ಜನ ಮನದ ನಾಡಿ ಮಿಡಿತ

Advertisement

ಕಾರ್ಮಿಕನ ವಿವಾಹ ನೋಂದಾವಣೆ ವಿಚಾರ: ಅಧಿಕಾರಿಗಳ ಉತ್ತರದಿಂದ ಗೊಂದಲ ಸೃಷ್ಟಿ….?!

ಬಂಟ್ವಾಳ: ಕಾರ್ಮಿಕ ಇಲಾಖೆಯಲ್ಲಿ ನೋಂದಾಯಿಸಲ್ಪಟ್ಟ ಕಾರ್ಮಿಕನ ವಿವಾಹಕ್ಕೆ ಸರಕಾರದಿಂದ ಸಿಗುವ ಸಹಾಯಧನ ಪಡೆಯುವ ವಿಚಾರದಲ್ಲಿ ಕಾರ್ಮಿಕ ಇಲಾಖೆಯ ದ.ಕ.ಉಪವಿಭಾಗ-2 ರ ಕಾರ್ಮಿಕ ಅಧಿಕಾರಿ ಮಾಹಿತಿ ಹಕ್ಕು ಕಾಯ್ದೆಯಡಿ ಅರ್ಜಿದಾರರು ಕೇಳಲಾದ ಪ್ರಶ್ನೆಗೆ ನೀಡಿರುವ ವಿಭಿನ್ನ‌ ಉತ್ತರದಿಂದ ಕಾರ್ಮಿಕರು ಗೊಂದಲಕ್ಕೊಳಗಾಗಿದ್ದಾರೆ.

ವಿಶೇಷ ವಿವಾಹ ಅಧಿನಿಯಮ 1854 ಕಲಂ13 ರನ್ವಯ ವಿವಾಹ ನೋಂದಣಾಧಿಕಾರಿಯವರು ನೀಡಿರುವ ಮದುವೆ ಪ್ರಮಾಣಪತ್ರ ಮದುವೆ ಸಹಾಯಧನ ಪಡೆಯಲು ಸಲ್ಲಿಸಬಹುದೆ? ಎಂದು ಮಾಹಿತಿ ಹಕ್ಕು‌ಕಾಯ್ದೆಯಡಿ ಪ್ರಶ್ನಿಸಿದ್ದರು. ಈ ಪ್ರಶ್ನೆಗೆ ಕಾರ್ಮಿಕ ಇಲಾಖೆಯ ಅಧಿಕಾರಿಗಳು ಮದುವೆಯ ವಯಸ್ಸು ಹೆಣ್ಣಿಗೂ, ಗಂಡಿಗೂ 21ವರ್ಷ ಎಂಬರ್ಥದ ಉತ್ತರ ನೀಡಿದ್ದರು. 21 ವರ್ಷ ಆಗದೇ ಇದ್ದಲ್ಲಿ ಕಾಯ್ದೆಯಲ್ಲಿ ಮದುವೆಗೆ ಅವಕಾಶವೆ ಇಲ್ಲ ಎಂಬಂತೆ ಉತ್ತರ ನೀಡಲಾಗಿದ್ದು,‌ಈ ಉತ್ತರವು ಹಲವಾರು ಗೊಂದಲಗಳಿಗೆ ಕಾರಣವಾಗಿತ್ತು. ಇದಾದ ನಂತರ ಮತ್ತೋರ್ವ ಅರ್ಜಿದಾರರೋರ್ವರು ಇದೇ ಮಾದರಿಯ ಪ್ರಶ್ನೆಯನ್ನು ಅದೇ ಅಧಿಕಾರಿಗೆ ಮಾಹಿತಿಹಕ್ಕಿನಲ್ಲಿ ಕೇಳಿದ್ದರು.ಎರಡನೇ ಫಲಾನುಭವಿ ಸಲ್ಲಿಸಿದ ಅರ್ಜಿಗೆ ‘ಈ ಕಚೇರಿಯಲ್ಲಿ ಈ ಬಗ್ಗೆ ಯಾವುದೇ ದಾಖಲೆಗಳು ಇರುವುದಿಲ್ಲ’ ಎಂದು ಉತ್ತರಿಸಿದ್ದಾರೆ.

ಕಾರ್ಮಿಕ ಅಧಿಕಾರಿಯವರ ಈ ವಿಭಿನ್ನ ಉತ್ತರದಿಂದ ನೋಂದಾಯಿತು ಕಾರ್ಮಿಕರು ಸರಕಾರದ ಸವಲತ್ತು ಪಡೆಯುವಲ್ಲಿ ಗೊಂದಲಕ್ಕೊಳಗಾಗಿದ್ದಾರೆ.ಸರಕಾರವೇನೋ ದುಡಿಯುವ ಕಾರ್ಮಿಕ ವರ್ಗಕ್ಕೆ ಸವಲತ್ತುಗಳನ್ನು‌ ನೀಡುತ್ತದೆ.ಆದರೆ ಅಧಿಕಾರಿಗಳು ಹಾಕುವಂತ ಕೊಕ್ಕೆಯಿಂದಾಗಿ ಸವಲತ್ತು ಫಲಾನುಭವಿಗಳಿಗೆ ತಲುಪುವಲ್ಲಿ‌ ಸಾಧ್ಯವಾಗುತ್ತಿಲ್ಲ !

Leave a Reply

Your email address will not be published. Required fields are marked *

ಪಟ್ಲ ಸತೀಶ್ ಶೆಟ್ಟಿ ಅವರಿಗೆ ಡಾ. ಶಿವರಾಮ ಕಾರಂತ ಪ್ರಶಸ್ತಿ..!

ವ್ಯಕ್ತಿಯೊಬ್ಬ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ…!

ವಿ ಡಿ ಸತೀಶನ್ ಅವರನ್ನು ಕಾಸರಗೋಡಿನಲ್ಲಿ ಭೇಟಿ ಮಾಡಿ ಮನವಿ ಸಲ್ಲಿಸಲಾಯಿತು…!

ಜಿಲ್ಲೆಯ ಹಿರಿಯ ರಾಜಕಾರಣಿ, ಬೈಂದೂರಿನ ಮಾಜಿ ಶಾಸಕ ಬಸ್ರೂರು ಅಪ್ಪಣ್ಣ ಹೆಗ್ಡೆ ನಿಧನ…!

ಬಂಟ್ವಾಳ: ನಿವೃತ್ತ ಕೃಷಿ ಅಧಿಕಾರಿ ನಾರಾಯಣ ನಾಯ್ಕ್ (65) ಹೃದಯಾಘಾತದಿಂದ ನಿಧನ!

ಮಂಗಳೂರು: ಪಟ್ಲ ಸತೀಶ್ ಶೆಟ್ಟಿಯವರಿಗೆ ಅತ್ಯುನ್ನತ ಡಾ. ಶಿವರಾಮ ಕಾರಂತ ಪ್ರಶಸ್ತಿ ಘೋಷಣೆ!

ಮಂಗಳೂರು: ಪಚ್ಚನಾಡಿ ರೈಲ್ವೇ ಹಳಿಯಲ್ಲಿ ಯುವಕನ ಮೃ*ತದೇಹ ಪತ್ತೆ; ಸಂಶಯಾಸ್ಪದ ಸಾ*ವು..!

ಬಂಟ್ವಾಳ: ಪಾಣೆಮಂಗಳೂರು ಸಮೀಪ ನೇತ್ರಾವತಿ ನದಿಯಲ್ಲಿ ಮೃ*ತದೇಹ ಪ*ತ್ತೆ….!

ಮಂಗಳೂರು: ಸಂಹಿತೆಗಳ ಜಾರಿಯಿಂದ ಯೂನಿಯನ್ ಮುಕ್ತ ಭಾರತವಾಗುವ ಅಪಾಯವಿದೆ- ಫಣೀಂದ್ರ ಕೆ ಎಚ್ಚರ!

error: Content is protected !!