ಬಂಟ್ವಾಳ: ಕಾರು ಚಾಲಕನೋರ್ವನ ಅಜಾಗರೂಕತೆಯ ಚಾಲನೆಯಿಂದ ಬೈಕ್ ಸವಾರನೊರ್ವನಿಗೆ ಡಿಕ್ಕಿಯಾಗಿ ಗಾಯಗೊಂಡು ಆಸ್ಪತ್ರೆಗೆ ದಾಖಲಾದ ಘಟನೆ ಬಿಸಿರೋಡಿನ ಕೈಕಂಬ ತಲಪಾಡಿ ಎಂಬಲ್ಲಿ ಅ.2 ರಂದು ಸೋಮವಾರ ರಾತ್ರಿ 10 ಗಂಟೆ ಸುಮಾರಿಗೆ ನಡೆದಿದೆ.
ಬೈಕ್ ಸವಾರ ಶಿವಪ್ರಸಾದ್ ಗಾಯಗೊಂಡವರಾಗಿದ್ದಾರೆ. ಶಿವಪ್ರಸಾದ್ ಮತ್ತು ಸಹಸವಾರ ತಿಲಕ್ ಪ್ರಸಾದ್ ಅವರು ಬಿ.ಸಿ.ರೋಡು ಕಡೆಯಿಂದ ಮಂಗಳೂರು ಕಡೆಗೆ ಹೋಗುತ್ತಿದ್ದ ವೇಳೆ ಹಿಂಬದಿಯಿಂದ ಬಿ.ಸಿ.ರೋಡು ಕಡೆಯಿಂದ ಬರುತ್ತಿದ್ದ ಕಾರು ಬಿ.ಸಿ.ರೋಡು ತಲಪಾಡಿ ಕೆಎಸ್.ಆರ್.ಟಿ.ಸಿ.ಡಿಪೋ ಎದುರುಗಡೆ ಡಿಕ್ಕಿ ಹೊಡೆದಿದೆ. ಕಾರಿನ ಚಾಲಕ ಜಾಕೀರ್ ಹುಸೈನ್ ಅವರು ಅಜಾಗರೂಕತೆಯಿಂದ ಬಲಬದಿ ಅಂದರೆ ಮತ್ತೆ ವಾಪಸು ಬಿ.ಸಿ.ರೋಡು ಕಡೆಗೆ ಹೋಗುವ ಉದ್ದೇಶದಿಂದ ತಲಪಾಡಿ ಡಿವೈಡರ್ ನಲ್ಲಿ ಬಲಬದಿಗೆ ತಿರುಗಿಸಿದಾಗ ಬೈಕ್ ಗೆ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಬೈಕ್ ರಸ್ತೆಗೆ ಪಲ್ಟಿಯಾಗಿದೆ.
ಸವಾರ ರಸ್ತೆಗೆ ಎಸೆಯಲ್ಪಟ್ಟು ಗಾಯಗೊಂಡಿದ್ದು, ತುಂಬೆ ಫಾದರ್ ಮುಲ್ಲರ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಸ್ಥಳಕ್ಕೆ ಮೆಲ್ಕಾರ್ ಟ್ರಾಫಿಕ್ ಪೊಲೀಸರು ಬೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಇರಾನ್ನ ನೂತನ ಸುಪ್ರೀಂ ಲೀಡರ್ ಮೊಜ್ತಬಾ ಖಮೇನಿ ಅವರ ಆರೋಗ್ಯ ಹಾಗೂ ಅವರು ಎಲ್ಲಿದ್ದಾರೆ ಎಂಬ ಕುರಿತು ಜಾಗತಿಕ ಮಟ್ಟದಲ್ಲಿ…
ಥೈಲ್ಯಾಂಡ್ನ ರಾಜಧಾನಿ ಬ್ಯಾಂಕಾಕ್ ಸಮೀಪದ ಶಾಲೆಯೊಂದರಲ್ಲಿ 9ನೇ ತರಗತಿ ವಿದ್ಯಾರ್ಥಿಯೊಬ್ಬ ನಡೆಸಿದ ಗುಂಡಿನ ದಾಳಿಯಲ್ಲಿ ಶಿಕ್ಷಕರೊಬ್ಬರು ಮೃತಪಟ್ಟಿದ್ದು, ಕನಿಷ್ಠ 15…
ಮೂಡಬಿದ್ರೆಯ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ ಆಯೋಜಿಸಿರುವ ಆಳ್ವಾಸ್ ಪ್ರಗತಿ-2026 ಬೃಹತ್ ಉದ್ಯೋಗ ಮೇಳಕ್ಕೆ ತೆರಳಲು ಬಂಟ್ವಾಳದಿಂದ ಶುಕ್ರವಾರ ಎರಡು ಉಚಿತ…
ರಾಷ್ಟ್ರೀಯ ಹೆದ್ದಾರಿ 75ರ ಸುರಿಕುಮೇರು ಸಮೀಪದ ಹಿಂದೂಸ್ತಾನ್ ಪೆಟ್ರೋಲ್ ಬಂಕ್ ಬಳಿ ನಡೆದ ರಸ್ತೆ ಅಪಘಾತದಲ್ಲಿ ಒಂದೇ ಕುಟುಂಬದ ಆರು…
ಬಿ.ಸಿ.ರೋಡ್ನ ಎನ್.ಜಿ. ಸರ್ಕಲ್ನಲ್ಲಿ ಗುರುವಾರ ಸಂಜೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಇಬ್ಬರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.…
ಕಳೆದ ಒಂದು ವಾರದಿಂದ ನ್ಯುಮೋನಿಯಾ ಜ್ವರದಿಂದ ಬಳಲುತ್ತಿದ್ದ ವಿದ್ಯಾರ್ಥಿನಿಯೊಬ್ಬಳು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿರುವ ದುಃಖದ ಘಟನೆ ನಡೆದಿದೆ. ಮೃತ ವಿದ್ಯಾರ್ಥಿನಿಯನ್ನು…