ಕಾರ್ಕಳ: 5 ದಿನಗಳ ಹಿಂದೆ ಕಾಣೆಯಾಗಿದ್ದ ಯುವಕನೋರ್ವನ ಮೃತ ದೇಹ ಕೊಳೆತ ಸ್ಥಿತಿಯಲ್ಲಿ ಹೊಳೆಯಲ್ಲಿ ಪತ್ತೆಯಾಗಿದೆ. ದುರ್ಗ ಗ್ರಾಮದ ಸಂದೇಶ್ ಶೆಟ್ಟಿ ಎಂಬವರು ನಾಪತ್ತೆಯಾಗಿದ್ದ ಯುವಕ. ಇವರ ಪತ್ತೆಗೆ ಮನೆಯವರು ಹಾಗೂ ಸ್ಥಳೀಯರು ಸಾಕಷ್ಟು ಹುಡುಕಾಟ ನಡೆಸಿದರೂ ಸಂದೇಶ್ ಶೆಟ್ಟಿ ಪತ್ತೆಯಾಗಿರಲಿಲ್ಲ. ಸಂದೇಶ್ ಶೆಟ್ಟಿ ಅವರ ಶವವು ಬುಧವಾರ ಬೆಳಗ್ಗೆ ಕಾವೇರಡ್ಕ ಬಳಿಯ ಹೊಳೆಯಲ್ಲಿ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದೆ.
ಸಂದೇಶ್ ಶೆಟ್ಟಿ ನಾಪತ್ತೆ ದಿನವೇ ದುರ್ಗ ಹೊಳೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರಬಹುದೆಂದು ಅಂದಾಜಿಸಲಾಗಿದ್ದು ಭಾರೀ ಮಳೆಯ ಹಿನ್ನೆಲೆಯಲ್ಲಿ ಅವರ ಶವ ತೇಲಿಕೊಂಡು ಬಂದು ಕಾವೇರಡ್ಕ ಎಂಬಲ್ಲಿನ ಕಿಂಡಿ ಅಣೆಕಟ್ಟಿನಲ್ಲಿ ಸಿಲುಕಿಕೊಂಡಿದೆ. ಸ್ಥಳೀಯರು ಕಾರ್ಕಳ ಗ್ರಾಮಾಂತರ ಠಾಣೆಗೆ ಮಾಹಿತಿ ನೀಡಿದ್ದು ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.
ಬಂಟ್ವಾಳ ತಾಲೂಕಿನ ತೆಂಕಬೆಳ್ಳೂರು ಗ್ರಾಮದ ಕಾಗುಡ್ಡೆ ಎಂಬಲ್ಲಿ ರಾತ್ರಿ ಸುರಿದ ಭಾರೀ ಮಳೆ ಹಾಗೂ ಬಿರುಗಾಳಿಯ ಅಬ್ಬರಕ್ಕೆ ಮನೆಯ ಚಾವಣಿ…
ಬಂಟ್ವಾಳ ತಾಲೂಕಿನ ಸಜೀಪಮೂಡ ಗ್ರಾಮದ ಕೊಳಕೆ ಎಂಬಲ್ಲಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್ನಿಂದ ಸಂಭವಿಸಿದಂತಹ ಅವಘಡದಲ್ಲಿ ಮನೆಯ ಪೀಠೋಪಕರಣಗಳು ಹಾಗೂ ದಿನನಿತ್ಯ…
ವಾಷಿಂಗ್ಟನ್ ಕರ್ನಾಟಕದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಡಾ. ಯು. ಟಿ. ಖಾದರ್ ಫರೀದ್ ಅವರ ಸಾರ್ವಜನಿಕ ಸೇವೆ…
ಫಿಫಾ ವಿಶ್ವಕಪ್ 2026ರ ಫೈನಲ್ ಹಾಗೂ ಸೆಮಿಫೈನಲ್ ಪಂದ್ಯಗಳ ವೇಳೆ ನಡೆದ ಗಲಾಟೆ ಮತ್ತು ನಿಯಮ ಉಲ್ಲಂಘನೆಗಳ ಹಿನ್ನೆಲೆಯಲ್ಲಿ, ಅರ್ಜೆಂಟೀನಾ…
'ನ್ಯೂಯಾರ್ಕ್ ಟೈಮ್ಸ್' ತನ್ನ ವರದಿಯಲ್ಲಿ 'ಪಾಕಿಸ್ತಾನಿ ಕಾಶ್ಮೀರ' ಎಂದು ಉಲ್ಲೇಖಿಸಿರುವುದಕ್ಕೆ ಭಾರತ ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ. ಅಮೆರಿಕದಲ್ಲಿರುವ ಭಾರತೀಯ ರಾಯಭಾರ…
ಚೀನಾ ಪಾಕಿಸ್ತಾನದ ಮೂಲಕ ಇರಾನ್ಗೆ 400 ರಾಕೆಟ್ ಲಾಂಚರ್ಗಳನ್ನು ಪೂರೈಸಿದೆ ಎಂಬ ವರದಿಗಳು ಜಾಗತಿಕ ಆತಂಕಕ್ಕೆ ಕಾರಣವಾಗಿವೆ. ಈ ಕುರಿತು…