ಜನ ಮನದ ನಾಡಿ ಮಿಡಿತ

Advertisement

ವಿದ್ಯಾರ್ಥಿನಿಗೆ ಅಪರಿಚಿತ ಪ್ರಯಾಣಿಕನೊರ್ವ ನಿಂದ ಲೈಗಿಂಕ ಕಿರುಕುಳ

ಬಂಟ್ವಾಳ: ಕಾಲೇಜು ವಿದ್ಯಾರ್ಥಿನಿಯೋರ್ವಳಿಗೆ ಬೆಳಿಗ್ಗೆನ ಸಮಯದಲ್ಲಿ ಕಾಲೇಜಿಗೆ ಹೋಗುವ ವೇಳೆ ಬಸ್ ಹತ್ತುವಾಗ ಅಪರಿಚಿತ ಪ್ರಯಾಣಿಕನೊರ್ವ ಲೈಗಿಂಕ ಕಿರುಕುಳ ನೀಡಿದ ಘಟನೆ ನಡೆದಿದೆ.


ಬಂಟ್ವಾಳದ ಅಗ್ರಾರ್ ನಿವಾಸಿಯಾಗಿದ್ದು ಮಂಗಳೂರು ಕಾಲೇಜಿಗೆ ತೆರಳುವ ಸಮಯದಲ್ಲಿ ಬಿಸಿರೋಡು ಬಸ್ ನಿಲ್ದಾಣದಲ್ಲಿ ಈ ಘಟನೆ ನಡೆದಿದೆ ಎಂಬ ಮಾಹಿತಿ ಲಭ್ಯವಾಗಿದೆ. ವಿದ್ಯಾರ್ಥಿನಿ ಕಾಲೇಜಿಗೆ ಹೋಗುವ ಉದ್ದೇಶದಿಂದ ಕೆ.ಎಸ್.ಆರ್.ಟಿ‌.ಸಿ ಬಸ್ ಹತ್ತುವ ಸಮಯದಲ್ಲಿ ‌ಹಿಂಬದಿಯಿಂದ ಇದ್ದ ಅಪರಿಚಿತ ವ್ಯಕ್ತಿ ಲೈಂಗಿಕ ‌ಕಿರುಕುಳ ನೀಡಿದ್ದಾನೆ.

ಈ ಬಗ್ಗೆ ಪ್ರಶ್ನಿಸಿದಾಗ ಆತ ವಿದ್ಯಾರ್ಥಿನಿ ಬೆದರಿಸಿದ್ದಲ್ಲದೆ, ಮುಂದೆಯೇ ಇದೇ ರೀತಿ ಕಿರುಕುಳ ನೀಡುತ್ತೇನೆ ಏನು ಮಾಡುತ್ತಿ ಎಂದು ಹೆದರಿಸಿದ್ದಾನೆ ಎಂದು ಹೇಳಲಾಗಿದೆ. ಈ ಬಗ್ಗೆ ನಿರ್ವಾಹಕನಿಗೆ ವಿದ್ಯಾರ್ಥಿನಿ ದೂರು ನೀಡಿದ್ದು, ಪ್ರಯಾಣಿಕ ಹಾಗೂ ನಿರ್ವಾಹಕನ ನಡುವೆ ಮಾತು ಬೆಳೆದಿದೆ ಎನ್ನಲಾಗಿದೆ.


ಬಸ್ ನಲ್ಲಿ ನಡೆದ ಘಟನೆ ಬಗ್ಗೆ ಸ್ಥಳದಿಂದಲೇ ವಿದ್ಯಾರ್ಥಿನಿ ಪೋನ್ ಮಾಡಿ ಮನೆಯವರಿಗೆ ತಿಳಿಸಿದ್ದಾಳೆ. ಪೋಷಕರು ಮತ್ತು ವಿದ್ಯಾರ್ಥಿನಿ ಕೂಡಲೇ ಪೋಲೀಸ್ ಠಾಣೆಗೆ ತೆರಳಿ ದೂರು ನೀಡಿದ್ದಾರೆ ಎಂದು ಹೇಳಲಾಗಿದೆ.
ದೂರು ನೀಡಿದ ಕೂಡಲೇ ಪ್ರಕರಣ ದಾಖಲಿಸಿಕೊಂಡು, ಕಾರ್ಯಪ್ರವೃತ್ತರಾದ ನಗರ ಠಾಣಾ ಪೋಲೀಸರು ಅಪರಿಚಿತ ಆರೋಪಿಯನ್ನು ಪತ್ತೆ ಹಚ್ಚಿ ಆತನ ಮೇಲೆ ಕಾನೂನು ‌ಕ್ರಮ ಕೈಗೊಂಡಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

Leave a Reply

Your email address will not be published. Required fields are marked *

ನವದೆಹಲಿ: ಜಿರಳೆ ಹೋರಾಟಕ್ಕೆ ಕೊನೆಗೂ ಮಣಿದ ಕೇಂದ್ರ ಸರಕಾರ; ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜಿನಾಮೆ…!

ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ಭೀಕರ ದಾಳಿ…!

ಬಂಟ್ವಾಳ: ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಚೇತನ್ ಆರೋಗ್ಯದಲ್ಲಿ ಸುಧಾರಣೆ..!

ಬಂಟ್ವಾಳ: ತ್ಯಾಜ್ಯ ನಿರ್ವಹಣೆ ಸಂಪೂರ್ಣ ಹದಗೆಟ್ಟು ಸಾರ್ವಜನಿಕರಲ್ಲಿ ಆತಂಕ..!

ಮಂಗಳೂರು: ಮಂತ್ರಾಲಯದ ಬಳಿ ಭೀಕರ ಅಪಘಾತ; ಯಕ್ಷಧ್ರುವ ಪಟ್ಲ ಫೌಂಡೇಷನ್ ಕಾರ್ಯದರ್ಶಿ ರವಿ ಶೆಟ್ಟಿ ನಿಧನ…!

ಬಂಟ್ವಾಳ: ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದಲ್ಲಿ ಅಗ್ನಿ ಅವಘಡ…..!

ಬಂಟ್ವಾಳ: ಸೂರಿಕುಮೇರ್ ಪೆಟ್ರೋಲ್ ಬಂಕ್ ಸಮೀಪ ಅಪ*ಘಾತ; ಮಾನವೀಯತೆ ಮೆರೆದ ಎಸ್‌ಐ ರಾಮಕೃಷ್ಣ..!

ಮಂಗಳೂರು: ವಿವಾಹಿತ ಮಹಿಳೆಯೊಬ್ಬರು ಮನೆಯಲ್ಲಿಯೇ ನೇಣು ಬಿಗಿದು ಆತ್ಮಹ*ತ್ಯೆ..!

ವಿಟ್ಲ: ರಸ್ತೆ ಬದಿಯ ಮರಕ್ಕೆ ಡಿಕ್ಕಿಹೊಡೆದ ಟಿಪ್ಪರ್ ಲಾರಿ – ಇಬ್ಬರಿಗೆ ಗಾಯ..!

error: Content is protected !!