ಮೂಡುಬಿದಿರೆ: ಇಲ್ಲಿನ ಪವರ್ ಫ್ರೆಂಡ್ಸ್ ಬೆದ್ರ ಮತ್ತು ಕುಮಾರ್ ಎಲೆಕ್ಟ್ರಿಕಲ್ಸ್ ಇವುಗಳ ಸಹಭಾಗಿತ್ವದಲ್ಲಿ
ಭಾರತೀಯ ಅಂಚೆ ಇಲಾಖೆ ಪುತ್ತೂರು ವಿಭಾಗದ ವತಿಯಿಂದ ಅಂಚೆ ಜನಸಂಪರ್ಕ ಅಭಿಯಾನ ಮಂಗಳವಾರ ನಾಗರಕಟ್ಟೆಯಲ್ಲಿ ನಡೆಯಿತು.
ವಿದ್ಯುತ್ ಗುತ್ತಿಗದಾರ ನವೀನ್ ಕರ್ಕೇರಾ ಅವರು ಉದ್ಘಾಟಿಸಿ ಮಾತನಾಡಿ ಉತ್ತಮ ಯೋಜನೆಗಳು ಇನ್ನಷ್ಟು ನೆರವೇರಲಿ ಇದಕ್ಕೆ ಎಲ್ಲರೂ ಕೈ ಜೋಡಿಸೋಣ ಎಂದು ಶುಭ ಹಾರೈಸಿದರು. ಪವರ್ ಫ್ರೆಂಡ್ಸ್ ನ ಅಧ್ಯಕ್ಷ
ವಿನಯ್ ಕುಮಾರ್ ಮಾತನಾಡಿ ಸಮಾಜಮುಖಿ ಕೆಲಸಗಳು ನಿರಂತವಾಗಿ ನಡೆಯಲಿ ಇದಕ್ಕೆ ಸಂಪೂರ್ಣವಾದ ಸಹಕಾರ ಪವರ್ ಫ್ರೆಂಡ್ಸ್ ಬೆದ್ರ ನೀಡುತ್ತದೆ ಎಂದರು.
ಭಾರತೀಯ ಅಂಚೆ ಇಲಾಖೆಯ ಗುರುಪ್ರಸಾದ್ ಕೆ.ಎಸ್ ಅಂಚೆ ಸೇವಾ ಯೋಜನೆಗಳ ಬಗ್ಗೆ ಮಾಹಿತಿ ನೀಡಿದರು.ಎಲೆಕ್ಟ್ರಿಕಲ್ ಸಂಸ್ಥೆಯ ಎಲ್ಲಾ ಉದ್ಯೋಗಿಗಳಿಗೆ ಮತ್ತು ಪವರ್ ಫ್ರೆಂಡ್ಸ್ ನ ಸದಸ್ಯರಿಗೆ ಸಮೂಹ ಅಪಘಾತ ವಿಮೆಯನ್ನು ಮಾಡಿಸಲಾಯಿತು.
ಎಲೆಕ್ಟ್ರಿಕಲ್ ಸಂಸ್ಥೆಯ ಅಧ್ಯಕ್ಷ ಕುಮಾರ್ ಪೂಜಾರಿ ಉಪಸ್ಥಿತರಿದ್ದರು. ಪವರ್ ಫ್ರೆಂಡ್ಸ್ ನ ಉಪಾಧ್ಯಕ್ಷ, ವಕೀಲ ಜಯಪ್ರಕಾಶ್ ಭಂಡಾರಿ ಕಾರ್ಯಕ್ರಮವನ್ನು ನಿರೂಪಿಸಿ ವಂದಿಸಿದರು. ಈ ಸಂದರ್ಭದಲ್ಲಿ ಎಲೆಕ್ಟ್ರಿಕಲ್ಸ್ ನ ಉದ್ಯೋಗಿಗಳು ಮತ್ತು ಪವರ್ ಫ್ರೆಂಡ್ಸ್ ನ ಸದಸ್ಯರು ಉಪಸ್ಥಿತರಿದ್ದರು.
ಇರಾನ್ನ ನೂತನ ಸುಪ್ರೀಂ ಲೀಡರ್ ಮೊಜ್ತಬಾ ಖಮೇನಿ ಅವರ ಆರೋಗ್ಯ ಹಾಗೂ ಅವರು ಎಲ್ಲಿದ್ದಾರೆ ಎಂಬ ಕುರಿತು ಜಾಗತಿಕ ಮಟ್ಟದಲ್ಲಿ…
ಥೈಲ್ಯಾಂಡ್ನ ರಾಜಧಾನಿ ಬ್ಯಾಂಕಾಕ್ ಸಮೀಪದ ಶಾಲೆಯೊಂದರಲ್ಲಿ 9ನೇ ತರಗತಿ ವಿದ್ಯಾರ್ಥಿಯೊಬ್ಬ ನಡೆಸಿದ ಗುಂಡಿನ ದಾಳಿಯಲ್ಲಿ ಶಿಕ್ಷಕರೊಬ್ಬರು ಮೃತಪಟ್ಟಿದ್ದು, ಕನಿಷ್ಠ 15…
ಮೂಡಬಿದ್ರೆಯ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ ಆಯೋಜಿಸಿರುವ ಆಳ್ವಾಸ್ ಪ್ರಗತಿ-2026 ಬೃಹತ್ ಉದ್ಯೋಗ ಮೇಳಕ್ಕೆ ತೆರಳಲು ಬಂಟ್ವಾಳದಿಂದ ಶುಕ್ರವಾರ ಎರಡು ಉಚಿತ…
ರಾಷ್ಟ್ರೀಯ ಹೆದ್ದಾರಿ 75ರ ಸುರಿಕುಮೇರು ಸಮೀಪದ ಹಿಂದೂಸ್ತಾನ್ ಪೆಟ್ರೋಲ್ ಬಂಕ್ ಬಳಿ ನಡೆದ ರಸ್ತೆ ಅಪಘಾತದಲ್ಲಿ ಒಂದೇ ಕುಟುಂಬದ ಆರು…
ಬಿ.ಸಿ.ರೋಡ್ನ ಎನ್.ಜಿ. ಸರ್ಕಲ್ನಲ್ಲಿ ಗುರುವಾರ ಸಂಜೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಇಬ್ಬರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.…
ಕಳೆದ ಒಂದು ವಾರದಿಂದ ನ್ಯುಮೋನಿಯಾ ಜ್ವರದಿಂದ ಬಳಲುತ್ತಿದ್ದ ವಿದ್ಯಾರ್ಥಿನಿಯೊಬ್ಬಳು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿರುವ ದುಃಖದ ಘಟನೆ ನಡೆದಿದೆ. ಮೃತ ವಿದ್ಯಾರ್ಥಿನಿಯನ್ನು…