ಮೂಡುಬಿದಿರೆ: ಇಲ್ಲಿನ ಪವರ್ ಫ್ರೆಂಡ್ಸ್ ಬೆದ್ರ ಮತ್ತು ಕುಮಾರ್ ಎಲೆಕ್ಟ್ರಿಕಲ್ಸ್ ಇವುಗಳ ಸಹಭಾಗಿತ್ವದಲ್ಲಿ
ಭಾರತೀಯ ಅಂಚೆ ಇಲಾಖೆ ಪುತ್ತೂರು ವಿಭಾಗದ ವತಿಯಿಂದ ಅಂಚೆ ಜನಸಂಪರ್ಕ ಅಭಿಯಾನ ಮಂಗಳವಾರ ನಾಗರಕಟ್ಟೆಯಲ್ಲಿ ನಡೆಯಿತು.
ವಿದ್ಯುತ್ ಗುತ್ತಿಗದಾರ ನವೀನ್ ಕರ್ಕೇರಾ ಅವರು ಉದ್ಘಾಟಿಸಿ ಮಾತನಾಡಿ ಉತ್ತಮ ಯೋಜನೆಗಳು ಇನ್ನಷ್ಟು ನೆರವೇರಲಿ ಇದಕ್ಕೆ ಎಲ್ಲರೂ ಕೈ ಜೋಡಿಸೋಣ ಎಂದು ಶುಭ ಹಾರೈಸಿದರು. ಪವರ್ ಫ್ರೆಂಡ್ಸ್ ನ ಅಧ್ಯಕ್ಷ
ವಿನಯ್ ಕುಮಾರ್ ಮಾತನಾಡಿ ಸಮಾಜಮುಖಿ ಕೆಲಸಗಳು ನಿರಂತವಾಗಿ ನಡೆಯಲಿ ಇದಕ್ಕೆ ಸಂಪೂರ್ಣವಾದ ಸಹಕಾರ ಪವರ್ ಫ್ರೆಂಡ್ಸ್ ಬೆದ್ರ ನೀಡುತ್ತದೆ ಎಂದರು.
ಭಾರತೀಯ ಅಂಚೆ ಇಲಾಖೆಯ ಗುರುಪ್ರಸಾದ್ ಕೆ.ಎಸ್ ಅಂಚೆ ಸೇವಾ ಯೋಜನೆಗಳ ಬಗ್ಗೆ ಮಾಹಿತಿ ನೀಡಿದರು.ಎಲೆಕ್ಟ್ರಿಕಲ್ ಸಂಸ್ಥೆಯ ಎಲ್ಲಾ ಉದ್ಯೋಗಿಗಳಿಗೆ ಮತ್ತು ಪವರ್ ಫ್ರೆಂಡ್ಸ್ ನ ಸದಸ್ಯರಿಗೆ ಸಮೂಹ ಅಪಘಾತ ವಿಮೆಯನ್ನು ಮಾಡಿಸಲಾಯಿತು.
ಎಲೆಕ್ಟ್ರಿಕಲ್ ಸಂಸ್ಥೆಯ ಅಧ್ಯಕ್ಷ ಕುಮಾರ್ ಪೂಜಾರಿ ಉಪಸ್ಥಿತರಿದ್ದರು. ಪವರ್ ಫ್ರೆಂಡ್ಸ್ ನ ಉಪಾಧ್ಯಕ್ಷ, ವಕೀಲ ಜಯಪ್ರಕಾಶ್ ಭಂಡಾರಿ ಕಾರ್ಯಕ್ರಮವನ್ನು ನಿರೂಪಿಸಿ ವಂದಿಸಿದರು. ಈ ಸಂದರ್ಭದಲ್ಲಿ ಎಲೆಕ್ಟ್ರಿಕಲ್ಸ್ ನ ಉದ್ಯೋಗಿಗಳು ಮತ್ತು ಪವರ್ ಫ್ರೆಂಡ್ಸ್ ನ ಸದಸ್ಯರು ಉಪಸ್ಥಿತರಿದ್ದರು.
ಮಂಗಳೂರು: ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ ನಡೆಯಲಿದ್ದು, ಅದರ ಭಾಗವಾಗಿ ಕರ್ನಾಟಕದಲ್ಲಿ 2027ರ ಜನಗಣತಿಯ…
ಮಂಗಳೂರು: ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ…
ಬಂಟ್ವಾಳ: ತಾಲೂಕಿನ ವಗ್ಗದ ನಿವಾಸಿ ಅಟೋ ಚಾಲಕನೋರ್ವ ಕಾಣೆಯಾದ ಬಗ್ಗೆ ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. …
ಕಾಸರಗೋಡು: ಬಿಜೆಪಿ ರಾಷ್ಟ್ರೀಯ ಪ್ರಧಾನ ಕರ್ಯರ್ಶಿ ಹಾಗೂ ಕೇರಳದ ಚುನಾವಣಾ ಪ್ರಭಾರಿ ವಿನೋದ್ ಥಾವ್ಡೆ ಅವರು ನಿನ್ನೆ ಕಾಸರಗೋಡಿಗೆ…
ಮಾಣಿ ಸಮೀಪದ ಸೂರಿಕುಮೇರು ಜಂಕ್ಷನ್ನಲ್ಲಿ ಖಾಸಗಿ ಬಸ್ಗೆ ಹಿಂಬದಿಯಿಂದ ಪಿಕಪ್ ವಾಹನ ಡಿಕ್ಕಿ ಹೊಡೆದಿದ್ದು, ಪಿಕಪ್ ವಾಹನದ ಮುಂಭಾಗವು ಸಂಪೂರ್ಣ…
ಹೆಮ್ಮಾಡಿ ಕುಂದಾಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಯಾನಕ ವ್ಹೀಲಿಂಗ್ ಮಾಡಿದ ಯುವಕ ಕಳ್ಳತನ ಪ್ರಕರಣದಲ್ಲೂ ಭಾಗಿಯಾಗಿದ್ದು, ಈತನನ್ನು ಪೊಲೀಸರು ಬಂಧಿಸಿದ್ದಾರೆ. ಪೌಜಾನ್…