ಬಂಟ್ವಾಳ: ವಿಶೇಷ ಎಂಬಂತೆ ತಾಲೂಕಿನ ಸಜೀಪಮೂಡ ಸರಕಾರಿ ಪದವಿ ಪೂರ್ವ ಕಾಲೇಜಿನ ಪ್ರೌಢಶಾಲಾ ವಿಭಾಗದ ಒಂದೇ ಕ್ಲಾಸಿನಲ್ಲಿ 5 ಜೋಡಿ ಅವಳಿಜವಳಿ ವಿದ್ಯಾರ್ಥಿಗಳು ಇದೀಗ ಎಲ್ಲರ ಕಣ್ಣಾಗಿದ್ದಾರೆ.
ತಾಲೂಕಿನ ಸಜೀಪಮೂಡ ಸರಕಾರಿ ಪದವಿ ಪೂರ್ವ ಕಾಲೇಜಿನ ಪ್ರೌಢಶಾಲಾ ವಿಭಾಗದಲ್ಲಿ 5 ಜೋಡಿ ಅವಳಿ ಜವಳಿ ವಿದ್ಯಾರ್ಥಿಗಳು ಎಂಟನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದಾರೆ. ಅಯಿಷಾ ಝಿಬಾ-ಖತೀಝಾ ಝಿಯಾ, ಶ್ರಣವಿ-ಜಾನ್ಹವಿ, ಫಾತಿಮತ್ ಕಮಿಲ-ಫಾತಿಮತ್ ಸಮಿಲ, ಆಯಿಷಾ ರೈಫಾ- ಫಾತೀಮಾ ರೌಲ, ದುಲೈಕತ್ ರುಫಿದಾ- ಹಲೀಮತ್ ರಾಫಿದ ಒಂದೇ ತರಗತಿಯಲ್ಲಿ ಕಲಿಯುತ್ತಿರುವ ಅವಳಿ ಜವಳಿ ವಿದ್ಯಾರ್ಥಿಗಳಾಗಿದ್ದು, 5ಜೋಡಿ ಅವಳಿ ಮಕ್ಕಳಲ್ಲಿ ಒಂದು ಜೋಡಿ ಹಿಂದೂ ಸಮುದಾಯದ ಹಾಗೂ ಉಳಿದಂತೆ ನಾಲ್ಕು ಜೋಡಿ ಮಕ್ಕಳು ಮುಸ್ಲಿಂ ಸಮುದಾಯದಕ್ಕೆ ಸೇರಿದವರಾಗಿದ್ದು ಆಶ್ಛರ್ಯ ಎಂಬಂತೆ ಒಂದೇ ಶಾಲೆಯ ಒಂದೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದಾರೆ.
ಅವಳಿ ಜವಳಿ ಮಕ್ಕಳು ಹೆಚ್ಚಾಗಿ ರೂಪದಲ್ಲಿ ಮತ್ತು ಚಟುವಟಿಕೆಯಲ್ಲಿ ಒಂದೇ ಸಮನಾಗಿರುವುದರಿಂದ ಶಿಕ್ಷಕರು ಮತ್ತು ವಿದ್ಯಾರ್ಥಿಗಳು ಕೆಲವೊಮ್ಮೆ ತಬ್ಬಿಬ್ಬಗುವ ಪ್ರಸಂಗಗಳು ನಡೆಯುತ್ತಿರುತ್ತದೆ. ಒಮ್ಮೊಮ್ಮೆ ಸಹಪಾಠಿಗಳು ಪೂಲ್ ಆಗುವ ಸಂದರ್ಭಗಳು ಕೂಡ ಬಂದಿವೆಯಂತೆ. ಒಂದಿಬ್ಬರು ವಿದ್ಯಾರ್ಥಿಗಳು ಒಂದೇ ತರಗತಿಯಲ್ಲಿ ಕಂಡು ಬಂದಿರುವ ಸಂಗತಿಗಳು ಬೆಳಕಿಗೆ ಬಂದಿವೆ.ಜಿಲ್ಲೆಯ ಬೇರೆ ಬೇರೆ ಶಾಲೆಗಳಲ್ಲಿ ಈ ರೀತಿಯ ಅವಳಿ ಜವಳಿ ಮಕ್ಕಳ ಬಗ್ಗೆ ವರದಿಯಾಗಿದೆ.ಆದರೆ ಬಂಟ್ವಾಳ ತಾಲೂಕಿನಲ್ಲಿ ಬಹುಶಃ ಇದೇ ಮೊದಲ ಶಾಲೆಯಾಗಿರಬೇಕು. ಅದರಲ್ಲೂ ಈ ಐದು ಜೋಡಿ ಕೂಡ ವಿದ್ಯಾರ್ಥಿನಿಯರು ಎಂಬುದನ್ನು ಉಲ್ಲೇಖ ಮಾಡಬೇಕಾಗುತ್ತದೆ.
ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರು ಮಂಗಳೂರಿನ ಜಿಲ್ಲಾಧಿಕಾರಿ ಕಚೇರಿ ಸಂಕೀರ್ಣದಲ್ಲಿರುವ ಸಂಸದರ ಕಚೇರಿಯಲ್ಲಿ ಸಾರ್ವಜನಿಕರ ಕುಂದು-ಕೊರತೆ…
ಸ್ವಚ್ಛತೆಯ ಬಗ್ಗೆ ತಿಳಿ ಹೇಳಬೇಕಾದ ಸರಕಾರಿ ಕಚೇರಿಯ ಮುಂಭಾಗದಲ್ಲಿ ರಾಶಿ ಹಾಕಲಾದ ಕಸದ ಬಗ್ಗೆ ಸಾರ್ವಜನಿಕರು ಮಾತನಾಡುವಂತಾಗಿದೆ. ಬಿಸಿರೋಡಿನ ಪುರಸಭಾ…
ಸಂಚರಿಸುತ್ತಿದ್ದ ಲಾರಿಯೊಂದಕ್ಕೆ ಆಕಸ್ಮಿಕವಾಗಿ ಬೆಂಕಿ ತಗುಲಿ ಲಾರಿ ಬೆಂಕಿಗಾಹುತಿಯಾದ ಘಟನೆ ಮೆಲ್ಕಾರಿನಲ್ಲಿ ನಡೆದಿದೆ. ಬೆಂಗಳೂರು ಮೂಲದ ಲಾರಿ ಇದಾಗಿದ್ದು, ಮಂಗಳೂರು…
ಬಾವಿಯೊಂದರ ಹೂಳೆತ್ತುವ ಕೆಲಸ ಮುಗಿಸಿ ಮೇಲೆ ಬರುವ ವೇಳೆ ಹಗ್ಗ ಜಾರಿ ಬಿದ್ದು ಗಾಯಗೊಂಡ ಘಟನೆ ಬಂಟ್ವಾಳ ತಾಲೂಕಿನ ಕುರಿಯಾಳದ…
ಕಡೇಶಿವಾಲಯ ನೆತ್ತರ ಬಾಬು ಪೂಜಾರಿಯವರ ಮನೆಗೆ ಸಿಡಿಲು ಬಡಿದು ಹಾನಿಯಾಗಿದ್ದು ಘಟನಾ ಸ್ಥಳಕ್ಕೆ ಬಂಟ್ವಾಳ ಶಾಸಕರಾದ ರಾಜೇಶ್ ನಾೈಕ್ ಉಳಿಪಾಡಿಯವರು…
ಬಂಟ್ವಾಳ: ಸಿಡಿಲು ಬಡಿದು ಹಾನಿಗೊಳಗಾದ ಇಳಿಯೂರು ಶ್ರೀ ಮಹಾವಿಷ್ಣು ದೇವಸ್ಥಾನಕ್ಕೆ ಬಿಜೆಪಿ ಮುಖಂಡ ಸಂದೇಶ್ ಶೆಟ್ಟಿ ಅರೆಬೆಟ್ಟು ಅವರು ರಾತ್ರಿ…