ಬಂಟ್ವಾಳ: ವಿಶೇಷ ಎಂಬಂತೆ ತಾಲೂಕಿನ ಸಜೀಪಮೂಡ ಸರಕಾರಿ ಪದವಿ ಪೂರ್ವ ಕಾಲೇಜಿನ ಪ್ರೌಢಶಾಲಾ ವಿಭಾಗದ ಒಂದೇ ಕ್ಲಾಸಿನಲ್ಲಿ 5 ಜೋಡಿ ಅವಳಿಜವಳಿ ವಿದ್ಯಾರ್ಥಿಗಳು ಇದೀಗ ಎಲ್ಲರ ಕಣ್ಣಾಗಿದ್ದಾರೆ.
ತಾಲೂಕಿನ ಸಜೀಪಮೂಡ ಸರಕಾರಿ ಪದವಿ ಪೂರ್ವ ಕಾಲೇಜಿನ ಪ್ರೌಢಶಾಲಾ ವಿಭಾಗದಲ್ಲಿ 5 ಜೋಡಿ ಅವಳಿ ಜವಳಿ ವಿದ್ಯಾರ್ಥಿಗಳು ಎಂಟನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದಾರೆ. ಅಯಿಷಾ ಝಿಬಾ-ಖತೀಝಾ ಝಿಯಾ, ಶ್ರಣವಿ-ಜಾನ್ಹವಿ, ಫಾತಿಮತ್ ಕಮಿಲ-ಫಾತಿಮತ್ ಸಮಿಲ, ಆಯಿಷಾ ರೈಫಾ- ಫಾತೀಮಾ ರೌಲ, ದುಲೈಕತ್ ರುಫಿದಾ- ಹಲೀಮತ್ ರಾಫಿದ ಒಂದೇ ತರಗತಿಯಲ್ಲಿ ಕಲಿಯುತ್ತಿರುವ ಅವಳಿ ಜವಳಿ ವಿದ್ಯಾರ್ಥಿಗಳಾಗಿದ್ದು, 5ಜೋಡಿ ಅವಳಿ ಮಕ್ಕಳಲ್ಲಿ ಒಂದು ಜೋಡಿ ಹಿಂದೂ ಸಮುದಾಯದ ಹಾಗೂ ಉಳಿದಂತೆ ನಾಲ್ಕು ಜೋಡಿ ಮಕ್ಕಳು ಮುಸ್ಲಿಂ ಸಮುದಾಯದಕ್ಕೆ ಸೇರಿದವರಾಗಿದ್ದು ಆಶ್ಛರ್ಯ ಎಂಬಂತೆ ಒಂದೇ ಶಾಲೆಯ ಒಂದೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದಾರೆ.
ಅವಳಿ ಜವಳಿ ಮಕ್ಕಳು ಹೆಚ್ಚಾಗಿ ರೂಪದಲ್ಲಿ ಮತ್ತು ಚಟುವಟಿಕೆಯಲ್ಲಿ ಒಂದೇ ಸಮನಾಗಿರುವುದರಿಂದ ಶಿಕ್ಷಕರು ಮತ್ತು ವಿದ್ಯಾರ್ಥಿಗಳು ಕೆಲವೊಮ್ಮೆ ತಬ್ಬಿಬ್ಬಗುವ ಪ್ರಸಂಗಗಳು ನಡೆಯುತ್ತಿರುತ್ತದೆ. ಒಮ್ಮೊಮ್ಮೆ ಸಹಪಾಠಿಗಳು ಪೂಲ್ ಆಗುವ ಸಂದರ್ಭಗಳು ಕೂಡ ಬಂದಿವೆಯಂತೆ. ಒಂದಿಬ್ಬರು ವಿದ್ಯಾರ್ಥಿಗಳು ಒಂದೇ ತರಗತಿಯಲ್ಲಿ ಕಂಡು ಬಂದಿರುವ ಸಂಗತಿಗಳು ಬೆಳಕಿಗೆ ಬಂದಿವೆ.ಜಿಲ್ಲೆಯ ಬೇರೆ ಬೇರೆ ಶಾಲೆಗಳಲ್ಲಿ ಈ ರೀತಿಯ ಅವಳಿ ಜವಳಿ ಮಕ್ಕಳ ಬಗ್ಗೆ ವರದಿಯಾಗಿದೆ.ಆದರೆ ಬಂಟ್ವಾಳ ತಾಲೂಕಿನಲ್ಲಿ ಬಹುಶಃ ಇದೇ ಮೊದಲ ಶಾಲೆಯಾಗಿರಬೇಕು. ಅದರಲ್ಲೂ ಈ ಐದು ಜೋಡಿ ಕೂಡ ವಿದ್ಯಾರ್ಥಿನಿಯರು ಎಂಬುದನ್ನು ಉಲ್ಲೇಖ ಮಾಡಬೇಕಾಗುತ್ತದೆ.
ಬಾವಿಗೆ ಬಿದ್ದ ಹೆಣ್ಣು ಮಗುವನ್ನು ಸ್ಥಳೀಯ ಯುವಕ ರಕ್ಷಿಸಿದ ಘಟನೆ ವರದಿಯಾಗಿದೆ. ಉಳ್ಳಾಲದಲ್ಲಿ ಆಟವಾಡುತ್ತಾ ಎರಡೂವರೆ ಹರೆಯದ ಮಗುವೊಂದು ದಂಡೆಯಿಲ್ಲದ…
ಸಮಾಜದಲ್ಲಿ ಒಡಕುಂಟು ಮಾಡಿ, ದ್ವೇಷವನ್ನು ಬಿತ್ತುವ ಹಾಗೂ ಶಾಂತಿಯನ್ನು ಕದಡಲು ಪ್ರಚೋದನಾತ್ಮಕ ಭಾಷಣವನ್ನು ಯಾರು ಮಾಡಿದರೂ, ಅವರ ಮೇಲೆ ಪ್ರಕರಣ…
ಕರಾವಳಿಯ ಗಂಡುಕಲೆ ಎಂದೇ ಪ್ರಸಿದ್ಧ ಪಡೆದಿರುವ ಯಕ್ಷಗಾನ ಉತ್ತರ ಪ್ರದೇಶದ ಶ್ರೀರಾಮ ಜನ್ಮ ಭೂಮಿ ಅಯೋಧ್ಯೆಯಲ್ಲಿ ಪ್ರಪ್ರಥಮ ಬಾರಿಗೆ ಪ್ರದರ್ಶನವಾಗಿದೆ.…
ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ' ಕೃತಿಯನ್ನು ಬಿಡುಗಡೆ ಮಾಡಲಾಯಿತು. ಅಮೃತ ಪ್ರಕಾಶನದ 45ನೇ ಸರಣಿ ಕೃತಿ ಕೊಡಗಿನ ಚಿತ್ರ…
ಕಳೆದ ವಾರಗಳಿಂದೀಚೆಗೆ ಸುರಿಯುತ್ತಿರುವ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿಯಾಗಿದೆ. ಇಡ್ಕಿದು ಗ್ರಾಮದ ಬಡಜ ಸುಧಾ ಎಂಬವರ…
ಕೇಂದ್ರ ಸರಕಾರದ ಪಿಎಂಇಜಿಪಿ ಯೋಜನೆ ಅಡಿಯಲ್ಲಿ ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಕೋಟ್ಯಂತರ ರೂ. ಹಣ ವಂಚಿಸಿರುವ ಪ್ರಕರಣಕ್ಕೆ ಸಂಬಂಧಿಸಿ…