ಜನ ಮನದ ನಾಡಿ ಮಿಡಿತ

Advertisement

ಕಾರು ಚಾಲಕನ ಯಡವಟ್ಟು…! ಬೈಕ್ ಸವಾರನಿಗೆ ಗಂಭೀರ ಗಾಯ

ಬಂಟ್ವಾಳ: ಕಾರು ಚಾಲಕನೋರ್ವನ ಅಜಾಗರೂಕತೆಯ ಚಾಲನೆಯಿಂದ ಬೈಕ್ ಸವಾರನೊರ್ವನಿಗೆ ಡಿಕ್ಕಿಯಾಗಿ ಗಾಯಗೊಂಡು ಆಸ್ಪತ್ರೆಗೆ ದಾಖಲಾದ ಘಟನೆ ಬಿಸಿರೋಡಿನ ಕೈಕಂಬ ತಲಪಾಡಿ ಎಂಬಲ್ಲಿ ಅ.2 ರಂದು ಸೋಮವಾರ ರಾತ್ರಿ 10 ಗಂಟೆ ಸುಮಾರಿಗೆ ನಡೆದಿದೆ.

ಬೈಕ್ ಸವಾರ ಶಿವಪ್ರಸಾದ್ ಗಾಯಗೊಂಡವರಾಗಿದ್ದಾರೆ. ಶಿವಪ್ರಸಾದ್ ಮತ್ತು ಸಹಸವಾರ ತಿಲಕ್ ಪ್ರಸಾದ್ ಅವರು ಬಿ.ಸಿ.ರೋಡು ಕಡೆಯಿಂದ ಮಂಗಳೂರು ಕಡೆಗೆ ಹೋಗುತ್ತಿದ್ದ ವೇಳೆ ಹಿಂಬದಿಯಿಂದ ಬಿ.ಸಿ.ರೋಡು ಕಡೆಯಿಂದ ಬರುತ್ತಿದ್ದ ಕಾರು ಬಿ.ಸಿ.ರೋಡು ತಲಪಾಡಿ ಕೆಎಸ್.ಆರ್.ಟಿ.ಸಿ‌.ಡಿಪೋ ಎದುರುಗಡೆ ಡಿಕ್ಕಿ ಹೊಡೆದಿದೆ. ಕಾರಿನ ಚಾಲಕ ಜಾಕೀರ್ ಹುಸೈನ್ ಅವರು ಅಜಾಗರೂಕತೆಯಿಂದ ಬಲಬದಿ ಅಂದರೆ ಮತ್ತೆ ವಾಪಸು ಬಿ.ಸಿ.ರೋಡು ಕಡೆಗೆ ಹೋಗುವ ಉದ್ದೇಶದಿಂದ ತಲಪಾಡಿ ಡಿವೈಡರ್ ನಲ್ಲಿ ಬಲಬದಿಗೆ ತಿರುಗಿಸಿದಾಗ ಬೈಕ್ ಗೆ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಬೈಕ್ ರಸ್ತೆಗೆ ಪಲ್ಟಿಯಾಗಿದೆ.

ಸವಾರ ರಸ್ತೆಗೆ ಎಸೆಯಲ್ಪಟ್ಟು ಗಾಯಗೊಂಡಿದ್ದು, ತುಂಬೆ ಫಾದರ್ ಮುಲ್ಲರ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಸ್ಥಳಕ್ಕೆ ಮೆಲ್ಕಾರ್ ಟ್ರಾಫಿಕ್ ಪೊಲೀಸರು ಬೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

Leave a Reply

Your email address will not be published. Required fields are marked *

ಉಡುಪಿ: ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಭೇಟಿ….!

ಬಂಟ್ವಾಳ: ಬಡಗಬೆಳ್ಳೂರಿನಲ್ಲಿ ಕುಸಿದು ಬಿದ್ದ ಸೇತುವೆ; ಜನ ಸಂಚಾರಕ್ಕೆ ಭಾರೀ ಸಂಕಷ್ಟ…..!

ಬಂಟ್ವಾಳ: ಜ್ವರದಿಂದ ಬಳಲುತ್ತಿದ್ದ ಬಾಲಕಿ ಚಿಕಿತ್ಸೆ ಫಲಕಾರಿಯಾಗದೆ ನಿಧನ….!

ಬಂಟ್ವಾಳ: ಮಿನಿ ವಿಧಾನಸೌಧ ಮುಂಭಾಗದ ಕ್ಯಾಂಟೀನ್‌ನಲ್ಲಿ ಅನಿಲ ಸೋರಿಕೆ ಆತಂಕ….!

ಕಾಸರಗೋಡು: ಸಮುದ್ರದಲ್ಲಿ ಕೊಚ್ಚಿಹೋದ ಇಬ್ಬರು ಕಾಲೇಜು ವಿದ್ಯಾರ್ಥಿಗಳು..!

ಕಡಬ: ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಪಿಕಪ್ ಪಲ್ಟಿ..!

ಕಡಬ: ಗೋಳಿತ್ತಡಿ-ಏಣಿತ್ತಡ್ಕ-ಕುದುಲೂರು ಸಂಪರ್ಕಿತ ರಸ್ತೆ; ರಸ್ತೆಯುದ್ದಕ್ಕೂ ಹೊಂಡಮಯ..!

ಬಂಟ್ವಾಳ: ಪಾಣೆಮಂಗಳೂರು ಕಲ್ಲುರ್ಟಿ ದೈವಸ್ಥಾನದ ಮುಂಭಾಗದ ಸರ್ವೀಸ್ ರಸ್ತೆಯಲ್ಲಿ ಹೊಂಡಗುಂಡಿ…!

ಉಡುಪಿ: ಮಾದಕ ದ್ರವ್ಯ ಸಾಗಾಟ- ಮಾರಾಟ ಪ್ರಕರಣ: ಪಿಐಟಿ- ಎನ್‌ಡಿಪಿಎಸ್ ಕಾಯ್ದೆಯಡಿ ಆರೋಪಿಯ ಬಂಧನ…!

error: Content is protected !!