲ್ಲಿ ಗುರುವಾರ ಸಂಜೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಇಬ್ಬರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.…
ಕಳೆದ ಒಂದು ವಾರದಿಂದ ನ್ಯುಮೋನಿಯಾ ಜ್ವರದಿಂದ ಬಳಲುತ್ತಿದ್ದ ವಿದ್ಯಾರ್ಥಿನಿಯೊಬ್ಬಳು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿರುವ ದುಃಖದ ಘಟನೆ ನಡೆದಿದೆ. ಮೃತ ವಿದ್ಯಾರ್ಥಿನಿಯನ್ನು…