ಜನ ಮನದ ನಾಡಿ ಮಿಡಿತ

Advertisement

ಕೋಮು ಪ್ರಚೋದನೆಗೆ ಕಡಿವಾಣ : ಮೂಡಬಿದಿರೆ ಇನ್ಸ್ಪೆಕ್ಟರ್ ಕಡಕ್ ಸಂದೇಶ

ಮೂಡಬಿದಿರೆಯಲ್ಲಿ ಶಾಂತಿ ಭಂಗ ಉಂಟು ಮಾಡುವ ಕೋಮುವಾದಿಗಳ ಯತ್ನಕ್ಕೆ ಮೂಡಬಿದಿರೆ ಇನ್ಸ್ಪೆಕ್ಟರ್ ಕಡಕ್ ಸಂದೇಶ ರವಾನಿಸಿದ್ದಾರೆ.

ಈ ಮೂಲಕ ಶಾಂತಿಪ್ರಿಯ ಜನರ ಪಾಲಿಗೆ ಹೀರೋ ಆಗಿ ಕಂಡಿದ್ದಾರೆ ಇನ್ಸ್ಪೆಕ್ಟರ್. ಕಳೆದ ಎರಡ್ಮೂರು ದಿನಗಳಿಂದ ಸಾಮಾಜಿಕ ಜಾಲತಾಣಗಳಲ್ಲಿ ಇನ್ಸ್ಪೆಕ್ಟರ್ ಸಂದೇಶ್ ಅವರು ಸಾರ್ವಜನಿಕ ಸ್ಥಳದಲ್ಲಿ ಅಶಾಂತಿಗೆ ಕಾರಣವಾಗುತ್ತಿದ್ದ ಹಸಿರು ಧ್ವಜವೊಂದನ್ನು ತೆರವುಗೊಳಿಸುವ ಮತ್ತು ಕ್ರಮಕೈಗೊಳ್ಳದ ಪಂಚಾಯತ್ ಅಭಿವೃದ್ಧಿ ಅಧಿಕಾರಿಯನ್ನು ತರಾಟೆಗೆ ತೆಗೆದುಕೊಳ್ಳುವ ವೀಡಿಯೋ ಸಾಕಷ್ಟು ವೈರಲ್ ಆಗಿದೆ.

ಮೂಡುಬಿದಿರೆ ಸಮೀಪದ ಪುಚ್ಚಮೊಗರಿನ ಶಾಂತಿರಾಜ ಕಾಲನಿಯಲ್ಲಿ ಕಟ್ಟೆಯೊಂದರಲ್ಲಿ ಹಸಿರು ಧ್ವಜ ಹಾಕಿ ಹೋಗಿದ್ದರು. ಈ ಮೂಲಕ ಈ ಭಾಗದ ಶಾಂತಿಪ್ರಿಯ ಜನರ ಶಾಂತಿ ಕೆಡಿಸಲೆತ್ನಿಸಿದ್ದರು. ಈ ಬಗ್ಗೆ ಮಾಹಿತಿ ಪಡೆದುಕೊಂಡು ಸ್ಥಳಕ್ಕೆ ಇನ್ಸ್ಪೆಕ್ಟರ್ ಸಂದೇಶ್ ಅವರು ತೆರಳಿದ್ದಾರೆ. ಆ ಧ್ವಜವನ್ನು ತೆರವುಗೊಳಿಸಿದ್ದಾರೆ. ಮಾತ್ರವಲ್ಲದೆ ಕ್ರಮ ಕೈಗೊಳ್ಳದ ಪಿ.ಡಿ.ಒ ರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಮೂಡುಬಿದಿರೆಯ ಸ್ವರಾಜ್ಯ ಮೈದಾನದಲ್ಲಿಯೂ ಹಾಕಲಾದ ಕೇಸರಿ ಧ್ವಜವನ್ನು ಪುರಸಭಾ ಸಹಕಾರದೊಂದಿಗೆ ಸಾರ್ವಜನಿಕ ದೂರಿನ ಮೇರೆಗೆ ತೆರವುಗೊಳಿಸಿದ್ದಾರೆ. ಈ ಮೂಲಕ ಸಾರ್ವಜನಿಕ ಸೌಹಾರ್ದತೆಗೆ ಮೆಚ್ಚುಗೆಯ ನಡೆ ತೋರಿದ್ದಾರೆ.

Leave a Reply

Your email address will not be published. Required fields are marked *

ಮಂಗಳೂರು: ಮಂತ್ರಾಲಯದ ಬಳಿ ಭೀಕರ ಅಪಘಾತ; ಯಕ್ಷಧ್ರುವ ಪಟ್ಲ ಫೌಂಡೇಷನ್ ಕಾರ್ಯದರ್ಶಿ ರವಿ ಶೆಟ್ಟಿ ನಿಧನ…!

ಬಂಟ್ವಾಳ: ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದಲ್ಲಿ ಅಗ್ನಿ ಅವಘಡ…..!

ಬಂಟ್ವಾಳ: ಸೂರಿಕುಮೇರ್ ಪೆಟ್ರೋಲ್ ಬಂಕ್ ಸಮೀಪ ಅಪ*ಘಾತ; ಮಾನವೀಯತೆ ಮೆರೆದ ಎಸ್‌ಐ ರಾಮಕೃಷ್ಣ..!

ಮಂಗಳೂರು: ವಿವಾಹಿತ ಮಹಿಳೆಯೊಬ್ಬರು ಮನೆಯಲ್ಲಿಯೇ ನೇಣು ಬಿಗಿದು ಆತ್ಮಹ*ತ್ಯೆ..!

ವಿಟ್ಲ: ರಸ್ತೆ ಬದಿಯ ಮರಕ್ಕೆ ಡಿಕ್ಕಿಹೊಡೆದ ಟಿಪ್ಪರ್ ಲಾರಿ – ಇಬ್ಬರಿಗೆ ಗಾಯ..!

ಮಾಣಿ: ಮರ ಬಿದ್ದು ಟ್ರಾನ್ಸ್ ಫಾರ್ಮರ್‌ಗೆ ಹಾನಿ; ರಸ್ತೆ ಮೇಲೆ ಮರ ಸಹಿತ ಮುರಿದುಬಿದ್ದು ಸಂಚಾರ ಬಂದ್…!

ಗೋಳಿತ್ತೊಟ್ಟು: ಚಲಿಸುತ್ತಿದ್ದ ಕಾರಿಗೆ ಏಕಾಏಕಿ ಬೆಂಕಿ; ಪ್ರಯಾಣಿಕರು ಅಪಾಯದಿಂದ ಪಾರು…!

ಬಂಟ್ವಾಳ: ಭಾರೀ ಗಾಳಿ ಮಳೆಗೆ ಧರೆಗುರುಳಿದ ವಿದ್ಯುತ್ ಕಂಬಗಳು..!

ಉಪ್ಪಿನಂಗಡಿ: ನಕಲಿ 500 ನೋಟು ಮಾದರಿ ಮುದ್ರಣ ಪ್ರಕರಣ, 7 ಮಂದಿ ವಶ….!

error: Content is protected !!