ಬಂಟ್ವಾಳ: ಕಾರ್ಮಿಕ ಇಲಾಖೆಯಲ್ಲಿ ನೋಂದಾಯಿಸಲ್ಪಟ್ಟ ಕಾರ್ಮಿಕನ ವಿವಾಹಕ್ಕೆ ಸರಕಾರದಿಂದ ಸಿಗುವ ಸಹಾಯಧನ ಪಡೆಯುವ ವಿಚಾರದಲ್ಲಿ ಕಾರ್ಮಿಕ ಇಲಾಖೆಯ ದ.ಕ.ಉಪವಿಭಾಗ-2 ರ ಕಾರ್ಮಿಕ ಅಧಿಕಾರಿ ಮಾಹಿತಿ ಹಕ್ಕು ಕಾಯ್ದೆಯಡಿ ಅರ್ಜಿದಾರರು ಕೇಳಲಾದ ಪ್ರಶ್ನೆಗೆ ನೀಡಿರುವ ವಿಭಿನ್ನ ಉತ್ತರದಿಂದ ಕಾರ್ಮಿಕರು ಗೊಂದಲಕ್ಕೊಳಗಾಗಿದ್ದಾರೆ.
ವಿಶೇಷ ವಿವಾಹ ಅಧಿನಿಯಮ 1854 ಕಲಂ13 ರನ್ವಯ ವಿವಾಹ ನೋಂದಣಾಧಿಕಾರಿಯವರು ನೀಡಿರುವ ಮದುವೆ ಪ್ರಮಾಣಪತ್ರ ಮದುವೆ ಸಹಾಯಧನ ಪಡೆಯಲು ಸಲ್ಲಿಸಬಹುದೆ? ಎಂದು ಮಾಹಿತಿ ಹಕ್ಕುಕಾಯ್ದೆಯಡಿ ಪ್ರಶ್ನಿಸಿದ್ದರು. ಈ ಪ್ರಶ್ನೆಗೆ ಕಾರ್ಮಿಕ ಇಲಾಖೆಯ ಅಧಿಕಾರಿಗಳು ಮದುವೆಯ ವಯಸ್ಸು ಹೆಣ್ಣಿಗೂ, ಗಂಡಿಗೂ 21ವರ್ಷ ಎಂಬರ್ಥದ ಉತ್ತರ ನೀಡಿದ್ದರು. 21 ವರ್ಷ ಆಗದೇ ಇದ್ದಲ್ಲಿ ಕಾಯ್ದೆಯಲ್ಲಿ ಮದುವೆಗೆ ಅವಕಾಶವೆ ಇಲ್ಲ ಎಂಬಂತೆ ಉತ್ತರ ನೀಡಲಾಗಿದ್ದು,ಈ ಉತ್ತರವು ಹಲವಾರು ಗೊಂದಲಗಳಿಗೆ ಕಾರಣವಾಗಿತ್ತು. ಇದಾದ ನಂತರ ಮತ್ತೋರ್ವ ಅರ್ಜಿದಾರರೋರ್ವರು ಇದೇ ಮಾದರಿಯ ಪ್ರಶ್ನೆಯನ್ನು ಅದೇ ಅಧಿಕಾರಿಗೆ ಮಾಹಿತಿಹಕ್ಕಿನಲ್ಲಿ ಕೇಳಿದ್ದರು.ಎರಡನೇ ಫಲಾನುಭವಿ ಸಲ್ಲಿಸಿದ ಅರ್ಜಿಗೆ ‘ಈ ಕಚೇರಿಯಲ್ಲಿ ಈ ಬಗ್ಗೆ ಯಾವುದೇ ದಾಖಲೆಗಳು ಇರುವುದಿಲ್ಲ’ ಎಂದು ಉತ್ತರಿಸಿದ್ದಾರೆ.
ಕಾರ್ಮಿಕ ಅಧಿಕಾರಿಯವರ ಈ ವಿಭಿನ್ನ ಉತ್ತರದಿಂದ ನೋಂದಾಯಿತು ಕಾರ್ಮಿಕರು ಸರಕಾರದ ಸವಲತ್ತು ಪಡೆಯುವಲ್ಲಿ ಗೊಂದಲಕ್ಕೊಳಗಾಗಿದ್ದಾರೆ.ಸರಕಾರವೇನೋ ದುಡಿಯುವ ಕಾರ್ಮಿಕ ವರ್ಗಕ್ಕೆ ಸವಲತ್ತುಗಳನ್ನು ನೀಡುತ್ತದೆ.ಆದರೆ ಅಧಿಕಾರಿಗಳು ಹಾಕುವಂತ ಕೊಕ್ಕೆಯಿಂದಾಗಿ ಸವಲತ್ತು ಫಲಾನುಭವಿಗಳಿಗೆ ತಲುಪುವಲ್ಲಿ ಸಾಧ್ಯವಾಗುತ್ತಿಲ್ಲ !
ಇರಾನ್ನ ನೂತನ ಸುಪ್ರೀಂ ಲೀಡರ್ ಮೊಜ್ತಬಾ ಖಮೇನಿ ಅವರ ಆರೋಗ್ಯ ಹಾಗೂ ಅವರು ಎಲ್ಲಿದ್ದಾರೆ ಎಂಬ ಕುರಿತು ಜಾಗತಿಕ ಮಟ್ಟದಲ್ಲಿ…
ಥೈಲ್ಯಾಂಡ್ನ ರಾಜಧಾನಿ ಬ್ಯಾಂಕಾಕ್ ಸಮೀಪದ ಶಾಲೆಯೊಂದರಲ್ಲಿ 9ನೇ ತರಗತಿ ವಿದ್ಯಾರ್ಥಿಯೊಬ್ಬ ನಡೆಸಿದ ಗುಂಡಿನ ದಾಳಿಯಲ್ಲಿ ಶಿಕ್ಷಕರೊಬ್ಬರು ಮೃತಪಟ್ಟಿದ್ದು, ಕನಿಷ್ಠ 15…
ಮೂಡಬಿದ್ರೆಯ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ ಆಯೋಜಿಸಿರುವ ಆಳ್ವಾಸ್ ಪ್ರಗತಿ-2026 ಬೃಹತ್ ಉದ್ಯೋಗ ಮೇಳಕ್ಕೆ ತೆರಳಲು ಬಂಟ್ವಾಳದಿಂದ ಶುಕ್ರವಾರ ಎರಡು ಉಚಿತ…
ರಾಷ್ಟ್ರೀಯ ಹೆದ್ದಾರಿ 75ರ ಸುರಿಕುಮೇರು ಸಮೀಪದ ಹಿಂದೂಸ್ತಾನ್ ಪೆಟ್ರೋಲ್ ಬಂಕ್ ಬಳಿ ನಡೆದ ರಸ್ತೆ ಅಪಘಾತದಲ್ಲಿ ಒಂದೇ ಕುಟುಂಬದ ಆರು…
ಬಿ.ಸಿ.ರೋಡ್ನ ಎನ್.ಜಿ. ಸರ್ಕಲ್ನಲ್ಲಿ ಗುರುವಾರ ಸಂಜೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಇಬ್ಬರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.…
ಕಳೆದ ಒಂದು ವಾರದಿಂದ ನ್ಯುಮೋನಿಯಾ ಜ್ವರದಿಂದ ಬಳಲುತ್ತಿದ್ದ ವಿದ್ಯಾರ್ಥಿನಿಯೊಬ್ಬಳು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿರುವ ದುಃಖದ ಘಟನೆ ನಡೆದಿದೆ. ಮೃತ ವಿದ್ಯಾರ್ಥಿನಿಯನ್ನು…