ಬಂಟ್ವಾಳ: ಕಾಲೇಜು ವಿದ್ಯಾರ್ಥಿನಿಯೋರ್ವಳಿಗೆ ಬೆಳಿಗ್ಗೆನ ಸಮಯದಲ್ಲಿ ಕಾಲೇಜಿಗೆ ಹೋಗುವ ವೇಳೆ ಬಸ್ ಹತ್ತುವಾಗ ಅಪರಿಚಿತ ಪ್ರಯಾಣಿಕನೊರ್ವ ಲೈಗಿಂಕ ಕಿರುಕುಳ ನೀಡಿದ ಘಟನೆ ನಡೆದಿದೆ.
ಬಂಟ್ವಾಳದ ಅಗ್ರಾರ್ ನಿವಾಸಿಯಾಗಿದ್ದು ಮಂಗಳೂರು ಕಾಲೇಜಿಗೆ ತೆರಳುವ ಸಮಯದಲ್ಲಿ ಬಿಸಿರೋಡು ಬಸ್ ನಿಲ್ದಾಣದಲ್ಲಿ ಈ ಘಟನೆ ನಡೆದಿದೆ ಎಂಬ ಮಾಹಿತಿ ಲಭ್ಯವಾಗಿದೆ. ವಿದ್ಯಾರ್ಥಿನಿ ಕಾಲೇಜಿಗೆ ಹೋಗುವ ಉದ್ದೇಶದಿಂದ ಕೆ.ಎಸ್.ಆರ್.ಟಿ.ಸಿ ಬಸ್ ಹತ್ತುವ ಸಮಯದಲ್ಲಿ ಹಿಂಬದಿಯಿಂದ ಇದ್ದ ಅಪರಿಚಿತ ವ್ಯಕ್ತಿ ಲೈಂಗಿಕ ಕಿರುಕುಳ ನೀಡಿದ್ದಾನೆ.
ಈ ಬಗ್ಗೆ ಪ್ರಶ್ನಿಸಿದಾಗ ಆತ ವಿದ್ಯಾರ್ಥಿನಿ ಬೆದರಿಸಿದ್ದಲ್ಲದೆ, ಮುಂದೆಯೇ ಇದೇ ರೀತಿ ಕಿರುಕುಳ ನೀಡುತ್ತೇನೆ ಏನು ಮಾಡುತ್ತಿ ಎಂದು ಹೆದರಿಸಿದ್ದಾನೆ ಎಂದು ಹೇಳಲಾಗಿದೆ. ಈ ಬಗ್ಗೆ ನಿರ್ವಾಹಕನಿಗೆ ವಿದ್ಯಾರ್ಥಿನಿ ದೂರು ನೀಡಿದ್ದು, ಪ್ರಯಾಣಿಕ ಹಾಗೂ ನಿರ್ವಾಹಕನ ನಡುವೆ ಮಾತು ಬೆಳೆದಿದೆ ಎನ್ನಲಾಗಿದೆ.
ಬಸ್ ನಲ್ಲಿ ನಡೆದ ಘಟನೆ ಬಗ್ಗೆ ಸ್ಥಳದಿಂದಲೇ ವಿದ್ಯಾರ್ಥಿನಿ ಪೋನ್ ಮಾಡಿ ಮನೆಯವರಿಗೆ ತಿಳಿಸಿದ್ದಾಳೆ. ಪೋಷಕರು ಮತ್ತು ವಿದ್ಯಾರ್ಥಿನಿ ಕೂಡಲೇ ಪೋಲೀಸ್ ಠಾಣೆಗೆ ತೆರಳಿ ದೂರು ನೀಡಿದ್ದಾರೆ ಎಂದು ಹೇಳಲಾಗಿದೆ.
ದೂರು ನೀಡಿದ ಕೂಡಲೇ ಪ್ರಕರಣ ದಾಖಲಿಸಿಕೊಂಡು, ಕಾರ್ಯಪ್ರವೃತ್ತರಾದ ನಗರ ಠಾಣಾ ಪೋಲೀಸರು ಅಪರಿಚಿತ ಆರೋಪಿಯನ್ನು ಪತ್ತೆ ಹಚ್ಚಿ ಆತನ ಮೇಲೆ ಕಾನೂನು ಕ್ರಮ ಕೈಗೊಂಡಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
ನೆರೆಮನೆಯ ದನಗಳು ತನ್ನ ತೋಟಕ್ಕೆ ಬಂದು ಹಾನಿಗೊಳಿಸಿವೆ ಎಂಬ ಆಕ್ರೋಶದಿಂದ ಹಟ್ಟಿಯಲ್ಲಿ ಕಟ್ಟಿಹಾಕಿದ್ದ ದನಗಳಿಗೆ ಕತ್ತಿಯಿಂದ ಕಡಿದು ಹಲ್ಲೆ ನಡೆಸಿ…
ಮಂಗಳೂರಿನಲ್ಲಿ ಮಾದಕ ವಸ್ತು ಮಾರಾಟಕ್ಕೆ ಯತ್ನಿಸಿದ ಮೂವರು ಆರೋಪಿಗಳನ್ನು ಬಂಧಿಸಲಾಗಿದೆ. ಮಂಗಳೂರು ದಕ್ಷಿಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಿಷೇಧಿತ ಮಾದಕ…
ಪುರಸಭಾ ವ್ಯಾಪ್ತಿಯ ಪಾಣೆಮಂಗಳೂರು ಎಂಬಲ್ಲಿ ನೇತ್ರಾವತಿ ನದಿಯಿಂದ ಅಕ್ರಮವಾಗಿ ಮರಳು ತೆಗೆದು ಮಾರಾಟ ಮಾಡುತ್ತಿದ್ದಾರೆ ಎಂದು ಆರೋಪ ವ್ಯಕ್ತಪಡಿಸಿ, ಇವರ…
ಖಾಸಗಿ ಸಂಸ್ಥೆಗಳಿಗೆ ಸಂಬಂಧಿಸಿದಂತೆ ಶಾಲಾ ಮಕ್ಕಳನ್ನು ಕರೆದುಕೊಂಡು ಹೋಗುವ ಸ್ಕೂಲ್ ಬಸ್ಗಳು ಕಾನೂನು ಮತ್ತು ನಿಯಮಗಳನ್ನು ಪಾಲಿಸುತ್ತಿದೆಯಾ ಎಂಬ ಬಗ್ಗೆ…
ಕೆಲ ದಿನಗಳಿಂದ ಸುರಿಯುತ್ತಿರುವ ಮಳೆಗೆ ಪಾಣೆಮಂಗಳೂರು ಫ್ಲೈಓವರ್ ಪಕ್ಕದ ಕಲ್ಲುರ್ಟಿ ಸನ್ನಿಧಿಯ ಬಳಿಯಿಂದ ಹಳೇ ಸೇತುವೆ ಕಡೆಗೆ ಸಾಗುವ ದಾರಿಯ…
ಹೆಬ್ರಿ ಸಮೀಪದ ಹೊಸೂರು ಎಂಬಲ್ಲಿ ಇಸ್ಪೀಟ್ ಜೂಜಾಟ ನಡೆಸುತ್ತಿದ್ದ ಆರೋಪದಲ್ಲಿ ಏಳು ಮಂದಿಯನ್ನು ಹೆಬ್ರಿ ಪೊಲೀಸರು ಬಂಧಿಸಿದ್ದಾರೆ. ಜೂಜಾಟ ನಡೆಯುತ್ತಿರುವ…