ಬಂಟ್ವಾಳ: ಕಾರ್ಮಿಕ ಇಲಾಖೆಯಲ್ಲಿ ನೋಂದಾಯಿಸಲ್ಪಟ್ಟ ಕಾರ್ಮಿಕನ ವಿವಾಹಕ್ಕೆ ಸರಕಾರದಿಂದ ಸಿಗುವ ಸಹಾಯಧನ ಪಡೆಯುವ ವಿಚಾರದಲ್ಲಿ ಕಾರ್ಮಿಕ ಇಲಾಖೆಯ ದ.ಕ.ಉಪವಿಭಾಗ-2 ರ ಕಾರ್ಮಿಕ ಅಧಿಕಾರಿ ಮಾಹಿತಿ ಹಕ್ಕು ಕಾಯ್ದೆಯಡಿ ಅರ್ಜಿದಾರರು ಕೇಳಲಾದ ಪ್ರಶ್ನೆಗೆ ನೀಡಿರುವ ವಿಭಿನ್ನ ಉತ್ತರದಿಂದ ಕಾರ್ಮಿಕರು ಗೊಂದಲಕ್ಕೊಳಗಾಗಿದ್ದಾರೆ.
ವಿಶೇಷ ವಿವಾಹ ಅಧಿನಿಯಮ 1854 ಕಲಂ13 ರನ್ವಯ ವಿವಾಹ ನೋಂದಣಾಧಿಕಾರಿಯವರು ನೀಡಿರುವ ಮದುವೆ ಪ್ರಮಾಣಪತ್ರ ಮದುವೆ ಸಹಾಯಧನ ಪಡೆಯಲು ಸಲ್ಲಿಸಬಹುದೆ? ಎಂದು ಮಾಹಿತಿ ಹಕ್ಕುಕಾಯ್ದೆಯಡಿ ಪ್ರಶ್ನಿಸಿದ್ದರು. ಈ ಪ್ರಶ್ನೆಗೆ ಕಾರ್ಮಿಕ ಇಲಾಖೆಯ ಅಧಿಕಾರಿಗಳು ಮದುವೆಯ ವಯಸ್ಸು ಹೆಣ್ಣಿಗೂ, ಗಂಡಿಗೂ 21ವರ್ಷ ಎಂಬರ್ಥದ ಉತ್ತರ ನೀಡಿದ್ದರು. 21 ವರ್ಷ ಆಗದೇ ಇದ್ದಲ್ಲಿ ಕಾಯ್ದೆಯಲ್ಲಿ ಮದುವೆಗೆ ಅವಕಾಶವೆ ಇಲ್ಲ ಎಂಬಂತೆ ಉತ್ತರ ನೀಡಲಾಗಿದ್ದು,ಈ ಉತ್ತರವು ಹಲವಾರು ಗೊಂದಲಗಳಿಗೆ ಕಾರಣವಾಗಿತ್ತು. ಇದಾದ ನಂತರ ಮತ್ತೋರ್ವ ಅರ್ಜಿದಾರರೋರ್ವರು ಇದೇ ಮಾದರಿಯ ಪ್ರಶ್ನೆಯನ್ನು ಅದೇ ಅಧಿಕಾರಿಗೆ ಮಾಹಿತಿಹಕ್ಕಿನಲ್ಲಿ ಕೇಳಿದ್ದರು.ಎರಡನೇ ಫಲಾನುಭವಿ ಸಲ್ಲಿಸಿದ ಅರ್ಜಿಗೆ ‘ಈ ಕಚೇರಿಯಲ್ಲಿ ಈ ಬಗ್ಗೆ ಯಾವುದೇ ದಾಖಲೆಗಳು ಇರುವುದಿಲ್ಲ’ ಎಂದು ಉತ್ತರಿಸಿದ್ದಾರೆ.
ಕಾರ್ಮಿಕ ಅಧಿಕಾರಿಯವರ ಈ ವಿಭಿನ್ನ ಉತ್ತರದಿಂದ ನೋಂದಾಯಿತು ಕಾರ್ಮಿಕರು ಸರಕಾರದ ಸವಲತ್ತು ಪಡೆಯುವಲ್ಲಿ ಗೊಂದಲಕ್ಕೊಳಗಾಗಿದ್ದಾರೆ.ಸರಕಾರವೇನೋ ದುಡಿಯುವ ಕಾರ್ಮಿಕ ವರ್ಗಕ್ಕೆ ಸವಲತ್ತುಗಳನ್ನು ನೀಡುತ್ತದೆ.ಆದರೆ ಅಧಿಕಾರಿಗಳು ಹಾಕುವಂತ ಕೊಕ್ಕೆಯಿಂದಾಗಿ ಸವಲತ್ತು ಫಲಾನುಭವಿಗಳಿಗೆ ತಲುಪುವಲ್ಲಿ ಸಾಧ್ಯವಾಗುತ್ತಿಲ್ಲ !
ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಭೇಟಿ ನೀಡಿ ದೇವಿ ಮೂಕಾಂಬಿಕಾ…
ಮಳೆಗಾಲ ಆರಂಭವಾಗುತ್ತಿದ್ದಂತೆ ಸೇತುವೆಯೊಂದು ಕುಸಿದು ಬಿದ್ದ ಪರಿಣಾಮ ಹಲವು ಗ್ರಾಮಗಳ ಸಂಪರ್ಕದ ಕೊಂಡಿ ಕಳಚಿ ಬಿದ್ದು, ಜನರು ದ್ವೀಪದಂತೆ, ಹಳ್ಳಿಯೊಳಗೆ…
ಜ್ವರದಿಂದ ಬಳಲುತ್ತಿದ್ದ ಬಾಲಕಿಯೊರ್ವಳು ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದ ಘಟನೆ ಬಂಟ್ವಾಳ ತಾಲೂಕಿನ ಅಲ್ಲಿಪಾದೆ ಎಂಬಲ್ಲಿ ನಡೆದಿದೆ. ಅಲ್ಲಿಪಾದೆ ಅನೇಜ…
ಬಿಸಿರೋಡಿನ ಪ್ರಸಿದ್ದ ಕ್ಯಾಂಟೀನ್ ಒಂದರಲ್ಲಿ ಅಡುಗೆ ಅನಿಲ ಸೋರಿಕೆಯಾಗಿ ಸ್ವಲ್ಪದರಲ್ಲಿ ದೊಡ್ಡ ದುರಂತವೊಂದು ತಪ್ಪಿದೆ. ಬಿಸಿರೋಡಿನ ಮಿನಿ ವಿಧಾನ ಸೌಧದ…
ಬೇಕಲ ಕೋಟೆ ಸಮೀಪದ ಪಳ್ಳಿಕರೆ ಕಡಲತೀರದಲ್ಲಿ ಭಾನುವಾರ ಸಂಜೆ ಸಂಭವಿಸಿದ ದುರ್ಘಟನೆಯಲ್ಲಿ ಇಬ್ಬರು ಕಾಲೇಜು ವಿದ್ಯಾರ್ಥಿಗಳು ಸಮುದ್ರದಲ್ಲಿ ಕೊಚ್ಚಿಹೋಗಿದ್ದು, ಅವರಿಗಾಗಿ…
ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಪಿಕಪ್ ಪಲ್ಟಿ ಹೊಡೆದ ಘಟನೆ ಸುಬ್ರಹ್ಮಣ್ಯ ಸಮೀಪದ ಕುಲ್ಕುಂದ ಎಂಬಲ್ಲಿ ನಡೆದಿದೆ. ರಾತ್ರಿ ವೇಳೆ…