ರಾಜ್ಯ

ಒಂದೇ ಕ್ಲಾಸಿನಲ್ಲಿ 5 ಅವಳಿಜವಳಿ ಜೋಡಿ: ಸಹಪಾಠಿಗಳಿಗೆ ಫುಲ್ ಕನ್ಫ್ಯೂಸ್…..!!

ಬಂಟ್ವಾಳ: ವಿಶೇಷ ಎಂಬಂತೆ ತಾಲೂಕಿನ ಸಜೀಪಮೂಡ ಸರಕಾರಿ ಪದವಿ ಪೂರ್ವ ಕಾಲೇಜಿನ ಪ್ರೌಢಶಾಲಾ ವಿಭಾಗದ ಒಂದೇ ಕ್ಲಾಸಿನಲ್ಲಿ 5 ಜೋಡಿ ಅವಳಿಜವಳಿ ವಿದ್ಯಾರ್ಥಿಗಳು ಇದೀಗ ಎಲ್ಲರ ಕಣ್ಣಾಗಿದ್ದಾರೆ.

ತಾಲೂಕಿನ ಸಜೀಪಮೂಡ ಸರಕಾರಿ ಪದವಿ ಪೂರ್ವ ಕಾಲೇಜಿನ ಪ್ರೌಢಶಾಲಾ ವಿಭಾಗದಲ್ಲಿ 5 ಜೋಡಿ ಅವಳಿ ಜವಳಿ ವಿದ್ಯಾರ್ಥಿಗಳು ಎಂಟನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದಾರೆ. ಅಯಿಷಾ ಝಿಬಾ-ಖತೀಝಾ ಝಿಯಾ, ಶ್ರಣವಿ-ಜಾನ್ಹವಿ, ಫಾತಿಮತ್ ಕಮಿಲ-ಫಾತಿಮತ್ ಸಮಿಲ, ಆಯಿಷಾ ರೈಫಾ- ಫಾತೀಮಾ ರೌಲ, ದುಲೈಕತ್ ರುಫಿದಾ- ಹಲೀಮತ್ ರಾಫಿದ ಒಂದೇ ತರಗತಿಯಲ್ಲಿ ಕಲಿಯುತ್ತಿರುವ ಅವಳಿ ಜವಳಿ ವಿದ್ಯಾರ್ಥಿಗಳಾಗಿದ್ದು, 5ಜೋಡಿ ಅವಳಿ ಮಕ್ಕಳಲ್ಲಿ ಒಂದು ಜೋಡಿ ಹಿಂದೂ ಸಮುದಾಯದ ಹಾಗೂ ಉಳಿದಂತೆ ನಾಲ್ಕು ಜೋಡಿ ಮಕ್ಕಳು ಮುಸ್ಲಿಂ ಸಮುದಾಯದಕ್ಕೆ ಸೇರಿದವರಾಗಿದ್ದು ಆಶ್ಛರ್ಯ ಎಂಬಂತೆ ಒಂದೇ ಶಾಲೆಯ ಒಂದೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದಾರೆ.

ಅವಳಿ ಜವಳಿ ಮಕ್ಕಳು ಹೆಚ್ಚಾಗಿ ರೂಪದಲ್ಲಿ ಮತ್ತು ಚಟುವಟಿಕೆಯಲ್ಲಿ ಒಂದೇ ಸಮನಾಗಿರುವುದರಿಂದ ಶಿಕ್ಷಕರು ಮತ್ತು ವಿದ್ಯಾರ್ಥಿಗಳು ಕೆಲವೊಮ್ಮೆ ತಬ್ಬಿಬ್ಬಗುವ ಪ್ರಸಂಗಗಳು ನಡೆಯುತ್ತಿರುತ್ತದೆ. ಒಮ್ಮೊಮ್ಮೆ ಸಹಪಾಠಿಗಳು ಪೂಲ್ ಆಗುವ ಸಂದರ್ಭಗಳು ಕೂಡ ಬಂದಿವೆಯಂತೆ. ಒಂದಿಬ್ಬರು ವಿದ್ಯಾರ್ಥಿಗಳು ಒಂದೇ ತರಗತಿಯಲ್ಲಿ ಕಂಡು ಬಂದಿರುವ ಸಂಗತಿಗಳು ಬೆಳಕಿಗೆ ಬಂದಿವೆ.ಜಿಲ್ಲೆಯ ಬೇರೆ ಬೇರೆ ಶಾಲೆಗಳಲ್ಲಿ ಈ ರೀತಿಯ ಅವಳಿ ಜವಳಿ ಮಕ್ಕಳ ಬಗ್ಗೆ ವರದಿಯಾಗಿದೆ.ಆದರೆ ಬಂಟ್ವಾಳ ತಾಲೂಕಿನಲ್ಲಿ ಬಹುಶಃ ಇದೇ ಮೊದಲ ಶಾಲೆಯಾಗಿರಬೇಕು. ಅದರಲ್ಲೂ ಈ ಐದು ಜೋಡಿ ಕೂಡ ವಿದ್ಯಾರ್ಥಿನಿಯರು ಎಂಬುದನ್ನು ಉಲ್ಲೇಖ ಮಾಡಬೇಕಾಗುತ್ತದೆ.

ಅಭಿಮತ ಟಿವಿ

Abhimatha TV is a trusted channel renowned for its dedication to honest journalism and its unwavering commitment to showcasing the rich culture, heritage, and traditions of Tulunadu. With a focus on delivering unbiased news and promoting the region's vibrant art forms, rituals, and cultural events, Abhimatha TV has become a beacon of authenticity and pride for the community. Established in 2018, the channel was founded by Mamatha P. Shetty (Managing Partner) and Kanyana Sadhashiva Shetty (Chief Promoter) with a mission to provide truthful reporting and celebrate the essence of our heritage.

Recent Posts

ಮಂಗಳೂರು: ಮಂತ್ರಾಲಯದ ಬಳಿ ಭೀಕರ ಅಪಘಾತ; ಯಕ್ಷಧ್ರುವ ಪಟ್ಲ ಫೌಂಡೇಷನ್ ಕಾರ್ಯದರ್ಶಿ ರವಿ ಶೆಟ್ಟಿ ನಿಧನ…!

ಯಕ್ಷಧ್ರುವ ಪಟ್ಲ ಫೌಂಡೇಷನ್ ಮಂಗಳೂರು ಇದರ ಜೊತೆ ಕಾರ್ಯದರ್ಶಿ ರವಿ ಶೆಟ್ಟಿ ಅಶೋಕ್ ನಗರ ಅಪಘಾತದಿಂದ ಮಂಗಳವಾರ (ಜು.21) ಮುಂಜಾನೆ…

3 days ago

ಬಂಟ್ವಾಳ: ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದಲ್ಲಿ ಅಗ್ನಿ ಅವಘಡ…..!

ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದ ದಾಸೋಟ್ಟು-ಕುಕ್ಕಾಜೆ ನಿವಾಸಿ ರಮೇಶ್ ಪೂಜಾರಿ ಅವರ ಮನೆಯ ಹಿಂಭಾಗಕ್ಕೆ ಹೊಂದಿಕೊಂಡಿದ್ದ ಬಚ್ಚಲು ಮನೆ ಹಾಗೂ…

4 days ago

ಬಂಟ್ವಾಳ: ಸೂರಿಕುಮೇರ್ ಪೆಟ್ರೋಲ್ ಬಂಕ್ ಸಮೀಪ ಅಪ*ಘಾತ; ಮಾನವೀಯತೆ ಮೆರೆದ ಎಸ್‌ಐ ರಾಮಕೃಷ್ಣ..!

ಪೊಲೀಸ್ ಇಲಾಖೆಯ ನಿಜವಾದ ಕರ್ತವ್ಯನಿಷ್ಠೆ, ಸಮಯಪ್ರಜ್ಞೆ ಮತ್ತು ಮಾನವೀಯತೆಯ ಅಪರೂಪದ ಉದಾಹರಣೆಯೊಂದು ಸೂರಿಕುಮೇರ್ ಪೆಟ್ರೋಲ್ ಬಂಕ್ ಸಮೀಪದಲ್ಲಿ ನಡೆದ ಅಪಘಾತದ…

4 days ago

ಮಂಗಳೂರು: ವಿವಾಹಿತ ಮಹಿಳೆಯೊಬ್ಬರು ಮನೆಯಲ್ಲಿಯೇ ನೇಣು ಬಿಗಿದು ಆತ್ಮಹ*ತ್ಯೆ..!

ವಿವಾಹಿತ ಮಹಿಳೆಯೊಬ್ಬರು ಮನೆಯಲ್ಲಿಯೇ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮೂಡಬಿದರೆಯ ಮಿಜಾರು ಕೊಪ್ಪದಕುಮೇರಿಯಲ್ಲಿ ಸಂಜೆ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ…

5 days ago

ವಿಟ್ಲ: ರಸ್ತೆ ಬದಿಯ ಮರಕ್ಕೆ ಡಿಕ್ಕಿಹೊಡೆದ ಟಿಪ್ಪರ್ ಲಾರಿ – ಇಬ್ಬರಿಗೆ ಗಾಯ..!

ನಿಯಂತ್ರಣ ತಪ್ಪಿದ ಟಿಪ್ಪರ್ ಲಾರಿಯೊಂದು ರಸ್ತೆ ಬದಿಯ ಮರವೊಂದಕ್ಕೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಗಂಭೀರ ಗಾಯಗೊಂಡ ಘಟನೆ ವಿಟ್ಲ…

5 days ago

ಮಾಣಿ: ಮರ ಬಿದ್ದು ಟ್ರಾನ್ಸ್ ಫಾರ್ಮರ್‌ಗೆ ಹಾನಿ; ರಸ್ತೆ ಮೇಲೆ ಮರ ಸಹಿತ ಮುರಿದುಬಿದ್ದು ಸಂಚಾರ ಬಂದ್…!

ಶುಕ್ರವಾರ ಸಂಜೆ ಬೀಸಿದ ಬಿರುಗಾಳಿ ಮಳೆಗೆ ರಾಷ್ಟ್ರೀಯ ಹೆದ್ದಾರಿ ಮಾಣಿ ಬೊಳ್ಳುಕಲ್ಲಿನಿಂದ ಪೆರಾಜೆ ಶ್ರೀ ರಾಮಚಂದ್ರಾಪುರ ಮಠಕ್ಕೆ ಹೋಗುವ ಕಮಲ…

6 days ago