ದಕ್ಷಿಣ ಕನ್ನಡ : ಅಭಿವೃದ್ಧಿಯ ರೋಗದಲ್ಲಿ ಹಳ್ಳಿಗಳು ನಗರಗಳಾಗುತ್ತಿವೆ, ನಗರೀಕರಣದಿಂದ ಪರಿಸರ ನಾಶವಾಗುತ್ತಿದೆ, ಪ್ಲಾಸ್ಟಿಕ್ ತ್ಯಾಜ್ಯದಿಂದ ಭೂಮಿ ನರಕ ಯಾತನೆ ಅನುಭವಿಸುತ್ತಿದೆ, ಪರಿಸರ ಸಂರಕ್ಷಣೆ ನಮ್ಮೆಲ್ಲರ ಹೊಣೆ, ದಿನನಿತ್ಯ ಸಾವಿರಾರು ಟನ್ ಪ್ಲಾಸ್ಟಿಕ್ ಹಾಗೂ ಇತರೆ ತ್ಯಾಜ್ಯಗಳು ನದಿಗೆ ಸೇರಿ ಅಲ್ಲಿಂದ ಸಮುದ್ರ ಸೇರುತ್ತಿವೆ, ಇವೆಲ್ಲದರ ನಡುವೆ ನಮ್ಮ ಅಸಮರ್ಪಕ, ಪರಿಸರಕ್ಕೆ ಪ್ರತಿಕೂಲ ಪರಿಣಾಮ ಬೀರುವ ಅಭಿವೃದ್ಧಿ ಏಗ್ಗಿಲ್ಲದೆ ಸಾಗಿದೆ, ಮಾನವ ಕೊನೆಯ ಮೊಳೆ ಹೊಡೆಯುವ ದಿವಸ ದೂರವಿಲ್ಲ ಎಂಬುದು ವಾಸ್ತವ ಸತ್ಯ.
ಮಂಗಳೂರು ನಗರದ ಕೆಪಿಟಿ ಹಾಗೂ ನಂತೂರು ಜಂಕ್ಷನ್ಗಳಲ್ಲಿ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಮೇಲ್ಸೇತುವೆಗಳ ನಿರ್ಮಾಣ ಕಾಮಗಾರಿ ಸಲುವಾಗಿ ಹೆದ್ದಾರಿ ಬದಿಯ ಮರಗಳನ್ನು ಕಡಿಯುವುದನ್ನು ವಿರೋಧಿಸಿ ಪರಿಸರವಾದಿಗಳು ವಿಭಿನ್ನವಾಗಿ ಪ್ರತಿಭಟನೆ ನಡೆಸಿದರು ಎಂದು ಮಾಧ್ಯಮಗಳಲ್ಲಿ ವರದಿಯಾಗಿದೆ. ವಿವಿಧ ಪರಿಸರ ಸಂಘಟನೆಯ ಕಾರ್ಯಕರ್ತರು ಪದವು ಹೈಸ್ಕೂಲ್ ಬಳಿ ಮರಗಳನ್ನು ಕಡಿಯುತ್ತಿರುವ ಪ್ರದೇಶದ ಬಳಿ ನಿಂತು ಪ್ರತಿಭಟನೆ ನಡೆಸಿದರು. ವಿವಿಧ ಪರಿಸರ ಸಂಘಟನೆಗಳ ಆಕ್ಷೇಪದ ಹೊರತಾಗಿಯೂ ಹೆದ್ದಾರಿ ಪಕ್ಕದ ಮರಗಳನ್ನು ಕಡಿಯಲು ಅನುಮತಿ ನೀಡಲಾಗಿದೆ. ಈ ಕಾಮಗಾರಿಯಿಂದ ಪರಿಸರದ ಮೇಲಾಗುವ ಪರಿಣಾಮದ ಅಧ್ಯಯನ ನಡೆಸುವಂತೆ ಒತ್ತಾಯಿಸಿದರೂ ಕಿವಿಗೊಟ್ಟಿಲ್ಲ. ಈಗ ಇರುವ ಮರಗಳನ್ನು ಕಡಿಯುವ ಬದಲು ಅದನ್ನು ಶಿಫ್ಟ್ ಮಾಡಿ ಅಂದರು ಕೂಡ ಯಾವುದೇ ರೀತಿಯ ಸ್ಪಂದನೆ ಮಾಡುತ್ತಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು. ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳಿಗೆ ಇದ್ಯಾವುದೂ ಬೇಕಿಲ್ಲ ಬೇಕಿರೋದೊಂದೇ ಅಭಿವೃದ್ಧಿ, ತನ್ಮೂಲಕ ಸ್ವಯಂ ಅಭಿವೃದ್ಧಿ ಆಗುವುದೇ ಕನಸು ಎಂದು ಲೇಬಡಿ ಮಾಡಿದ್ದಾರೆ.
ಜಿಲ್ಲಾಡಳಿತಕ್ಕೆ, ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರಕ್ಕೆ ಹಾಗೂ ಅರಣ್ಯ ಇಲಾಖೆಗೆ ಪರಿಸರ ಸಂರಕ್ಷಣೆಯ ಬಗ್ಗೆ ಕಿಂಚಿತ್ತಾದರೂ ಕಾಳಜಿ ಇದೆಯೇ’ ಎಂದು ಪರಿಸರ ಕಾರ್ಯಕರ್ತರು ಪ್ರಶ್ನಿಸಿದ್ದಾರೆ. ಪರಿಸರವಾದಿಗಳು, ಕಡಿದ ಮರಕ್ಕೆ ಶವ ಸಂಸ್ಕಾರ ಮಾಡಿ ತಮ್ಮ ಆಕ್ರೋಶ ವ್ಯಕ್ತಪಡಿಸಿದರು. ಈ ಪ್ರತಿಭಟನೆ ವೇಳೆ ವಿವಿಧ ಶಾಲಾ ವಿಧ್ಯಾರ್ಥಿಗಳು ಪರಿಸರ ಪ್ರೇಮಿಗಳು ಭಾಗವಹಿಸಿದ್ದರು. ಅಭಿವೃದ್ಧಿ ಹೆಸರಿನಲ್ಲಿ ಪರಿಸರ ನಾಶ ಮಾಡುತ್ತಿರುವ ಜನಪ್ರತಿನಿಧಿಗಳು ಮತ್ತು ಅಧಿಕಾರಿಗಳ ವಿರುದ್ಧ ಜನರು ಆಕ್ರೋಶ ವ್ಯಕ್ತಪಡಿಸಿದ್ದಾರೆ ಎಂದು ಮಾಧ್ಯಮಗಳಲ್ಲಿ ವರದಿಯಾಗಿದೆ.
ಇರಾನ್ನ ನೂತನ ಸುಪ್ರೀಂ ಲೀಡರ್ ಮೊಜ್ತಬಾ ಖಮೇನಿ ಅವರ ಆರೋಗ್ಯ ಹಾಗೂ ಅವರು ಎಲ್ಲಿದ್ದಾರೆ ಎಂಬ ಕುರಿತು ಜಾಗತಿಕ ಮಟ್ಟದಲ್ಲಿ…
ಥೈಲ್ಯಾಂಡ್ನ ರಾಜಧಾನಿ ಬ್ಯಾಂಕಾಕ್ ಸಮೀಪದ ಶಾಲೆಯೊಂದರಲ್ಲಿ 9ನೇ ತರಗತಿ ವಿದ್ಯಾರ್ಥಿಯೊಬ್ಬ ನಡೆಸಿದ ಗುಂಡಿನ ದಾಳಿಯಲ್ಲಿ ಶಿಕ್ಷಕರೊಬ್ಬರು ಮೃತಪಟ್ಟಿದ್ದು, ಕನಿಷ್ಠ 15…
ಮೂಡಬಿದ್ರೆಯ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ ಆಯೋಜಿಸಿರುವ ಆಳ್ವಾಸ್ ಪ್ರಗತಿ-2026 ಬೃಹತ್ ಉದ್ಯೋಗ ಮೇಳಕ್ಕೆ ತೆರಳಲು ಬಂಟ್ವಾಳದಿಂದ ಶುಕ್ರವಾರ ಎರಡು ಉಚಿತ…
ರಾಷ್ಟ್ರೀಯ ಹೆದ್ದಾರಿ 75ರ ಸುರಿಕುಮೇರು ಸಮೀಪದ ಹಿಂದೂಸ್ತಾನ್ ಪೆಟ್ರೋಲ್ ಬಂಕ್ ಬಳಿ ನಡೆದ ರಸ್ತೆ ಅಪಘಾತದಲ್ಲಿ ಒಂದೇ ಕುಟುಂಬದ ಆರು…
ಬಿ.ಸಿ.ರೋಡ್ನ ಎನ್.ಜಿ. ಸರ್ಕಲ್ನಲ್ಲಿ ಗುರುವಾರ ಸಂಜೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಇಬ್ಬರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.…
ಕಳೆದ ಒಂದು ವಾರದಿಂದ ನ್ಯುಮೋನಿಯಾ ಜ್ವರದಿಂದ ಬಳಲುತ್ತಿದ್ದ ವಿದ್ಯಾರ್ಥಿನಿಯೊಬ್ಬಳು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿರುವ ದುಃಖದ ಘಟನೆ ನಡೆದಿದೆ. ಮೃತ ವಿದ್ಯಾರ್ಥಿನಿಯನ್ನು…