ಬಂಟ್ವಾಳ: ಕಾಲೇಜು ವಿದ್ಯಾರ್ಥಿನಿಯೋರ್ವಳಿಗೆ ಬೆಳಿಗ್ಗೆನ ಸಮಯದಲ್ಲಿ ಕಾಲೇಜಿಗೆ ಹೋಗುವ ವೇಳೆ ಬಸ್ ಹತ್ತುವಾಗ ಅಪರಿಚಿತ ಪ್ರಯಾಣಿಕನೊರ್ವ ಲೈಗಿಂಕ ಕಿರುಕುಳ ನೀಡಿದ ಘಟನೆ ನಡೆದಿದೆ.
ಬಂಟ್ವಾಳದ ಅಗ್ರಾರ್ ನಿವಾಸಿಯಾಗಿದ್ದು ಮಂಗಳೂರು ಕಾಲೇಜಿಗೆ ತೆರಳುವ ಸಮಯದಲ್ಲಿ ಬಿಸಿರೋಡು ಬಸ್ ನಿಲ್ದಾಣದಲ್ಲಿ ಈ ಘಟನೆ ನಡೆದಿದೆ ಎಂಬ ಮಾಹಿತಿ ಲಭ್ಯವಾಗಿದೆ. ವಿದ್ಯಾರ್ಥಿನಿ ಕಾಲೇಜಿಗೆ ಹೋಗುವ ಉದ್ದೇಶದಿಂದ ಕೆ.ಎಸ್.ಆರ್.ಟಿ.ಸಿ ಬಸ್ ಹತ್ತುವ ಸಮಯದಲ್ಲಿ ಹಿಂಬದಿಯಿಂದ ಇದ್ದ ಅಪರಿಚಿತ ವ್ಯಕ್ತಿ ಲೈಂಗಿಕ ಕಿರುಕುಳ ನೀಡಿದ್ದಾನೆ.
ಈ ಬಗ್ಗೆ ಪ್ರಶ್ನಿಸಿದಾಗ ಆತ ವಿದ್ಯಾರ್ಥಿನಿ ಬೆದರಿಸಿದ್ದಲ್ಲದೆ, ಮುಂದೆಯೇ ಇದೇ ರೀತಿ ಕಿರುಕುಳ ನೀಡುತ್ತೇನೆ ಏನು ಮಾಡುತ್ತಿ ಎಂದು ಹೆದರಿಸಿದ್ದಾನೆ ಎಂದು ಹೇಳಲಾಗಿದೆ. ಈ ಬಗ್ಗೆ ನಿರ್ವಾಹಕನಿಗೆ ವಿದ್ಯಾರ್ಥಿನಿ ದೂರು ನೀಡಿದ್ದು, ಪ್ರಯಾಣಿಕ ಹಾಗೂ ನಿರ್ವಾಹಕನ ನಡುವೆ ಮಾತು ಬೆಳೆದಿದೆ ಎನ್ನಲಾಗಿದೆ.
ಬಸ್ ನಲ್ಲಿ ನಡೆದ ಘಟನೆ ಬಗ್ಗೆ ಸ್ಥಳದಿಂದಲೇ ವಿದ್ಯಾರ್ಥಿನಿ ಪೋನ್ ಮಾಡಿ ಮನೆಯವರಿಗೆ ತಿಳಿಸಿದ್ದಾಳೆ. ಪೋಷಕರು ಮತ್ತು ವಿದ್ಯಾರ್ಥಿನಿ ಕೂಡಲೇ ಪೋಲೀಸ್ ಠಾಣೆಗೆ ತೆರಳಿ ದೂರು ನೀಡಿದ್ದಾರೆ ಎಂದು ಹೇಳಲಾಗಿದೆ.
ದೂರು ನೀಡಿದ ಕೂಡಲೇ ಪ್ರಕರಣ ದಾಖಲಿಸಿಕೊಂಡು, ಕಾರ್ಯಪ್ರವೃತ್ತರಾದ ನಗರ ಠಾಣಾ ಪೋಲೀಸರು ಅಪರಿಚಿತ ಆರೋಪಿಯನ್ನು ಪತ್ತೆ ಹಚ್ಚಿ ಆತನ ಮೇಲೆ ಕಾನೂನು ಕ್ರಮ ಕೈಗೊಂಡಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
ದೇಶಾದ್ಯಂತ ವ್ಯಾಪಕ ಸಂಚಲನ ಮೂಡಿಸಿದ್ದ ನೀಟ್-ಯುಜಿ (NEET-UG) ಪರೀಕ್ಷಾ ಅಕ್ರಮ ಹಾಗೂ ದೆಹಲಿಯ ಜಂತರ್ ಮಂತರ್ನಲ್ಲಿ ವಿದ್ಯಾರ್ಥಿಗಳು ನಡೆಸುತ್ತಿರುವ ತೀವ್ರ…
ನಗರದ ಲಾಲ್ಬಾಗ್ ಸಿಗ್ನಲ್ ಸಮೀಪ ಶನಿವಾರ ಮಧ್ಯಾಹ್ನ ಸಾರ್ವಜನಿಕರ ಕಣ್ಣೆದುರಲ್ಲೇ ಭೀಕರ ಮಾರಕಾಸ್ತ್ರ ದಾಳಿ ನಡೆದಿದ್ದು, ಪ್ರಸಿದ್ಧ ರೌಡಿಶೀಟರ್ ಒಬ್ಬ…
ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಚೇತನ್ ಐಸಿಯುವಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಇದೀಗ ಆತನ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದೆ. ವಿಷಸೇವನೆ…
ಬಂಟ್ವಾಳ ಪುರಸಭೆ ವ್ಯಾಪ್ತಿಯಲ್ಲಿ ತ್ಯಾಜ್ಯ ನಿರ್ವಹಣೆ ಸಂಪೂರ್ಣ ಹದಗೆಟ್ಟಿದ್ದು, ಸಾರ್ವಜನಿಕರ ಆರೋಗ್ಯ ಹಾಗೂ ಪರಿಸರದ ಮೇಲೆ ಗಂಭೀರ ಪರಿಣಾಮ ಬೀರುವ…
ಯಕ್ಷಧ್ರುವ ಪಟ್ಲ ಫೌಂಡೇಷನ್ ಮಂಗಳೂರು ಇದರ ಜೊತೆ ಕಾರ್ಯದರ್ಶಿ ರವಿ ಶೆಟ್ಟಿ ಅಶೋಕ್ ನಗರ ಅಪಘಾತದಿಂದ ಮಂಗಳವಾರ (ಜು.21) ಮುಂಜಾನೆ…
ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದ ದಾಸೋಟ್ಟು-ಕುಕ್ಕಾಜೆ ನಿವಾಸಿ ರಮೇಶ್ ಪೂಜಾರಿ ಅವರ ಮನೆಯ ಹಿಂಭಾಗಕ್ಕೆ ಹೊಂದಿಕೊಂಡಿದ್ದ ಬಚ್ಚಲು ಮನೆ ಹಾಗೂ…