ಜನ ಮನದ ನಾಡಿ ಮಿಡಿತ

Advertisement

ಕಾರ್ಮಿಕನ ವಿವಾಹ ನೋಂದಾವಣೆ ವಿಚಾರ: ಅಧಿಕಾರಿಗಳ ಉತ್ತರದಿಂದ ಗೊಂದಲ ಸೃಷ್ಟಿ….?!

ಬಂಟ್ವಾಳ: ಕಾರ್ಮಿಕ ಇಲಾಖೆಯಲ್ಲಿ ನೋಂದಾಯಿಸಲ್ಪಟ್ಟ ಕಾರ್ಮಿಕನ ವಿವಾಹಕ್ಕೆ ಸರಕಾರದಿಂದ ಸಿಗುವ ಸಹಾಯಧನ ಪಡೆಯುವ ವಿಚಾರದಲ್ಲಿ ಕಾರ್ಮಿಕ ಇಲಾಖೆಯ ದ.ಕ.ಉಪವಿಭಾಗ-2 ರ ಕಾರ್ಮಿಕ ಅಧಿಕಾರಿ ಮಾಹಿತಿ ಹಕ್ಕು ಕಾಯ್ದೆಯಡಿ ಅರ್ಜಿದಾರರು ಕೇಳಲಾದ ಪ್ರಶ್ನೆಗೆ ನೀಡಿರುವ ವಿಭಿನ್ನ‌ ಉತ್ತರದಿಂದ ಕಾರ್ಮಿಕರು ಗೊಂದಲಕ್ಕೊಳಗಾಗಿದ್ದಾರೆ.

ವಿಶೇಷ ವಿವಾಹ ಅಧಿನಿಯಮ 1854 ಕಲಂ13 ರನ್ವಯ ವಿವಾಹ ನೋಂದಣಾಧಿಕಾರಿಯವರು ನೀಡಿರುವ ಮದುವೆ ಪ್ರಮಾಣಪತ್ರ ಮದುವೆ ಸಹಾಯಧನ ಪಡೆಯಲು ಸಲ್ಲಿಸಬಹುದೆ? ಎಂದು ಮಾಹಿತಿ ಹಕ್ಕು‌ಕಾಯ್ದೆಯಡಿ ಪ್ರಶ್ನಿಸಿದ್ದರು. ಈ ಪ್ರಶ್ನೆಗೆ ಕಾರ್ಮಿಕ ಇಲಾಖೆಯ ಅಧಿಕಾರಿಗಳು ಮದುವೆಯ ವಯಸ್ಸು ಹೆಣ್ಣಿಗೂ, ಗಂಡಿಗೂ 21ವರ್ಷ ಎಂಬರ್ಥದ ಉತ್ತರ ನೀಡಿದ್ದರು. 21 ವರ್ಷ ಆಗದೇ ಇದ್ದಲ್ಲಿ ಕಾಯ್ದೆಯಲ್ಲಿ ಮದುವೆಗೆ ಅವಕಾಶವೆ ಇಲ್ಲ ಎಂಬಂತೆ ಉತ್ತರ ನೀಡಲಾಗಿದ್ದು,‌ಈ ಉತ್ತರವು ಹಲವಾರು ಗೊಂದಲಗಳಿಗೆ ಕಾರಣವಾಗಿತ್ತು. ಇದಾದ ನಂತರ ಮತ್ತೋರ್ವ ಅರ್ಜಿದಾರರೋರ್ವರು ಇದೇ ಮಾದರಿಯ ಪ್ರಶ್ನೆಯನ್ನು ಅದೇ ಅಧಿಕಾರಿಗೆ ಮಾಹಿತಿಹಕ್ಕಿನಲ್ಲಿ ಕೇಳಿದ್ದರು.ಎರಡನೇ ಫಲಾನುಭವಿ ಸಲ್ಲಿಸಿದ ಅರ್ಜಿಗೆ ‘ಈ ಕಚೇರಿಯಲ್ಲಿ ಈ ಬಗ್ಗೆ ಯಾವುದೇ ದಾಖಲೆಗಳು ಇರುವುದಿಲ್ಲ’ ಎಂದು ಉತ್ತರಿಸಿದ್ದಾರೆ.

ಕಾರ್ಮಿಕ ಅಧಿಕಾರಿಯವರ ಈ ವಿಭಿನ್ನ ಉತ್ತರದಿಂದ ನೋಂದಾಯಿತು ಕಾರ್ಮಿಕರು ಸರಕಾರದ ಸವಲತ್ತು ಪಡೆಯುವಲ್ಲಿ ಗೊಂದಲಕ್ಕೊಳಗಾಗಿದ್ದಾರೆ.ಸರಕಾರವೇನೋ ದುಡಿಯುವ ಕಾರ್ಮಿಕ ವರ್ಗಕ್ಕೆ ಸವಲತ್ತುಗಳನ್ನು‌ ನೀಡುತ್ತದೆ.ಆದರೆ ಅಧಿಕಾರಿಗಳು ಹಾಕುವಂತ ಕೊಕ್ಕೆಯಿಂದಾಗಿ ಸವಲತ್ತು ಫಲಾನುಭವಿಗಳಿಗೆ ತಲುಪುವಲ್ಲಿ‌ ಸಾಧ್ಯವಾಗುತ್ತಿಲ್ಲ !

Leave a Reply

Your email address will not be published. Required fields are marked *

ಉಡುಪಿ: ಅಪಾರ್ಟ್‌ಮೆಂಟ್‌ನಲ್ಲಿ ವ್ಯಕ್ತಿ ಆತ್ಮಹತ್ಯೆ

ಮಂಗಳೂರು: ಮಂಗಳೂರಿನಲ್ಲಿ ಆ.13ರಂದು ಡೋಲ್ಚೆ ಎಸ್ಥೆಟಿಕಾ ಸಂಸ್ಥೆಯ ಮೊದಲ ಶಾಖೆ ಆರಂಭ

ಮಂಗಳೂರು: ಕದ್ರಿ ಬಂಜನ್‌ ಕ್ಷೇತ್ರದಲ್ಲಿ ನಿವೃತ್ತ ವೀರ ಯೋಧರು, ವೀರನಾರಿಯರಿಗೆ ಸನ್ಮಾನ…!

ಮಂಗಳೂರು: ಡಿಸಿ ಮನ್ನಾ ಭೂಮಿ ಹಂಚಿಕೆಗೆ ಆಗ್ರಹ: ಒಂದು ತಿಂಗಳಲ್ಲಿ ಸಮಸ್ಯೆ ಬಗೆಹರಿಸದಿದ್ದರೆ ಉಗ್ರ ಹೋರಾಟ…!

ವಿಟ್ಲ: ಗ್ಯಾಸ್ ಸಿಲಿಂಡರ್ ಸ್ಫೋಟ, ಮನೆ ಸಂಪೂರ್ಣ ಜಖಂ; ಲಕ್ಷಾಂತರ ರೂ. ನಷ್ಟ

ತೊಕ್ಕೊಟ್ಟು: ಬಾರ್ ಬಳಿ ತಲವಾರು ಬೀಸಿ ಆತಂಕ ಸೃಷ್ಟಿಸಿದ ರೌಡಿಶೀಟರ್ ಬಂಧನ…!

ಟೆಹ್ರಾನ್: ಖಮೇನಿ ಭೇಟಿಯಲ್ಲೇ ಹೊಸ ರಹಸ್ಯ! ‘ನೀವೇ ಖಮೇನಿಯೇ?’ ಎಂದು ಪ್ರಶ್ನಿಸಿದ ಇರಾನ್ ಅಧ್ಯಕ್ಷ…!

ಬ್ಯಾಂಕಾಕ್: ಥೈಲ್ಯಾಂಡ್ ಶಾಲೆಯಲ್ಲಿ ಗುಂಡಿನ ದಾಳಿ: ಶಿಕ್ಷಕ ಸಾವು, 15 ಮಂದಿಗೆ ಗಾಯ…!

ಬಂಟ್ವಾಳ: ಆಳ್ವಾಸ್ ಪ್ರಗತಿ-2026 ಉದ್ಯೋಗ ಮೇಳಕ್ಕೆ ಬಂಟ್ವಾಳದಿಂದ ಉಚಿತ ಬಸ್…!

error: Content is protected !!