ಜನ ಮನದ ನಾಡಿ ಮಿಡಿತ

Advertisement

ಕಾರು ಚಾಲಕನ ಯಡವಟ್ಟು…! ಬೈಕ್ ಸವಾರನಿಗೆ ಗಂಭೀರ ಗಾಯ

ಬಂಟ್ವಾಳ: ಕಾರು ಚಾಲಕನೋರ್ವನ ಅಜಾಗರೂಕತೆಯ ಚಾಲನೆಯಿಂದ ಬೈಕ್ ಸವಾರನೊರ್ವನಿಗೆ ಡಿಕ್ಕಿಯಾಗಿ ಗಾಯಗೊಂಡು ಆಸ್ಪತ್ರೆಗೆ ದಾಖಲಾದ ಘಟನೆ ಬಿಸಿರೋಡಿನ ಕೈಕಂಬ ತಲಪಾಡಿ ಎಂಬಲ್ಲಿ ಅ.2 ರಂದು ಸೋಮವಾರ ರಾತ್ರಿ 10 ಗಂಟೆ ಸುಮಾರಿಗೆ ನಡೆದಿದೆ.

ಬೈಕ್ ಸವಾರ ಶಿವಪ್ರಸಾದ್ ಗಾಯಗೊಂಡವರಾಗಿದ್ದಾರೆ. ಶಿವಪ್ರಸಾದ್ ಮತ್ತು ಸಹಸವಾರ ತಿಲಕ್ ಪ್ರಸಾದ್ ಅವರು ಬಿ.ಸಿ.ರೋಡು ಕಡೆಯಿಂದ ಮಂಗಳೂರು ಕಡೆಗೆ ಹೋಗುತ್ತಿದ್ದ ವೇಳೆ ಹಿಂಬದಿಯಿಂದ ಬಿ.ಸಿ.ರೋಡು ಕಡೆಯಿಂದ ಬರುತ್ತಿದ್ದ ಕಾರು ಬಿ.ಸಿ.ರೋಡು ತಲಪಾಡಿ ಕೆಎಸ್.ಆರ್.ಟಿ.ಸಿ‌.ಡಿಪೋ ಎದುರುಗಡೆ ಡಿಕ್ಕಿ ಹೊಡೆದಿದೆ. ಕಾರಿನ ಚಾಲಕ ಜಾಕೀರ್ ಹುಸೈನ್ ಅವರು ಅಜಾಗರೂಕತೆಯಿಂದ ಬಲಬದಿ ಅಂದರೆ ಮತ್ತೆ ವಾಪಸು ಬಿ.ಸಿ.ರೋಡು ಕಡೆಗೆ ಹೋಗುವ ಉದ್ದೇಶದಿಂದ ತಲಪಾಡಿ ಡಿವೈಡರ್ ನಲ್ಲಿ ಬಲಬದಿಗೆ ತಿರುಗಿಸಿದಾಗ ಬೈಕ್ ಗೆ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಬೈಕ್ ರಸ್ತೆಗೆ ಪಲ್ಟಿಯಾಗಿದೆ.

ಸವಾರ ರಸ್ತೆಗೆ ಎಸೆಯಲ್ಪಟ್ಟು ಗಾಯಗೊಂಡಿದ್ದು, ತುಂಬೆ ಫಾದರ್ ಮುಲ್ಲರ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಸ್ಥಳಕ್ಕೆ ಮೆಲ್ಕಾರ್ ಟ್ರಾಫಿಕ್ ಪೊಲೀಸರು ಬೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

Leave a Reply

Your email address will not be published. Required fields are marked *

ಟೆಹ್ರಾನ್: ಖಮೇನಿ ಭೇಟಿಯಲ್ಲೇ ಹೊಸ ರಹಸ್ಯ! ‘ನೀವೇ ಖಮೇನಿಯೇ?’ ಎಂದು ಪ್ರಶ್ನಿಸಿದ ಇರಾನ್ ಅಧ್ಯಕ್ಷ…!

ಬ್ಯಾಂಕಾಕ್: ಥೈಲ್ಯಾಂಡ್ ಶಾಲೆಯಲ್ಲಿ ಗುಂಡಿನ ದಾಳಿ: ಶಿಕ್ಷಕ ಸಾವು, 15 ಮಂದಿಗೆ ಗಾಯ…!

ಬಂಟ್ವಾಳ: ಆಳ್ವಾಸ್ ಪ್ರಗತಿ-2026 ಉದ್ಯೋಗ ಮೇಳಕ್ಕೆ ಬಂಟ್ವಾಳದಿಂದ ಉಚಿತ ಬಸ್…!

ಮಂಗಳೂರು: ರಾಷ್ಟ್ರೀಯ ಹೆದ್ದಾರಿ 75ರಲ್ಲಿ ಕಾರು ಅಪಘಾತ: ಒಂದೇ ಕುಟುಂಬದ ಆರು ಮಂದಿಗೆ ಗಾಯ…!

ಬಂಟ್ವಾಳ: ಬಿ.ಸಿ.ರೋಡ್ ಎನ್.ಜಿ. ಸರ್ಕಲ್‌ನಲ್ಲಿ ಭೀಕರ ಅಪಘಾತ: ಚಿಕಿತ್ಸೆ ಫಲಕಾರಿಯಾಗದೆ ಇಬ್ಬರು ಮೃತ್ಯು…!

ಮಂಗಳೂರು: ನ್ಯುಮೋನಿಯಾಗೆ 6ನೇ ತರಗತಿ ವಿದ್ಯಾರ್ಥಿನಿ ಬಲಿ

ಬಂಟ್ವಾಳ: ಬಿಸಿರೋಡು–ಅಡ್ಡಹೊಳೆ ಚತುಷ್ಪಥ ಕಾಮಗಾರಿ ನಿಂತಿಲ್ಲ: ಕೆಎನ್‌ಆರ್‌ಸಿಎಲ್ ಸ್ಪಷ್ಟನೆ

ವಾಷಿಂಗ್ಟನ್: ಟ್ರಂಪ್ ಸುಂಕಕ್ಕೆ ಸುಪ್ರೀಂ ಕೋರ್ಟ್ ಬ್ರೇಕ್; ಕಂಪನಿಗಳಿಗೆ ಬಿಲಿಯನ್‌ಗಟ್ಟಲೆ ಮರುಪಾವತಿ..!

ಟೆಹ್ರಾನ್: ಮೊಜ್ತಬಾ ಖಮೇನಿ ಸಂಪರ್ಕಿಸುವುದು ಕಷ್ಟ; ಇರಾನ್ ಅಧ್ಯಕ್ಷರ ಬಹಿರಂಗ ಹೇಳಿಕೆ…!

error: Content is protected !!