ಜನ ಮನದ ನಾಡಿ ಮಿಡಿತ

Advertisement

ನವ ಭಾರತ್ ಯುವಕ ಸಂಘ (ರಿ) ಅನಂತಾಡಿ ಇದರ ವತಿಯಿಂದ ಅ.8 ರ0ದು “ಕೆಸರ್ದ ಕಂಡೋಡು ಕುಸಲ್ದ ಗೊಬ್ಬುಲು” ಕಾರ್ಯಕ್ರಮ

ನವ ಭಾರತ್ ಯುವಕ ಸಂಘ (ರಿ) ಅನಂತಾಡಿ ಇದರ ವತಿಯಿಂದ “ಕೆಸರ್ದ ಕಂಡೋಡು ಕುಸಲ್ದ ಗೊಬ್ಬುಲು” ಕ್ರೀಡಾಕೂಟವು ಅನಂತಾಡಿ ಗ್ರಾಮದ ಪಡಿಪ್ಪಿರೆ ಎಂಬಲ್ಲಿ ಅ.8 ರ ಆದಿತ್ಯವಾರದ0ದು ಸಂಘದ ಅಧ್ಯಕ್ಷರಾದ ಚಿತ್ತರಂಜನ್ ಪಡಿಪ್ಪಿರೆ ಇವರ ಅಧ್ಯಕ್ಷತೆಯಲ್ಲಿ ಜರಗಲಿರುವುದು.

ಕಾರ್ಯಕ್ರಮದ ಉದ್ಘಾಟನೆಯನ್ನು ಶ್ರೀ ಉಳ್ಳಾಲ್ತಿ ದೇವಸ್ಥಾನ ಅನಂತಾಡಿ ಇದರ ಆಡಳಿತ ಮುಕ್ತೆಸ್ಥರಾದ ನರೇಂದ್ರ ರೈ ನೆಲ್ತೋಟು ಮಾಡಲಿದ್ದು, ಕ್ರೀಡಾ ಜ್ಯೋತಿಯ ಚಾಲನೆಯನ್ನು ಉಳ್ಳಾಲ್ತಿ ದೇವಸ್ಥಾನ ಅರ್ಚಕರಾದ ಗೋಪಾಲಕೃಷ್ಣ ಬನ್ನಿ೦ತಾಯ ನೆರವೇರಿಸಲಿದ್ದು, ಶಿಕ್ಷಕ ಗೋಪಾಲಕೃಷ್ಣ ನೆರಳಕಟ್ಟೆ ಧ್ವಜಾರೋಹಣ ಮಾಡಲಿರುವರು. ಕೆಸರುಗದ್ದೆ ಉದ್ಘಾಟನೆಯನ್ನು ದಕ್ಷಿಣ ಕನ್ನಡ ಜಿಲ್ಲಾ ಸಹಕಾರಿ ನೌಕರ ಸಂಘದ ಮಾಜಿ ಅಧ್ಯಕ್ಷರಾದ ಸಂಜೀವ ಪೂಜಾರಿ ಹಾಗೂ ದೈವ ಪರಿಚಾರಕರಾದ ವಿಟ್ಟಲ ಪೋಯ್ಯ ಮಾಡಲಿರುವರು.

ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ತುಳುನಾಡ ಸಾಂಸ್ಕೃತಿಕ ಚಿಂತಕರಾದ ತಮ್ಮಣ್ಣ ಶೆಟ್ಟಿ, ಅನಂತಾಡಿ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಸುಜಾತ ಸುರೇಶ್, ಮಾಣಿ ವಿದ್ಯಾವರ್ಧಕ ಸಂಘದ ಅಧ್ಯಕ್ಷರಾದ ಕಿರಣ್ ಹೆಗ್ಡೆ, ಚಲನಚಿತ್ರ ನಟ ಚೇತನ್ ರೈ ಮಾಣಿ, ಶಿಕ್ಷಕ ವೆಂಕಟೇಶ್ ಬಂಟ್ರಿಂಜ, ವಕೀಲರಾದ ರಮೇಶ್ ಮಠದಮೂಲೆ, ದೈವ ಪರಿಚಾರಕರುಗಳಾದ ರುಕ್ಮಯ ಗೌಡ ನಡುಮನೆ, ಲಕ್ಷ್ಮಣ ಪೂಜಾರಿ ಬಾಕಿಲ, ಪದ್ಮನಾಭ ಪೂಜಾರಿ ಇಡೆಮುಂಡೆವು, ಚಿದಾನಂದ ಗೌಡ ತಾಳಿಪಡುಪು, ರಾಮಣ್ಣ ಗೌಡ ಮಾಣಿ, ಬಾಲಪ್ಪ ಪೊಯ್ಯೇ, ಮೊದಲಾದವರು ಉಪಸ್ಥಿತರಿರುವರು.

ವಿಶೇಷ ಗೌರವಿತ ಆಹ್ವಾನಿತರಾಗಿ ಬಂಟ್ವಾಳ ಶಾಸಕರಾದ ರಾಜೇಶ್ ನಾಯಕ್, ಪುತ್ತೂರು ಶಾಸಕರಾದ ಅಶೋಕ್ ಕುಮಾರ್ ರೈ, ಮಾಜಿ ಸಚಿವರಾದ ರಮನಾಥ ರೈ, ಹಿಂದೂ ಮುಖಂಡ ಅರುಣ್ ಕುಮಾರ್ ಪುತ್ತಿಲ, ಭಾಗವಹಿಸಲಿರುವರು. ಕಾರ್ಯಕ್ರಮದಲ್ಲಿ 2023 ನೇ ಸಾಲಿನ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ ಪುರಸ್ಕೃತ ಗೋಪಾಲಕೃಷ್ಣ ನೆರಳಕಟ್ಟೆ, ನೆರಳಕಟ್ಟೆ ಸಹಕಾರಿ ಬ್ಯಾಂಕಿನ ನಿವೃತ್ತ ಪ್ರಬಂಧಕರಾದ ಸಂಜೀವ ಪೂಜಾರಿ, ನಿವೃತ್ತ ಮುಖ್ಯ ಶಿಕ್ಷಕಿ ಸುಂದರಿ ಅಶ್ವತಡಿ, ನಿವೃತ್ತ ಶಿಕ್ಷಕಿ ಅಮ್ಮತಾಯಿ, ಅನಂತಾಡಿ ಶಾಲೆಯ ವರ್ಗಾಯಿತ ಶಿಕ್ಷಕ ರಾಧಾಕೃಷ್ಣ ಮೂಲ್ಯ, ಯುವ ಕಂಬಲ ಓಟಗಾರ ರಾಜೇಶ್ ಅನಂತಾಡಿ, ಮಹಮ್ಮದ್ ಶರೀಫ್ ಮಜಲಹಿತ್ತಿಲು ಇವರುಗಳನ್ನು ಅಭಿನಂದಿಸಲಾಗುವುದು. ಹಾಗೂ ಸಂಘದ ಗೌರವ ಸಲಹೆಗಾರರಾಗಿದ್ದು ಕಳೆದ ತಿಂಗಳು ಅಗಲಿದ ದಿವಂಗತ ತೀರ್ಥ ಪ್ರಸಾದ್ ಕೊಂಗಲಾಯಿ ಯವರಿಗೆ ಸಂಘದ ವತಿಯಿಂದ ಪುಷ್ಪ ನಮನದ ಮೂಲಕ ಗೌರವಾರ್ಪಣೆ ನೆರವೇರಲಿರುವುದು ಎಂದು ಕಾರ್ಯಕ್ರಮದ ಸಂಘಟಕರು ತಿಳಿಸಿರುತ್ತಾರೆ.

Leave a Reply

Your email address will not be published. Required fields are marked *

ಬಂಟ್ವಾಳ: ಪಾಣೆಮಂಗಳೂರು ಹಳೆಯ ಸೇತುವೆ ಮೇಲೆ ರಿಕ್ಷಾ ನಿಲ್ಲಿಸಿ ಚಾಲಕ ಕಾಣೆ..!

ಬಂಟ್ವಾಳ: ಬಂಟ್ವಾಳ ತಾಲೂಕಿನ ತುಂಬೆ ಗ್ರಾಮದ ಚೆನ್ನಕೇಶವ ನಾಪತ್ತೆ

ಬಂಟ್ವಾಳ: ಕಾಮಗಾರಿಯ ಪ್ರಗತಿಯ ಕುರಿತು ಪುರಸಭಾ ಜನಪ್ರತಿನಿಧಿಗಳ ಸಭೆ….!

ಬಂಟ್ವಾಳ: ಬಂಟ್ವಾಳ ತಾಲೂಕಿನ ಕೇಪು ಗ್ರಾಮ ಪಂಚಾಯಿತಿಗೆ ಕಿಶೋರ್ ಕುಮಾರ್ ಭೇಟಿ…!

ಬಂಟ್ವಾಳ: ಕಾರು ಮೇಲ್ಸೇತುವೆಗೆ ಡಿ*ಕ್ಕಿ; ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಚಾಲಕ…!

ಮಂಗಳೂರು: ಆಟವಾಡುತ್ತಾ 15 ಅಡಿ ಆಳದ ನೀರಿದ್ದ ಬಾವಿಗೆ ಬಿದ್ದ ಹೆಣ್ಣು ಮಗು….!

ಮಂಗಳೂರು: ಕಲ್ಲಡ್ಕ ಪ್ರಭಾಕರ್ ಭಟ್ ಅವರ ಭಾಷಣದ ಬಗ್ಗೆ ಪ್ರತಿಕ್ರಿಯೆ ನೀಡಿದ ಸಿಎಂ..!

ಬಂಟ್ವಾಳ: ಶ್ರೀರಾಮ ಜನ್ಮ ಭೂಮಿ ಅಯೋಧ್ಯೆಯಲ್ಲಿ “ಶ್ರೀರಾಮನ ಚರಿತ್ರೆಯ” ಯಕ್ಷಗಾನ….!

ಮಂಗಳೂರು: ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ’ ಕೃತಿ ಬಿಡುಗಡೆ..!

error: Content is protected !!