ಜನ ಮನದ ನಾಡಿ ಮಿಡಿತ

Advertisement

ಕೋಮು ಪ್ರಚೋದನೆಗೆ ಕಡಿವಾಣ : ಮೂಡಬಿದಿರೆ ಇನ್ಸ್ಪೆಕ್ಟರ್ ಕಡಕ್ ಸಂದೇಶ

ಮೂಡಬಿದಿರೆಯಲ್ಲಿ ಶಾಂತಿ ಭಂಗ ಉಂಟು ಮಾಡುವ ಕೋಮುವಾದಿಗಳ ಯತ್ನಕ್ಕೆ ಮೂಡಬಿದಿರೆ ಇನ್ಸ್ಪೆಕ್ಟರ್ ಕಡಕ್ ಸಂದೇಶ ರವಾನಿಸಿದ್ದಾರೆ.

ಈ ಮೂಲಕ ಶಾಂತಿಪ್ರಿಯ ಜನರ ಪಾಲಿಗೆ ಹೀರೋ ಆಗಿ ಕಂಡಿದ್ದಾರೆ ಇನ್ಸ್ಪೆಕ್ಟರ್. ಕಳೆದ ಎರಡ್ಮೂರು ದಿನಗಳಿಂದ ಸಾಮಾಜಿಕ ಜಾಲತಾಣಗಳಲ್ಲಿ ಇನ್ಸ್ಪೆಕ್ಟರ್ ಸಂದೇಶ್ ಅವರು ಸಾರ್ವಜನಿಕ ಸ್ಥಳದಲ್ಲಿ ಅಶಾಂತಿಗೆ ಕಾರಣವಾಗುತ್ತಿದ್ದ ಹಸಿರು ಧ್ವಜವೊಂದನ್ನು ತೆರವುಗೊಳಿಸುವ ಮತ್ತು ಕ್ರಮಕೈಗೊಳ್ಳದ ಪಂಚಾಯತ್ ಅಭಿವೃದ್ಧಿ ಅಧಿಕಾರಿಯನ್ನು ತರಾಟೆಗೆ ತೆಗೆದುಕೊಳ್ಳುವ ವೀಡಿಯೋ ಸಾಕಷ್ಟು ವೈರಲ್ ಆಗಿದೆ.

ಮೂಡುಬಿದಿರೆ ಸಮೀಪದ ಪುಚ್ಚಮೊಗರಿನ ಶಾಂತಿರಾಜ ಕಾಲನಿಯಲ್ಲಿ ಕಟ್ಟೆಯೊಂದರಲ್ಲಿ ಹಸಿರು ಧ್ವಜ ಹಾಕಿ ಹೋಗಿದ್ದರು. ಈ ಮೂಲಕ ಈ ಭಾಗದ ಶಾಂತಿಪ್ರಿಯ ಜನರ ಶಾಂತಿ ಕೆಡಿಸಲೆತ್ನಿಸಿದ್ದರು. ಈ ಬಗ್ಗೆ ಮಾಹಿತಿ ಪಡೆದುಕೊಂಡು ಸ್ಥಳಕ್ಕೆ ಇನ್ಸ್ಪೆಕ್ಟರ್ ಸಂದೇಶ್ ಅವರು ತೆರಳಿದ್ದಾರೆ. ಆ ಧ್ವಜವನ್ನು ತೆರವುಗೊಳಿಸಿದ್ದಾರೆ. ಮಾತ್ರವಲ್ಲದೆ ಕ್ರಮ ಕೈಗೊಳ್ಳದ ಪಿ.ಡಿ.ಒ ರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಮೂಡುಬಿದಿರೆಯ ಸ್ವರಾಜ್ಯ ಮೈದಾನದಲ್ಲಿಯೂ ಹಾಕಲಾದ ಕೇಸರಿ ಧ್ವಜವನ್ನು ಪುರಸಭಾ ಸಹಕಾರದೊಂದಿಗೆ ಸಾರ್ವಜನಿಕ ದೂರಿನ ಮೇರೆಗೆ ತೆರವುಗೊಳಿಸಿದ್ದಾರೆ. ಈ ಮೂಲಕ ಸಾರ್ವಜನಿಕ ಸೌಹಾರ್ದತೆಗೆ ಮೆಚ್ಚುಗೆಯ ನಡೆ ತೋರಿದ್ದಾರೆ.

Leave a Reply

Your email address will not be published. Required fields are marked *

ಮಂಗಳೂರು: ಆಟವಾಡುತ್ತಾ 15 ಅಡಿ ಆಳದ ನೀರಿದ್ದ ಬಾವಿಗೆ ಬಿದ್ದ ಹೆಣ್ಣು ಮಗು….!

ಮಂಗಳೂರು: ಕಲ್ಲಡ್ಕ ಪ್ರಭಾಕರ್ ಭಟ್ ಅವರ ಭಾಷಣದ ಬಗ್ಗೆ ಪ್ರತಿಕ್ರಿಯೆ ನೀಡಿದ ಸಿಎಂ..!

ಬಂಟ್ವಾಳ: ಶ್ರೀರಾಮ ಜನ್ಮ ಭೂಮಿ ಅಯೋಧ್ಯೆಯಲ್ಲಿ “ಶ್ರೀರಾಮನ ಚರಿತ್ರೆಯ” ಯಕ್ಷಗಾನ….!

ಮಂಗಳೂರು: ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ’ ಕೃತಿ ಬಿಡುಗಡೆ..!

ಬಂಟ್ವಾಳ: ಜೋರಾದ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿ..!

ಉಡುಪಿ: ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಮೋಸ ಮಾಡಿದ ಮಹಿಳೆ..!

ದುಬೈ: ಅಕ್ಟೋಬರ್ 25 ರಂದು ದುಬೈನಲ್ಲಿ ದುಬೈ ಗಡಿನಾಡ ಉತ್ಸವ

ಮಂಗಳೂರು: ಅಶೋಕ ಜನಮನ ಕಾರ್ಯಕ್ರಮ ಆಯೋಜನೆ; ನೂಕು ನುಗ್ಗಲು ಉಂಟಾಗಿ ಅಸ್ವಸ್ಥರಾದ 11ಕ್ಕೂ ಹೆಚ್ಚು ಜನ…!

ಬಂಟ್ವಾಳ: ದ.ಕ.ಜಿಲ್ಲಾ ತುಳು ನಾಟಕ ಕಲಾವಿದರ ಒಕ್ಕೂಟ ವಾರ್ಷಿಕ ಮಹಾಸಭೆ; ನೂತನ ಅಧ್ಯಕ್ಷರಾಗಿ ಕಿಶೋರ್ ಡಿ.ಶೆಟ್ಟಿ ಪುನರಾಯ್ಕೆ….!

error: Content is protected !!