ಜನ ಮನದ ನಾಡಿ ಮಿಡಿತ

Advertisement

ಒಂದೇ ಕ್ಲಾಸಿನಲ್ಲಿ 5 ಅವಳಿಜವಳಿ ಜೋಡಿ: ಸಹಪಾಠಿಗಳಿಗೆ ಫುಲ್ ಕನ್ಫ್ಯೂಸ್…..!!

ಬಂಟ್ವಾಳ: ವಿಶೇಷ ಎಂಬಂತೆ ತಾಲೂಕಿನ ಸಜೀಪಮೂಡ ಸರಕಾರಿ ಪದವಿ ಪೂರ್ವ ಕಾಲೇಜಿನ ಪ್ರೌಢಶಾಲಾ ವಿಭಾಗದ ಒಂದೇ ಕ್ಲಾಸಿನಲ್ಲಿ 5 ಜೋಡಿ ಅವಳಿಜವಳಿ ವಿದ್ಯಾರ್ಥಿಗಳು ಇದೀಗ ಎಲ್ಲರ ಕಣ್ಣಾಗಿದ್ದಾರೆ.

ತಾಲೂಕಿನ ಸಜೀಪಮೂಡ ಸರಕಾರಿ ಪದವಿ ಪೂರ್ವ ಕಾಲೇಜಿನ ಪ್ರೌಢಶಾಲಾ ವಿಭಾಗದಲ್ಲಿ 5 ಜೋಡಿ ಅವಳಿ ಜವಳಿ ವಿದ್ಯಾರ್ಥಿಗಳು ಎಂಟನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದಾರೆ. ಅಯಿಷಾ ಝಿಬಾ-ಖತೀಝಾ ಝಿಯಾ, ಶ್ರಣವಿ-ಜಾನ್ಹವಿ, ಫಾತಿಮತ್ ಕಮಿಲ-ಫಾತಿಮತ್ ಸಮಿಲ, ಆಯಿಷಾ ರೈಫಾ- ಫಾತೀಮಾ ರೌಲ, ದುಲೈಕತ್ ರುಫಿದಾ- ಹಲೀಮತ್ ರಾಫಿದ ಒಂದೇ ತರಗತಿಯಲ್ಲಿ ಕಲಿಯುತ್ತಿರುವ ಅವಳಿ ಜವಳಿ ವಿದ್ಯಾರ್ಥಿಗಳಾಗಿದ್ದು, 5ಜೋಡಿ ಅವಳಿ ಮಕ್ಕಳಲ್ಲಿ ಒಂದು ಜೋಡಿ ಹಿಂದೂ ಸಮುದಾಯದ ಹಾಗೂ ಉಳಿದಂತೆ ನಾಲ್ಕು ಜೋಡಿ ಮಕ್ಕಳು ಮುಸ್ಲಿಂ ಸಮುದಾಯದಕ್ಕೆ ಸೇರಿದವರಾಗಿದ್ದು ಆಶ್ಛರ್ಯ ಎಂಬಂತೆ ಒಂದೇ ಶಾಲೆಯ ಒಂದೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದಾರೆ.

ಅವಳಿ ಜವಳಿ ಮಕ್ಕಳು ಹೆಚ್ಚಾಗಿ ರೂಪದಲ್ಲಿ ಮತ್ತು ಚಟುವಟಿಕೆಯಲ್ಲಿ ಒಂದೇ ಸಮನಾಗಿರುವುದರಿಂದ ಶಿಕ್ಷಕರು ಮತ್ತು ವಿದ್ಯಾರ್ಥಿಗಳು ಕೆಲವೊಮ್ಮೆ ತಬ್ಬಿಬ್ಬಗುವ ಪ್ರಸಂಗಗಳು ನಡೆಯುತ್ತಿರುತ್ತದೆ. ಒಮ್ಮೊಮ್ಮೆ ಸಹಪಾಠಿಗಳು ಪೂಲ್ ಆಗುವ ಸಂದರ್ಭಗಳು ಕೂಡ ಬಂದಿವೆಯಂತೆ. ಒಂದಿಬ್ಬರು ವಿದ್ಯಾರ್ಥಿಗಳು ಒಂದೇ ತರಗತಿಯಲ್ಲಿ ಕಂಡು ಬಂದಿರುವ ಸಂಗತಿಗಳು ಬೆಳಕಿಗೆ ಬಂದಿವೆ.ಜಿಲ್ಲೆಯ ಬೇರೆ ಬೇರೆ ಶಾಲೆಗಳಲ್ಲಿ ಈ ರೀತಿಯ ಅವಳಿ ಜವಳಿ ಮಕ್ಕಳ ಬಗ್ಗೆ ವರದಿಯಾಗಿದೆ.ಆದರೆ ಬಂಟ್ವಾಳ ತಾಲೂಕಿನಲ್ಲಿ ಬಹುಶಃ ಇದೇ ಮೊದಲ ಶಾಲೆಯಾಗಿರಬೇಕು. ಅದರಲ್ಲೂ ಈ ಐದು ಜೋಡಿ ಕೂಡ ವಿದ್ಯಾರ್ಥಿನಿಯರು ಎಂಬುದನ್ನು ಉಲ್ಲೇಖ ಮಾಡಬೇಕಾಗುತ್ತದೆ.

Leave a Reply

Your email address will not be published. Required fields are marked *

ಪಟ್ಲ ಸತೀಶ್ ಶೆಟ್ಟಿ ಅವರಿಗೆ ಡಾ. ಶಿವರಾಮ ಕಾರಂತ ಪ್ರಶಸ್ತಿ..!

ವ್ಯಕ್ತಿಯೊಬ್ಬ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ…!

ವಿ ಡಿ ಸತೀಶನ್ ಅವರನ್ನು ಕಾಸರಗೋಡಿನಲ್ಲಿ ಭೇಟಿ ಮಾಡಿ ಮನವಿ ಸಲ್ಲಿಸಲಾಯಿತು…!

ಜಿಲ್ಲೆಯ ಹಿರಿಯ ರಾಜಕಾರಣಿ, ಬೈಂದೂರಿನ ಮಾಜಿ ಶಾಸಕ ಬಸ್ರೂರು ಅಪ್ಪಣ್ಣ ಹೆಗ್ಡೆ ನಿಧನ…!

ಬಂಟ್ವಾಳ: ನಿವೃತ್ತ ಕೃಷಿ ಅಧಿಕಾರಿ ನಾರಾಯಣ ನಾಯ್ಕ್ (65) ಹೃದಯಾಘಾತದಿಂದ ನಿಧನ!

ಮಂಗಳೂರು: ಪಟ್ಲ ಸತೀಶ್ ಶೆಟ್ಟಿಯವರಿಗೆ ಅತ್ಯುನ್ನತ ಡಾ. ಶಿವರಾಮ ಕಾರಂತ ಪ್ರಶಸ್ತಿ ಘೋಷಣೆ!

ಮಂಗಳೂರು: ಪಚ್ಚನಾಡಿ ರೈಲ್ವೇ ಹಳಿಯಲ್ಲಿ ಯುವಕನ ಮೃ*ತದೇಹ ಪತ್ತೆ; ಸಂಶಯಾಸ್ಪದ ಸಾ*ವು..!

ಬಂಟ್ವಾಳ: ಪಾಣೆಮಂಗಳೂರು ಸಮೀಪ ನೇತ್ರಾವತಿ ನದಿಯಲ್ಲಿ ಮೃ*ತದೇಹ ಪ*ತ್ತೆ….!

ಮಂಗಳೂರು: ಸಂಹಿತೆಗಳ ಜಾರಿಯಿಂದ ಯೂನಿಯನ್ ಮುಕ್ತ ಭಾರತವಾಗುವ ಅಪಾಯವಿದೆ- ಫಣೀಂದ್ರ ಕೆ ಎಚ್ಚರ!

error: Content is protected !!