ಮೂಡುಬಿದಿರೆ: ಇಲ್ಲಿನ ಪವರ್ ಫ್ರೆಂಡ್ಸ್ ಬೆದ್ರ ಮತ್ತು ಕುಮಾರ್ ಎಲೆಕ್ಟ್ರಿಕಲ್ಸ್ ಇವುಗಳ ಸಹಭಾಗಿತ್ವದಲ್ಲಿ
ಭಾರತೀಯ ಅಂಚೆ ಇಲಾಖೆ ಪುತ್ತೂರು ವಿಭಾಗದ ವತಿಯಿಂದ ಅಂಚೆ ಜನಸಂಪರ್ಕ ಅಭಿಯಾನ ಮಂಗಳವಾರ ನಾಗರಕಟ್ಟೆಯಲ್ಲಿ ನಡೆಯಿತು.
ವಿದ್ಯುತ್ ಗುತ್ತಿಗದಾರ ನವೀನ್ ಕರ್ಕೇರಾ ಅವರು ಉದ್ಘಾಟಿಸಿ ಮಾತನಾಡಿ ಉತ್ತಮ ಯೋಜನೆಗಳು ಇನ್ನಷ್ಟು ನೆರವೇರಲಿ ಇದಕ್ಕೆ ಎಲ್ಲರೂ ಕೈ ಜೋಡಿಸೋಣ ಎಂದು ಶುಭ ಹಾರೈಸಿದರು. ಪವರ್ ಫ್ರೆಂಡ್ಸ್ ನ ಅಧ್ಯಕ್ಷ
ವಿನಯ್ ಕುಮಾರ್ ಮಾತನಾಡಿ ಸಮಾಜಮುಖಿ ಕೆಲಸಗಳು ನಿರಂತವಾಗಿ ನಡೆಯಲಿ ಇದಕ್ಕೆ ಸಂಪೂರ್ಣವಾದ ಸಹಕಾರ ಪವರ್ ಫ್ರೆಂಡ್ಸ್ ಬೆದ್ರ ನೀಡುತ್ತದೆ ಎಂದರು.
ಭಾರತೀಯ ಅಂಚೆ ಇಲಾಖೆಯ ಗುರುಪ್ರಸಾದ್ ಕೆ.ಎಸ್ ಅಂಚೆ ಸೇವಾ ಯೋಜನೆಗಳ ಬಗ್ಗೆ ಮಾಹಿತಿ ನೀಡಿದರು.ಎಲೆಕ್ಟ್ರಿಕಲ್ ಸಂಸ್ಥೆಯ ಎಲ್ಲಾ ಉದ್ಯೋಗಿಗಳಿಗೆ ಮತ್ತು ಪವರ್ ಫ್ರೆಂಡ್ಸ್ ನ ಸದಸ್ಯರಿಗೆ ಸಮೂಹ ಅಪಘಾತ ವಿಮೆಯನ್ನು ಮಾಡಿಸಲಾಯಿತು.
ಎಲೆಕ್ಟ್ರಿಕಲ್ ಸಂಸ್ಥೆಯ ಅಧ್ಯಕ್ಷ ಕುಮಾರ್ ಪೂಜಾರಿ ಉಪಸ್ಥಿತರಿದ್ದರು. ಪವರ್ ಫ್ರೆಂಡ್ಸ್ ನ ಉಪಾಧ್ಯಕ್ಷ, ವಕೀಲ ಜಯಪ್ರಕಾಶ್ ಭಂಡಾರಿ ಕಾರ್ಯಕ್ರಮವನ್ನು ನಿರೂಪಿಸಿ ವಂದಿಸಿದರು. ಈ ಸಂದರ್ಭದಲ್ಲಿ ಎಲೆಕ್ಟ್ರಿಕಲ್ಸ್ ನ ಉದ್ಯೋಗಿಗಳು ಮತ್ತು ಪವರ್ ಫ್ರೆಂಡ್ಸ್ ನ ಸದಸ್ಯರು ಉಪಸ್ಥಿತರಿದ್ದರು.
ಬಾವಿಗೆ ಬಿದ್ದ ಹೆಣ್ಣು ಮಗುವನ್ನು ಸ್ಥಳೀಯ ಯುವಕ ರಕ್ಷಿಸಿದ ಘಟನೆ ವರದಿಯಾಗಿದೆ. ಉಳ್ಳಾಲದಲ್ಲಿ ಆಟವಾಡುತ್ತಾ ಎರಡೂವರೆ ಹರೆಯದ ಮಗುವೊಂದು ದಂಡೆಯಿಲ್ಲದ…
ಸಮಾಜದಲ್ಲಿ ಒಡಕುಂಟು ಮಾಡಿ, ದ್ವೇಷವನ್ನು ಬಿತ್ತುವ ಹಾಗೂ ಶಾಂತಿಯನ್ನು ಕದಡಲು ಪ್ರಚೋದನಾತ್ಮಕ ಭಾಷಣವನ್ನು ಯಾರು ಮಾಡಿದರೂ, ಅವರ ಮೇಲೆ ಪ್ರಕರಣ…
ಕರಾವಳಿಯ ಗಂಡುಕಲೆ ಎಂದೇ ಪ್ರಸಿದ್ಧ ಪಡೆದಿರುವ ಯಕ್ಷಗಾನ ಉತ್ತರ ಪ್ರದೇಶದ ಶ್ರೀರಾಮ ಜನ್ಮ ಭೂಮಿ ಅಯೋಧ್ಯೆಯಲ್ಲಿ ಪ್ರಪ್ರಥಮ ಬಾರಿಗೆ ಪ್ರದರ್ಶನವಾಗಿದೆ.…
ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ' ಕೃತಿಯನ್ನು ಬಿಡುಗಡೆ ಮಾಡಲಾಯಿತು. ಅಮೃತ ಪ್ರಕಾಶನದ 45ನೇ ಸರಣಿ ಕೃತಿ ಕೊಡಗಿನ ಚಿತ್ರ…
ಕಳೆದ ವಾರಗಳಿಂದೀಚೆಗೆ ಸುರಿಯುತ್ತಿರುವ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿಯಾಗಿದೆ. ಇಡ್ಕಿದು ಗ್ರಾಮದ ಬಡಜ ಸುಧಾ ಎಂಬವರ…
ಕೇಂದ್ರ ಸರಕಾರದ ಪಿಎಂಇಜಿಪಿ ಯೋಜನೆ ಅಡಿಯಲ್ಲಿ ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಕೋಟ್ಯಂತರ ರೂ. ಹಣ ವಂಚಿಸಿರುವ ಪ್ರಕರಣಕ್ಕೆ ಸಂಬಂಧಿಸಿ…